ಸಮಗ್ರ ನ್ಯೂಸ್: ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ(ಜು.7) ಬೆಳಗ್ಗೆ ಪುತ್ತೂರು ತಾಲೂಕಿನ ಆರ್ಯಾಪು ಎಂಬಲ್ಲಿ ನಡೆದಿದೆ.
ಆರ್ಯಾಪು ಗ್ರಾಮದ ಪಂಜಳ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿಶ್ವನಾಥ (32) ಆತ್ಮಹತ್ಯೆ ಮಾಡಿಕೊಂಡಾತ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿದ್ದಾರೆ.






