ಸಮಗ್ರ ನ್ಯೂಸ್: ನೀವು ಮಾಧ್ಯಮದವರೆಲ್ಲಾ ಸೇರಿ ನನ್ನನ್ನ ರೇಪ್ ಒಂದು ಮಾಡಿಲ್ಲ… ಇನ್ ಏನ್ ಮಾಡಬೇಕೆಲ್ಲಾ ಮಾಡಿದ್ದೀರಿ, ಸುಳ್ಳು ಪಳ್ಳು ಹೇಳಿ ನನ್ನನ್ನು ವಿಲನ್ ಮಾಡಿದ್ದೀರಿ… ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಜಾತಿಗಣತಿ ವರದಿ ಬಗ್ಗೆ ಯಾರು ಏನು ಬೇಕಾದರೂ ಹೇಳಲಿ. ಜನರು, ಶಾಸಕರು ಹಾಗೂ ಮಂತ್ರಿಗಳ ಭಾವನೆಗಳನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಕಾನೂನಿನಲ್ಲಿ ಏನು ಮಾಡಬೇಕು ಎಲ್ಲಾ ಮಾಡಿದ್ದೀವಿ. ನಾಳೆ ಬೆಳಗ್ಗೆ ಯಾರಾದರೂ ಕೋರ್ಟ್ಗೆ ಹೋದ್ರೆ ಸಮಸ್ಯೆ ಆಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಮಾಡಿದ ಹಳೇ ಜಾತಿಗಣತಿಗೆ ಈಗಾಗಲೇ 10 ವರ್ಷ ಆಗಿದೆ. ಮೂರ್ನಾಲ್ಕು ತಿಂಗಳಿಂದ ಐದಾರು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿದ್ದೀವಿ. ಅಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಮ್ಮ ಹೈಕಮಾಂಡ್ನವರು ನಮ್ಮನ್ನ ಕರೆಸಿ ಕೆಲವೊಂದು ಮಾರ್ಗದರ್ಶನಗಳನ್ನು ಕೊಟ್ಟಿದ್ದಾರೆ. ಎಲ್ಲರೂ ಸೇರಿ ಎಲ್ಲರ ಅಭಿಪ್ರಾಯ ನೀಡಿದ್ದಾರೆ. ಇದರ ಜೊತೆಗೆ ವಿರೋಧ ಪಕ್ಷದವರು ಜಾತಿ ಗಣತಿ ವರದಿ ಜಾರಿಗೆ ಬಹಳ ಒತ್ತಾಯ ಮಾಡುತ್ತಿದ್ದರು. ಈಗ ವಿರೋಧ ಪಕ್ಷದವರು ಏನೇನು ಮಾತನಾಡಿದ್ದಾರೆ ನೋಡಿ ಎಂದು ಹೇಳಿದರು.