ಮಾರ್ಚ್ ಅಂತ್ಯದ ವೇಳೆಗೆ ಮಂಗಳೂರು – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲಿಗೆ ಚಾಲನೆ – ಸಂಸದ ಚೌಟ

ಸಮಗ್ರ ನ್ಯೂಸ್: ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದ್ದು, ಮಾರ್ಚ್‌ ಅಂತ್ಯದೊಳಗೆ ಇದಕ್ಕೆ ಚಾಲನೆ ನೀಡುವರು ಎಂದು ಸಂಸದ ಕ್ಯಾ|ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

Ad Widget . Ad Widget .

ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ ಸಂಸದರು, ಒಂದು ದಶಕದ ಬೇಡಿಕೆ ಇದು ಎಂದು ವಿವರಿಸಿದ್ದಾರೆ. ಈ ರೈಲಿಗೆ ಹಸಿರು ನಿಶಾನೆ ತೋರುವ ಬಗ್ಗೆ ಸಚಿವ ಸೋಮಣ್ಣ ಅವರೊಂದಿಗೆ ಚರ್ಚಿಸಿದ್ದು, ಉದ್ಘಾಟನೆಗೆ ಸಮಯ ನಿಗದಿಯಾಗಲಿದೆ. ಬಳಿಕ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಈ ರೈಲು ಸೇವೆ ಪ್ರಾರಂಭವಾಗಲಿದೆ.

Ad Widget . Ad Widget .

Leave a Comment

Your email address will not be published. Required fields are marked *