ಜುಗಾರಿ ಅಡ್ಡೆಗೆ ದಾಳಿ ಮಾಡಿ ಆರೋಪಿಗಳ ಜೊತೆ ಹಣದ ಡೀಲ್| ವಿಟ್ಲ‌ ಠಾಣಾ ಪಿಎಸ್ಐ ಸಸ್ಪೆಂಡ್

ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಲ್ಲಿ ಸಿಕ್ಕ ಬೈಕ್ ಗೆ ಸಂಬಂಧಿಸಿದ ಮಾಹಿತಿ ಪಡೆದು ಜುಗಾರಿ ಆರೋಪಿಯಿಂದ ಹಣಕ್ಕೆ ಬೇಡಿಕೆ ಇಟ್ಟ ವಿಟ್ಲ ಠಾಣೆ ಪಿಎಸ್‌ಐ ಬಿ.ಸಿ ಕೌಶಿಕ್ ಅವರನ್ನು ಸಸ್ಪೆಂಡ್ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ ಆದೇಶ ಹೊರಡಿಸಿದ್ದಾರೆ.

Ad Widget ... ..

ಮೇ ತಿಂಗಳ 8ರಂದು ವಿಟ್ಲ ಪೇಟೆ ಬಳಿಯ ಪಳಿಕೆ ಎಂಬಲ್ಲಿ ನಾಲ್ವರು ಯುವಕರು ಜುಗಾರಿ ಆಡುತ್ತಿದ್ದ ಮಾಹಿತಿ ಪಡೆದ ವಿಟ್ಲ ಠಾಣೆ ಪಿಎಸ್ಕೆ ಬಿ.ಸಿ.ಕೌಶಿಕ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಈ ವೇಳೆ, ಅಲ್ಲಿದ್ದವರು ಪರಾರಿಯಾಗಿದ್ದರೆ, ದ್ವಿಚಕ್ರ ವಾಹನ ಒಂದನ್ನು ಬಿಟ್ಟು ಹೋಗಿದ್ದರು. ಆರೋಪಿಗಳು ಯಾರೆಂದು ತಿಳಿದು ಒಬ್ಬಾತನಿಗೆ ಕರೆ ಮಾಡಿದ್ದ ಎಸ್ಐ ಕೌಶಿಕ್ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಹಣಕ್ಕೆ ಬೇಡಿಕೆ ಇಟ್ಟ ವಿಟ್ಲ ಠಾಣೆಯ ಪಿಎಸ್‌ಐ ಕೌಶಿಕ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

Ad Widget

Leave a Comment

Your email address will not be published. Required fields are marked *