ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಆ.23 ರಂದು ನಡೆಯಿತು.  

Ad Widget ... ..

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ  ಹರೀಶ್ ಇಂಜಾಡಿ ಅವರು  ವಹಿಸಿದ್ದರು .ಕಾರ್ಯಕ್ರಮದ ಉದ್ಘಾಟಕರಾಗಿ, ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅರುಣ್ ಪ್ರಕಾಶ್ ಅವರು  ರಾಷ್ಟ್ರೀಯ ಸೇವಾ ಯೋಜನೆ ಘಟಕವು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆಗಳನ್ನು ಹಾಗೂ ಬದಲಾವಣೆಗಳನ್ನು ಕಂಡುಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದರು.

Ad Widget

 ಮುಖ್ಯ ಅತಿಥಿಯಾಗಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ದತ್ತು ಗ್ರಾಮವಾದ ಬಿಳಿನೆಲೆ ಗ್ರಾಮ ಪಂಚಾಯತ್  ಅಧ್ಯಕ್ಷರಾದ ಶ್ರೀಮತಿ ಶಾರದಾ ದಿನೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದೇವಳದ ವ್ಯವಸ್ಥಾಪನ ಸಮಿತಿಯ  ಸದಸ್ಯರುಗಳಾದ ಶ್ರೀ ಅಜಿತ್ ಪಾಲೇರಿ,ಶ್ರೀಮತಿ ಲೀಲಾ ಮನಮೋಹನ್, ಶ್ರೀಮತಿ ಪ್ರವೀಣ ರೈ, ಶ್ರೀಮತಿ ಸೌಮ್ಯ ಭರತ್ ಹಾಗೂ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರಾದ ಶ್ರೀ ಸತೀಶ್ ಕೂ ಜುಗೋಡು ಮತ್ತು ಪವನ್ ಎಂ.ಡಿ ,ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರಾದ ಲತಾ ಬಿ. ಟಿ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕರುಗಳಾದ ದೇಗುಲ್, ಸುಷ್ಮಾ, ಹಿತೇಶ್, ದೇವಿಕಾ ಉಪಸ್ಥಿತರಿದ್ದರು. 

ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ  ಆರತಿ ಕೆ ಸ್ವಾಗತಿಸಿ, ಇನ್ನೋರ್ವ    ಯೋಜನಾಧಿಕಾರಿ ಸುಮಿತ್ರ ಕುಮಾರಿ  ಧನ್ಯವಾದ ಸಮರ್ಪಿಸಿ ವಿದ್ಯಾರ್ಥಿನಿ ಸಂಖ್ಯಾ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *