ಮಹಾಲಕ್ಷ್ಮಿ ಕೊಲೆ ಪ್ರಕರಣ| ಆರೋಪಿ ಮುಕ್ತಿ‌ರಂಜನ್ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನು 59 ತುಂಡುಗಳಾಗಿ ಕತ್ತರಿಸಿದ ಹಂತಕ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

Ad Widget ... ..

ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕ್ತಿ ರಂಜನ್ ರಾಯ್ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂದು ವರದಿಯಾಗಿತ್ತು. ಆದರೆ ಆರೋಪಿ ಒಡಿಶಾದಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಇದೆ. ಪೊಲೀಸರು ಆರೋಪಿಯ ಜಾಡು ಹಿಡಿದು ಒಡಿಶಾಗೆ ತೆರಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದರು. ಇದೀಗ ಆರೋಪಿ ಒಡಿಶಾದಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

ಮಹಾಲಕ್ಷ್ಮಿ ಜೊತೆ ಫ್ಯಾಶನ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಟೀಮ್ ಹೆಡ್ ಮುಕ್ತಿ ರಂಜನ್ ರಾಯ್ ಆಕೆಯನ್ನು ಕೊಂದಿದ್ದಾನೆ ಎಂಬ ಸತ್ಯಾಂಶ ಬಯಲಾಗಿತ್ತು

Leave a Comment

Your email address will not be published. Required fields are marked *