Ad Widget .

ಬಸ್ – ಬೈಕ್ ನಡುವೆ ಭೀಕರ ಅಪಘಾತ| ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವು; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೂವರು ಪುಟಾಣಿ ಮಕ್ಕಳ ಸಹಿತ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ಸುರಪುರ ತಾಲೂಕಿನ ತಿಂಥಣಿ ಬಳಿ ಮಧ್ಯಾಹ್ನ ಸಂಭವಿಸಿದೆ. ತಿಂಥಣಿ ಗ್ರಾಮದ ಕಮಾನ್ ಬಳಿ ಶ್ರೀರಂಗಪಟ್ಟಣ- ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

Ad Widget . Ad Widget . Ad Widget .

ಲಿಂಗಸೂಗೂರು ಕಡೆಯಿಂದ ಚಿಂಚೋಳಿ ಕಡೆಗೆ ಹೊರಟಿದ್ದ ಖಾಸಗಿ ಬಸ್ಸೊಂದು ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಲ್ಲಿ ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

Ad Widget . Ad Widget .

ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಬೈಕಿನಲ್ಲಿದ್ದ ಮೂವರು ಮಕ್ಕಳು ಮತ್ತು ಅವರ ತಂದೆ, ತಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

Leave a Comment

Your email address will not be published. Required fields are marked *