ದುಬಾರೆ ಬಳಿ ಪ್ರವಾಸಿಗರ ಕಾರಿನ ಮೇಲೆ ಕಾಡಾನೆ ದಾಳಿ| ಅಪಾಯದಿಂದ ಪಾರು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ದುಬಾರೆ ಸಮೀಪ ಪ್ರವಾಸಿಗರಿದ್ದ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿರುವ ಘಟನೆ ಇಂದು (ಮಾ.21) ಬೆಳಗ್ಗೆ ನಡೆದಿದೆ.

Ad Widget ... ..

ಕಾಡಾನೆಯ ಲಗ್ಗೆಯಿಂದ ಕಾರಿಗೆ ಹಾನಿಯಾಗಿದ್ದು, ಅದರಲ್ಲಿದ್ದ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆ ಸಂಭಂದ ಅರಣ್ಯ ಇಲಾಖೆ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *