ಸಮಗ್ರ ನ್ಯೂಸ್: ಸಚಿವ ಸತೀಶ್ ಜಾರಕಿಹೋಳಿ ಮುಂದಿನ ಸಿಎಂ ಎಂದು ಸತೀಶ್ ಅಭಿಮಾನಿಗಳು ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಹರಕೆ ಕಟ್ಟಿಕೊಂಡಿದ್ದು, ಸತೀಶ್ ಜಾರಕಿಹೋಳಿ ಸಿಎಂ ಆಗಬೇಕು ಎಂದು ಅಭಿಯಾನ ಮುಂದುವರಿದಿದೆ.
ಕಳೆದ ತಿಂಗಳು ಸಿಗಂದೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸತೀಶ್ ಜಾರಕಿಹೋಳಿ ಅಭಿಮಾನಿಗಳು ಮುಂದಿನ ಸಿಎಂ ಸತೀಸ್ ಜಾರಕಿಹೋಳಿ ಎಂಬ ಪೋಸ್ಟರ್ ಹಿಡಿದು ವಿಶೇಷ ಪೂಜೆ ಸಲ್ಲಿಸಿದ್ದರು.
ಇದೀಗ ಸತೀಶ್ ಅಭಿಮಾನಿಗಳು ತಮ್ಮ ಅಭಿಯಾನವನ್ನು ಮುಂದುವರಿಸಿದ್ದು. ಪ್ರಯಾಗ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲೂ ತಮ್ಮ ಅಭಿಯಾನವನ್ನು ಮುಂದುವರಿಸಿದ್ದಾರೆ.
ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಭೇಟಿ ನೀಡಿರುವ ಸತೀಶ್ ಜಾರಕಿಹೋಳಿ ಅಭಿಮಾನಿಗಳು ತ್ರಿವೇಣಿ ಸಂಗಮದಲ್ಲಿ ಸತೀಶ್ ಜಾರಕಿಹೋಳಿ ಅವರ ಪೋಸ್ಟರ್ ಹಿಡಿದು ಪುಣ್ಯ ಸ್ನಾನ ಮಾಡಿದ್ದು, ಮುಂದಿನ ಸಿಎಂ ಆಗಲಿ ಎಂದು ಹರಕೆ ಕಟ್ಟಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.