ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟ ಯಶ್ ಕುಟುಂಬ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳಕ್ಕೆ ಇಂದು ನಟ ಯಶ್ ಅವರು ಭೇಟಿ ನೀಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳು ಶುರುವಾಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇದರ ಜೊತೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Ad Widget ... ..

ಯಶ್ ಅವರು ಪಂಚೆ ಉಟ್ಟು ಮಂಗಳೂರು ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿರುವ ವಿಡಿಯೋ ವೈರಲ್ ಆಗಿದೆ. ಆ ಬಳಿಕ ಅವರು ಮಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಇತ್ತ ಸುರ್ಯ ಶ್ರೀ ಸದಾಶಿವ ರುದ್ರ ದೇಗುಲಕ್ಕೂ ಯಶ್ ದಂಪತಿ ಮಕ್ಕಳ ಜೊತೆ ಭೇಟಿ ನೀಡಿ ಮಣ್ಣಿನ ಹರಕೆ ತೀರಿಸಿದ್ದಾರೆ. ಇವರ ಜೊತೆ ಟಾಕ್ಸಿಕ್ ಚಲನಚಿತ್ರದ ನಿರ್ದೇಶಕ ವೆಂಕಟ್ ಕೂಡ ದೇವರ ದರ್ಶನ ಪಡೆದರು.

Ad Widget

Leave a Comment

Your email address will not be published. Required fields are marked *