ಸಮಗ್ರ ನ್ಯೂಸ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ 8 ವಿಕೆಟ್ ಗಳ ಜಯ ಸಾಧಿಸಿದೆ.
ಹೊಸ ನಾಯಕ ರಜತ್ ಪಟಿದಾರ್ ನಾಯಕತ್ವದಲ್ಲಿ, ಬೆಂಗಳೂರು ತಂಡವು ಸತತ ಎರಡು ಗೆಲುವುಗಳೊಂದಿಗೆ ಋತುವನ್ನು ಅದ್ಭುತವಾಗಿ ಆರಂಭಿಸಿದೆ. ಆದರೆ, ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ತಂಡ ಮೊದಲ ಪಂದ್ಯದಲ್ಲಿ ಸೋತ ನಂತರ ಎರಡನೇ ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿತು.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಸೀಸನ್ನ ಮೊದಲ ಪಂದ್ಯ ಇದಾಗಿದ್ದು, ಇದರೊಂದಿಗೆ, ಆರ್ಸಿಬಿ ಹೊರಗೆ ಸತತ ಎರಡು ಪಂದ್ಯಗಳನ್ನು ಆಡಿದ ನಂತರ ತವರಿನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಿ ಸೋಲು ಕಂಡಿದೆ.