ಮಂಗಳೂರು: ವೈದ್ಯರಿಂದ ಸತ್ತಿದ್ದಾನೆಂದು ಘೋಷಿಸಲ್ಪಟ್ಟ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

ಸಮಗ್ರ ನ್ಯೂಸ್: ಮಂಗಳೂರಿನ ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿಯೊಬ್ಬರು, ಅಂತ್ಯಸಂಸ್ಕಾರದ ಕಟ್ಟಿಗೆಯ ಮೇಲೆ ಇಡಬೇಕೆನ್ನುವಷ್ಟರಲ್ಲಿ ಜೀವಂತವಾಗಿದ್ದು, ಕುಟುಂಬಕ್ಕೆ ಶಾಕ್ ಮತ್ತು ಸಂತಸವನ್ನು ನೀಡಿದ ವಿಚಿತ್ರ ಘಟನೆ ನಡೆದಿದೆ.

Ad Widget ... ..

ಏನಿದು ಘಟನೆ?
ಅಕ್ಟೋಬರ್ 16 ರಂದು ದೇರಳಕಟ್ಟೆಯ ಯೆನೆಪೊಯ ಮೆಡಿಕಲ್ ಕಾಲೇಜಿಗೆ ದಾಖಲಾಗಿದ್ದ ೬೯ ವರ್ಷದ ರಘುನಾಥ ಗಟ್ಟಿ ಅವರಿಗೆ, ಅಕ್ಟೋಬರ್ 19 ರ ಸಂಜೆ ವೈದ್ಯರು ‘ಮೃತರಾಗಿದ್ದಾರೆ’ ಎಂದು ಘೋಷಿಸಿದರು. ಕುಟುಂಬಸ್ಥರು ಮರುದಿನ ಬೆಳಿಗ್ಗೆ ಮೃತದೇಹವನ್ನು ತೆಗೆದುಕೊಂಡು ಹೋಗುವುದಾಗಿ ತಿಳಿಸಿದ ಬಳಿಕ, ಆಸ್ಪತ್ರೆಯ ಸಿಬ್ಬಂದಿ ರಘುನಾಥ್ ಅವರ ದೇಹವನ್ನು ರಾತ್ರಿಯಿಡೀ ಶವಾಗಾರ (ಫ್ರೀಜರ್)ದಲ್ಲಿ ಇರಿಸಿದ್ದರು!

Ad Widget

ಮರುದಿನ ಬೆಳಿಗ್ಗೆ, ಮೃತದೇಹವನ್ನು ಕುಂಬಳೆಯ ಕಂಚಿಕಟ್ಟೆಯಲ್ಲಿರುವ ಮನೆಗೆ ತೆಗೆದುಕೊಂಡು ಹೋಗಲಾಯಿತು. ಕುಟುಂಬಸ್ಥರು ಮತ್ತು ನೆಂಟರು ಸೇರಿ ಅಂತ್ಯಸಂಸ್ಕಾರದ ಎಲ್ಲ ಸಿದ್ಧತೆಗಳನ್ನು ಮುಗಿಸಿದ್ದರು. ಇನ್ನು ಅಂತಿಮ ವಿಧಿವಿಧಾನಗಳನ್ನು ಮುಗಿಸಿ, ದೇಹವನ್ನು ಚಿತೆಯ ಮೇಲೆ ಇರಿಸಬೇಕು ಎನ್ನುವಷ್ಟರಲ್ಲಿ… ಅಲ್ಲಿದ್ದ ಜನರಿಗೆ ಒಂದು ಅಚ್ಚರಿಯ ದೃಶ್ಯ ಎದುರಾಯಿತು!

ಮರಣಶಯ್ಯೆಯ ಮೇಲೆ ಮಲಗಿದ್ದ ರಘುನಾಥ ಗಟ್ಟಿ ಅವರು ತಮ್ಮ ತಲೆ ಮತ್ತು ಕಾಲುಗಳನ್ನು ನಿಧಾನವಾಗಿ ಅಲ್ಲಾಡಿಸಲು ಶುರು ಮಾಡಿದರು! ಸಾವು ಖಚಿತ ಎಂದು ತಿಳಿದಿದ್ದ ಕುಟುಂಬಸ್ಥರು ಈ ದೃಶ್ಯ ನೋಡಿ ಒಂದು ಕ್ಷಣ ದಿಗ್ಭ್ರಮೆಗೊಂಡರು. ಕೂಡಲೇ ಎಚ್ಚೆತ್ತುಕೊಂಡ ಅವರು, ರಘುನಾಥ ಗಟ್ಟಿ ಅವರನ್ನು ತಕ್ಷಣ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದರು.

ಫ್ರೀಜರ್‌ನಲ್ಲಿ ಒಂದು ರಾತ್ರಿ ಕಳೆದು, ‘ಸತ್ತು ಬದುಕಿದ’ ರಘುನಾಥ ಗಟ್ಟಿ ಅವರ ಈ ಘಟನೆ, ವೈದ್ಯಕೀಯ ಲೋಕದಲ್ಲಿ ‘ಮಿರಾಕಲ್’ ಎಂದೇ ಚರ್ಚೆಯಾಗುತ್ತಿದೆ. ವೈದ್ಯರು ಈ ರೀತಿ ಘೋಷಿಸಿದ್ದು ಹೇಗೆ ಮತ್ತು ಮನುಷ್ಯ ದೇಹ ಇಷ್ಟೊಂದು ಸಮಯ ಫ್ರೀಜರ್‌ನಲ್ಲಿದ್ದರೂ ಹೇಗೆ ಬದುಕುಳಿಯಿತು ಎಂಬ ಪ್ರಶ್ನೆಗಳು ಜನರನ್ನು ಕಾಡುತ್ತಿವೆ.

Leave a Comment

Your email address will not be published. Required fields are marked *