ಉಜಿರೆ: ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ

ಸಮಗ್ರ ನ್ಯೂಸ್: ವಿದ್ಯಾರ್ಥಿಯೊಬ್ಬ ತನ್ನ ನಿವಾಸದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಟಿ.ಬಿ. ಕ್ರಾಸ್ ನಿವಾಸಿ ಮಹಮ್ಮದ್ ಅಯಾನ್ (17) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಖಾಸಗಿ ಕಾಲೇಜಿನಲ್ಲಿ ಪಿಯು ವಿದ್ಯಾಭ್ಯಾಸ ಮಾಡುತ್ತಿದ್ದನು.

Ad Widget ... ..

ಇತ್ತೀಚೆಗಷ್ಟೇ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದ ಅಯಾನ್, ದ್ವಿತೀಯ ಪಿಯುಸಿ ತರಗತಿಗೆ ಪ್ರವೇಶ ಪಡೆದಿದ್ದನು ಎಂದು ತಿಳಿದುಬಂದಿದೆ. ಬುಧವಾರ ತನ್ನ ಅಪಾರ್ಟ್ಮೆಂಟ್‌ನ ಕೊಠಡಿಯಲ್ಲಿದ್ದ ಅಯಾನ್, ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾನೆ. ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ.

Ad Widget

ವಿದ್ಯಾರ್ಥಿಯ ಆತ್ಮಹತ್ಯೆಗೆ ನಿಖರವಾದ ಕಾರಣಗಳು ಏನೆಂಬುದು ಸದ್ಯಕ್ಕೆ ಲಭ್ಯವಾಗಿಲ್ಲ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬಂದರೂ, ಸಾವಿನ ಹಿಂದಿನ ಅಸಲಿ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Comment

Your email address will not be published. Required fields are marked *