ಅಡಿಕೆ ಸುಲಿಯುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಸಮಗ್ರ ನ್ಯೂಸ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಹೆಗಡೆ ಆಕಸ್ಮಿಕ ಅವಘಡದಲ್ಲಿ ನಿಧನರಾಗಿದ್ದಾರೆ. ಅಡಕೆ ಚಾಲಿ ಸುಲಿಯುವ ಯಂತ್ರಕ್ಕೆ ಸಿಲುಕಿ ಶೋಭಾ ಮೃತಪಟ್ಟಿದ್ದಾರೆ.

Ad Widget .

ಶೋಭಾ ಮನೆಯಲ್ಲಿ ಅಡಕೆ ಸುಲಿಯುವ ಕಾರ್ಯ ನಡೆಯುತ್ತಿತ್ತು. ಶೋಭಾ ಹೆಗಡೆ ಕೆಲಸಗಾರರನ್ನು ನೋಡಿಕೊಳ್ಳಲು ಹೋಗಿದ್ದರು. ಈ ವೇಳೆ ಚಾಲಿ ಸುಲಿಯುವ ಯಂತ್ರಕ್ಕೆ ಆಕಸ್ಮಿಕವಾಗಿ ಶೋಭಾ ಸೀರೆಯ ಸೆರಗು ಸಿಲುಕಿ ಅವರು ಪ್ರಾಣಬಿಟ್ಟಿದ್ದಾರೆ. ಕೆಲಸಗಾರರು ಅಲ್ಲಿಯೇ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಯಂತ್ರ ಶೋಭಾರನ್ನು ಎತ್ತಿ ಬಿಸಾಡಿದ್ದು, ರಕ್ತಸ್ರಾವವಾಗಿ ಸಾವನಪ್ಪಿದ್ದಾರೆ.

Ad Widget . Ad Widget .

ಕಳೆದ ಮೂರು ವರ್ಷಗಳಿಂದ ಚಾಲಿ ಸುಲಿಯುವ ವೇಳೆ ಶೋಭಾ ಹೆಗಡೆ ಅವರೇ ದೇಖರೇಖಿ ನೋಡಿಕೊಳ್ಳುತ್ತಿದ್ದರು. ಆದ್ರೆ ವಿಧಿ ಕೈಕೊಟ್ಟಿದ್ದು, ನಿನ್ನೆ ಸಾವಿಗೀಡಾಗಿದ್ದಾರೆ. ಈ ಸಂಬಂಧ ಶಿರಸಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Leave a Comment

Your email address will not be published. Required fields are marked *