ಲ್ಯಾಂಡಿಂಗ್ ವೇಳೆ ಗಿರಗಿರನೆ ತಿರುಗಿದ ಹೆಲಿಕಾಪ್ಟರ್‌| ತುರ್ತು ಭೂಸ್ಪರ್ಶ…!

ಸಮಗ್ರ ನ್ಯೂಸ್: ಕೇದಾರನಾಥ ದೇವಾಲಯದ ಹೆಲಿಪ್ಯಾಡ್‌ನಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಿದೆ. ಆರು ಯಾತ್ರಾರ್ಥಿಗಳು ಮತ್ತು ಪೈಲಟ್ ಸೇರಿ ಏಳು ಜನರನ್ನು ಹೊತ್ತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದು, ಇಂದು ದೊಡ್ಡ ಅಪಘಾತ ತಪ್ಪಿದೆ.

Ad Widget ... ..

ಇಂದು ಮುಂಜಾನೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಹೆಲಿಕಾಪ್ಟರ್‌ ಸಿರ್ಸಿ ಹೆಲಿಪ್ಯಾಡ್‌ನಿಂದ ಕೇದಾರನಾಥಕ್ಕೆ ಟೇಕಾಫ್‌ ಆಗಿತ್ತು. ಮಾರ್ಗ ಮಧ್ಯದಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದ್ದು, ಪೈಲಟ್‌ ತೆಗೆದುಕೊಂಡ ತ್ವರಿತ ನಿರ್ಧಾರದಿಂದಾಗಿ ದೊಡ್ಡ ಅನಾಹುತ ತಪ್ಪಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಯಾತ್ರಾರ್ಥಿಗಳು ದೇವರ ದರ್ಶನ ಪಡೆದ ನಂತರ ಹಿಂತಿರುಗಲಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ರುದ್ರಪ್ರಯಾಗದ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೌರಭ್ ಗಹರ್ವಾರ್ ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *