ಉಡುಪಿ: ಕಾರು-ಸ್ಕೂಟರ್ ನಡುವೆ ಅಪಘಾತ

ಸಮಗ್ರ ನ್ಯೂಸ್ : ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

. Ad Widget . Ad Widget

ಆರೂರಿನ ರಾಕೇಶ್ ಅವರು ಸ್ಕೂಟರ್‌ನಲ್ಲಿ ಜೋಡುಕಟ್ಟೆಯಿಂದ ಬ್ರಹ್ಮಗಿರಿ ಕಡೆಗೆ ತೆರಳುತ್ತಿದ್ದಾಗ ಕಾರಿನ ಚಾಲಕಿ ರಮಿತಾ ಅವರು ತನ್ನ ಕಾರನ್ನು ಬ್ರಹ್ಮಗಿರಿ ಕಡೆಯಿಂದ ಚಲಾಯಿಸಿಕೊಂಡು ಬಂದು ಹುತಾತ್ಮರ ಸ್ಮಾರಕದ ಬಳಿ ಹಠಾತ್ ಯು ಟರ್ನ್ ಮಾಡಿದ ಪರಿಣಾಮ ಸ್ಕೂಟರ್ ಸವಾರ ಬಿದ್ದು ಗಾಯಗೊಂಡರು.

. Ad Widget . . Ad Widget . Ad Widget

ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Comment

Your email address will not be published. Required fields are marked *