ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲಾರೆ – ಪುತ್ತಿಲ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲರನ್ನು ದ.ಕ.ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವ ಕುರಿತು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ. ಆದರೆ ಗಡಿಪಾರು ನೋಟಿಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅರುಣ್ ಕುಮಾರ್ ಪುತ್ತಿಲ್ ಅವರು ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶವನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Ad Widget . Ad Widget . Ad Widget .

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದು, ಗೃಹ ಇಲಾಖೆಯಿಂದ ನನಗೆ ಗಡಿಪಾರು ಆದೇಶ ಮಾಡಿದ್ದಾರೆ. ರಾಜ್ಯ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Ad Widget . Ad Widget .

ನಾನು 30 ರಿಂದ 35 ವರ್ಷಗಳಿಂದ ಸಾಮಾಜಿಕ ಕೆಲಸ ಮಾಡುತ್ತಿದ್ದೇನೆ. ಆರ್ ಎಸ್ ಎಸ್ ಮೂಲಕ ಸಾಮಾಜಿಕ ಕೆಲಸ ಮಾಡುತ್ತಿದ್ದೇನೆ. ನಾನು ಯಾವುದೇ ದರೋಡೆ ಕೊಲೆ ಕೇಸ್ ಗಳಲ್ಲಿ ಶಾಮೀಲಾಗಿಲ್ಲ. ನನ್ನ ಮೇಲಿನ ಕೇಸ್ ಗಳು ಹಿಂದೂಪರ ಹೋರಾಟಗಳಿಗೆ ಸಂಬಂಧಿಸಿದಾಗಿವೆ. ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶವನ್ನು ಸ್ವೀಕರಿಸಲ್ಲ ಎಂದು ಹೇಳಿಕೆ ನೀಡಿದರು.

Leave a Comment

Your email address will not be published. Required fields are marked *