Ad Widget .

ಅಯೋಧ್ಯೆ ರಾಮಮಂದಿರ ಮೇಲೆ ಗ್ರೆನೇಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರ ಮತ್ತು ಗುಜರಾತ್‌ನ ವಿಶ್ವಪ್ರಸಿದ್ಧ ಸೋಮನಾಥ ದೇಗುಲದ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಎನ್ನಲಾದ ಶಂಕಿತ ಉಗ್ರನೊಬ್ಬನನ್ನು ಹರ್ಯಾಣ ಮತ್ತು ಗುಜರಾತ್‌ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಫರೀದಾಬಾದ್‌ನಲ್ಲಿ ಬಂಧಿಸಲಾಗಿದೆ.

Ad Widget . Ad Widget . Ad Widget . Ad Widget .

ಬಂಧಿತ ವ್ಯಕ್ತಿಯನ್ನು ಅಬ್ದುಲ್‌ ರೆಹಮಾನ್‌ (19) ಎಂದು ಗುರುತಿಸಲಾಗಿದೆ. ಈತ ವಿಶ್ವದ ಕುಖ್ಯಾತ ಉಗ್ರ ಸಂಘಟನೆಯಾದ ಐಸಿಸ್‌ ನಂಟು ಹೊಂದಿದ್ದು, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನ ಸೂಚನೆಯಂತೆ ದಾಳಿಗೆ ಸಂಚು ರೂಪಿಸಲಾಗಿದ್ದ ಎಂದು ಹೇಳಲಾಗಿದೆ.

Ad Widget . Ad Widget .

ಬಂಧನದ ಬೆನ್ನಲ್ಲೇ ರೆಹಮಾನ್‌ ನೀಡಿದ ಸುಳಿವಿನ ಮೇರೆಗೆ ಆತನ ಮನೆಯಿಂದ ಎರಡು ಗ್ರೆನೇಡ್‌ ವಶಕ್ಕೆ ಪಡೆಯಲಾಗಿದೆ. ಭಾನುವಾರವೇ ಅಬ್ದುಲ್‌ನನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಆತನನ್ನು ಸೋಮವಾರ ಗುಜರಾತ್‌ಗೆ ಕರೆದೊಯ್ಯಲಾಗಿದೆ. ಈತನ ಬಂಧನದೊಂದಿಗೆ ದೊಡ್ಡ ಉಗ್ರ ಸಂಚೊಂದು ವಿಫಲವಾದಂತಾಗಿದೆ.

Leave a Comment

Your email address will not be published. Required fields are marked *