ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಸಮಗ್ರ ನ್ಯೂಸ್: ಯುವಕನೊಬ್ಬ ನಡುರಸ್ತೆಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಅಮ್ಮೋಹಾದಲ್ಲಿ ನಡೆದಿದೆ. ಹಾಡಹಗಲೇ ತನ್ನ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯ ಕುತ್ತಿಗೆಗೆ ದುಪಟ್ಟಾ ಸುತ್ತಿ ಕೆಳಗೆ ಬೀಳಿಸಿ ಹತ್ಯೆ ಮಾಡಲು ಯತ್ನಿಸಿದ್ದ, ದಾರಿಯಲ್ಲಿ ಹೋಗುವವರು ಕೂಡಲೇ ಧಾವಿಸಿ ಆಕೆಯನ್ನು ರಕ್ಷಿಸಿದ್ದಾರೆ.ಸಲಾಂಪುರ್ ಗೋಸಾಯಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

Ad Widget ... ..

ಆರೋಪಿ ರಾಹುಲ್ ಸ್ಥಳೀಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾನೆ.ಆತ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ, ಆದರೆ ಆಕೆಗೆ ಇಷ್ಟವಿರಲಿಲ್ಲ, ಆಕೆ ಬೇರೊಬ್ಬ ಹುಡುಗನೊಂದಿಗೆ ಮಾತನಾಡಿದ್ದಕ್ಕೆ ಕೋಪಗೊಂಡ ಆತ ಆಕೆಯನ್ನು ಹತ್ಯೆ ಮಾಡಲು ಯತ್ನಿಸಿದ್ದಾನೆ. ಮೊದಲು ಆಕೆಯೊಂದಿಗೆ ಮಾತನಾಡಲು ಪ್ರಯತ್ನಿಸಿದ್ದ. ನಂತರ ಇದ್ದಕ್ಕಿದ್ದಂತೆ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಲು ಮುಂದಾಗಿದ್ದ.

Ad Widget

Leave a Comment

Your email address will not be published. Required fields are marked *