ಮುಲ್ಕಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ| ಸವಾರರಿಬ್ಬರು ದುರ್ಮರಣ

ಸಮಗ್ರ ನ್ಯೂಸ್: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ವೇಗವಾಗಿ ಬಂದ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲೆ ಸಂಚರಿಸುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಎಂಬ ಗ್ರಾಮದಲ್ಲಿ ನಡೆದಿದೆ.

Ad Widget .

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆತ್ಮಾನಂದ (27) ನವೀನ್ ಹೂಗಾರ (26) ಮೃತ ಬೈಕ್ ಸವಾರರು ಎಂದು ತಿಳಿದುಬಂದಿದೆ. ಮೃತರು ಧಾರವಾಡ ಜಿಲ್ಲೆಯ ಕಲ್ಲೂರಿನ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *