ಪುತ್ತೂರು: ಬಸ್ ನಿಲ್ಲಿಸಿಲ್ಲವೆಂದು ಕರಾರಸಾನಿ ಸಿಬ್ಬಂದಿಯಿಂದ ಚಾಲಕನಿಗೆ ಹಲ್ಲೆ; ದೂರು ದಾಖಲು

ಸಮಗ್ರ ನ್ಯೂಸ್: ಬಸ್‌ ನಿಲ್ಲಿಸಿಲ್ಲವೆಂದು ಚಾಲಕನಿಗೆ ಕೆಎಸ್‌ಆರ್‌ಟಿಸಿ ಸಿಬಂದಿ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ಶುಕ್ರವಾರ ನಡೆದಿದೆ.

Ad Widget ... ..

ಸವಣೂರು ಪೆಟ್ರೋಲ್‌ ಪಂಪ್‌ ಬಳಿಯ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಸಿಬಂದಿ ನಾರಾಯಣ ಅವರು ಚಾಲಕ ಭರತ್‌ಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget

ಬಸ್‌ ಸಹಪ್ರಯಾಣಿಕರು ಘಟನೆಯ ವೀಡಿಯೋ ಚಿತ್ರೀಕರಿಸಿದ್ದು, ವೈರಲ್‌ ಆಗಿದೆ. ಚಾಲಕ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖ ಲಾಗಿದ್ದು, ಅವರು ನೀಡಿದ ದೂರಿನಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಲ್ಲೆ ಖಂಡಿಸಿ ಬಸ್‌ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟಿಸಲು ಸಿಬಂದಿ ನಿರ್ಧರಿಸಿದ್ದರು. ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಸಿಬಂದಿ ಪ್ರತಿಭಟನೆಯಿಂದ ಹಿಂದೆ ಸರಿದರು.

Leave a Comment

Your email address will not be published. Required fields are marked *