ಚಿಕ್ಕಮಗಳೂರು: ನಲ್ಲೂರಿಗೆ ಬಂದ ಒಂಟಿ ಸಲಗ|ಸ್ಥಳೀಯರಲ್ಲಿ ಮೂಡಿದೆ ಆತಂಕ

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಮಾ13 ರಂದು ರಾತ್ರಿ ನಡೆದಿದೆ.

Ad Widget . Ad Widget .

ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿಕ್ಕಮಗಳೂರು ನಗರದಿಂದ ಕೇವಲ 2 ಕಿ.ಮೀ. ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು ಇದು ನಗರ ಪ್ರದೇಶಕ್ಕೆ ಪ್ರವೇಶಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ.

Ad Widget . Ad Widget .

ನಲ್ಲೂರಿನ ವಿವಿಧ ರಸ್ತೆಗಳಲ್ಲೂ ಆನೆ ಸಂಚರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಹಿಂಜರಿದಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಸಲಗವನ್ನು ಕಾಡು ಪ್ರದೇಶಕ್ಕೆ ಹಿಮ್ಮೆಟ್ಟಿಸಲು ಹರಸಾಹಸ ಪಡುತ್ತಿದ್ದಾರೆ. ಅದನ್ನು ಸುರಕ್ಷಿತವಾಗಿ ಮರಳಿಸಲು ತಕ್ಕ ಮುನ್ನೆಚ್ಚರಿಕೆ ವಹಿಸಲಾಗಿದೆ.

Leave a Comment

Your email address will not be published. Required fields are marked *