ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಕಾರ್ಯ ಇನ್ನು ಕೂಡ ನಡೆಯುತ್ತಲೇ ಇದೆ. ಎಸ್ಐಟಿ ಅಧಿಕಾರಿಗಳು ಆ ಅನಾಮಧೇಯ ವ್ಯಕ್ತಿ ಹೇಳಿದ ಕಡೆಯಲ್ಲೆಲ್ಲಾ ಅಗೆದು ಹುಡುಕಾಟ ನಡೆಸುತ್ತಿದ್ದಾರೆ. ಇದರ ನಡುವೆ ಈ ತಪಾಸಣೆಯ ಬಗ್ಗೆ, ಎಸ್ಐಟಿ ರಚನೆಯ ಬಗ್ಗೆ ಬಿಜೆಪಿ ನಾಯಕರು ಖಂಡಿಸಿದ್ದಾರೆ.
ಧರ್ಮಸ್ಥಳ ಯಾತ್ರೆಯನ್ನು ಮಾಡಿದ್ದಾರೆ. ಅಷ್ಟೇ ಅಲ್ಲ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರು ಕೂಡ ಈ ಸಂಬಂಧ ಸ್ವಾಗತ ಮಾಡಿದ್ದಾರೆ. ಎಸ್ಐಟಿ ತನಿಖೆ ಆಗ್ಲಿ ಬಿಡಿ ಎಂದು ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರ ಇಂದು ಸದನದಲ್ಲಿ ಸದ್ದು ಮಾಡಿದೆ.
ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಉತ್ತರ ನೀಡಿದ್ದು, ಎಸ್ಐಟಿ ತನಿಖೆಗೆ ವೀರೇಂದ್ರ ಹೆಗ್ಡೆಯವರೇ ಒಪ್ಪಿಗೆ ಸೂಚಿಸಿದ್ದಾರೆ. ಹೀಗಿರುವಾಗ ಬಿಜೆಪಿಯವರು ಒಪ್ಪುತ್ತಿಲ್ಲ. ಎಸ್ಐಟಿ ರಚನೆ ಮಾಡಿದಾಗ ಬಿಜೆಪಿಯವರು ಕೂಡ ಸುಮ್ಮನೆ ಇದ್ದರು. ಆದರೆ ಒಂದಷ್ಟು ಕಡೆ ಮೂಳೆ ಸಿಗ್ಲಿಲ್ಲ ಎಂಬ ವಿಚಾರ ಗಒತ್ತಾದ ಮೇಲೆ ಬಿಜೆಪಿಯವರದ್ದು ಶುರುವಾಗೋಯ್ತು ನೋಡಿ ಎಂದು ಸಿದ್ದರಾಮಯ್ಯ ಅವರು ಉತ್ತರಿಸಿದ್ದಾರೆ.







