ದರ್ಶನ್ ಗಾಗಿ ಪರಪ್ಪನ ಅಗ್ರಹಾರಕ್ಕೆ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಮನೆ ಊಟ ಕೋರಿ ಸಲ್ಲಿಸಿರುವ ಅರ್ಜಿಯನ್ನು ಇದೀಗ ವಾಪಸ್ ಪಡೆಯುವುದಕ್ಕೆ ದರ್ಶನ್ ಪರ ವಕೀಲರು ಮೆಮೊ ಹಾಕಿದ್ದಾರೆ. ಇದೀಗ ದರ್ಶನ್ ಗೆ ಜೈಲು ಊಟವೇ ಫಿಕ್ಸ್ ಆಗಿದೆ.

Ad Widget ... ..

ಆದರೆ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದರು. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು. ಪೂಜೆಯ ಸಂದರ್ಭದಲ್ಲಿ ತೆಗೆದುಕೊಂಡು ಬಂದ ಪ್ರಸಾದವನ್ನು ಜೈಲಿಗೆ ತಂದಿದ್ದಾರೆ ವಿಜಯಲಕ್ಷ್ಮಿ. ದರ್ಶನ್ ಅವರು ಹೊರಗೆ ಬರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ ವಿಜಯಲಕ್ಷ್ಮಿ. ಆದರೆ, ಕೇಸ್ ತುಂಬಾನೇ ಗಂಭೀರ ಆಗಿರುವುದರಿಂದ ಜಾಮೀನಿಗೆ ಅರ್ಜಿ ಹಾಕುವುದು ಅಸಾಧ್ಯವಾಗಿದೆ.

Ad Widget

Leave a Comment

Your email address will not be published. Required fields are marked *