ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ (ಅ16) ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು.

Ad Widget ... ..

ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದರು.

Ad Widget

ಆ ಕಾಲದ ಪ್ರಸಿದ್ದ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರದ್ದು. ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಅತ್ಯದ್ಭುತ ರಾಗ ಸಂಚಾರದ ಮೂಲಕ ಕರುಣಾ ರಸದ ಪದ್ಯಗಳಿಗೆ ಸಾಟಿಯಿಲ್ಲದ ಭಾಗವತ ಎನಿಸಿಕೊಂಡಿದ್ದರು. ಎಡನೀರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ವಿಶ್ರಾಂತ ಜೀವನ ನಡೆಸುತ್ತಿದ್ದ ಅಮ್ಮಣ್ಣಾಯರು ಭಾಗವತರಾಗಿ ಅನೇಕ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು.

Leave a Comment

Your email address will not be published. Required fields are marked *