ಫೆ.15ರೊಳಗೆ ಸಾರಿಗೆ ಬಸ್ ಗಳ ಮೇಲಿನ ಜಾಹೀರಾತು ತೆರವಿಗೆ ಗಡುವು

ಸಮಗ್ರ ನ್ಯೂಸ್: ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಫೆ.15 ರೊಳಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ.

Ad Widget ... ..

ಸಾರಿಗೇತರ ಆದಾಯ ಹೆಚ್ಚಿಸಲು ಹಲವು ವರ್ಷಗಳಿಂದ ನಿಗಮದ ಬಸ್ಸುಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾರಿಗೆ ಸಚಿವರ ಸೂಚನೆಯಂತೆ ತಂಬಾಕು ಉತ್ಪನ್ನಗಳ ಜಾಹೀರಾತನ್ನು ತೆರವುಗೊಳಿಸಲಾಗುತ್ತಿದೆ ಎಂದು ಕೆಎಸ್‌‍ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಪಾಷ ತಿಳಿಸಿದ್ದಾರೆ.

Ad Widget

ಬಸ್ಸುಗಳ ಮೇಲೆ ಪ್ರದರ್ಶಿತವಾಗುತ್ತಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲಿಖಿತ ಮನವಿ ಪಡೆದು ಕರಾರಿನ ನಿಯಮಾವಳಿಯಂತೆ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಕೆಲವು ವ್ಯಕ್ತಿಗಳು ಬಸ್ಸುಗಳ ಮೇಲಿರುವ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಳಿಸುತ್ತಿರುವುದು ಕಾನೂನು ಬಾಹಿರವಾಗಿದೆ. ಅಂತಹ ವ್ಯಕ್ತಿಗಳ ವಿರುದ್ಧ ಸ್ಥಳೀಯ ಪೊಲೀಸ್‌‍ ಠಾಣೆಗೆ ದೂರು ನೀಡಿ ಎಫ್‌ಐಆರ್‌ ದಾಖಲಿಸಿ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ನಿಗಮದ ಎಲ್ಲಾ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನಿರ್ದೆಶನ ನೀಡಿದ್ದಾರೆ.ಈ ಸಂಬಂಧ ಬಸ್‌‍ ನಿಲ್ದಾಣದ ಸಿಬ್ಬಂದಿಗಳು, ಚಾಲಕರು ಹಾಗೂ ಇತರೆ ಸಿಬ್ಬಂದಿಗಳಿಗೂ ಸೂಕ್ತ ತಿಳವಳಿಕೆ ನೀಡಲು ಅವರು ಸೂಚಿಸಿದ್ದಾರೆ.

Leave a Comment

Your email address will not be published. Required fields are marked *