ಸಮಗ್ರ ನ್ಯೂಸ್ : ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜೈಲಿನಿಂದಲೇ ಎಲ್ಲಾ ಶಾಸಕರಿಗೆ ಸಂದೇಶವನ್ನು ರವಾನಿಸಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಪತ್ನಿ ಸುನಿತಾ ಕೇಜ್ರಿವಾಲ್ ಅವರು ಈ ಪತ್ರವನ್ನು ಮಾಧ್ಯಮಗಳ ಮುಂದೆ ಓದಿದ್ದಾರೆ. ನಾನು ಜೈಲಿನಲ್ಲಿರುವ ಕಾರಣ ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಬೇಕು ಎಂದಿದ್ದಾರೆ.
ನಾನು ಜೈಲಿನಲ್ಲಿ ಇದ್ದೇನೆ ಎಂದು ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಪ್ರದೇಶಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಚರ್ಚಿಸಿ ಅವುಗಳನ್ನು ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.







