ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – ಸಿಎಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಸೌಲಭ್ಯಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸೂಚನೆ ನೀಡಿದ್ದಾರೆ. ಈ ಯೋಜನೆಗಳನ್ನು ಸರ್ಕಾರ ನಿಲ್ಲಿಸುವುದಿಲ್ಲ, ಆದರೆ ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸುವ ಉದ್ದೇಶದಿಂದ ಫಲಾನುಭವಿಗಳು ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ನಡೆಸಿದ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಿಎಂ ಈ ಮಾಹಿತಿ ನೀಡಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡುವುದು ಅತ್ಯಗತ್ಯ. ಇದಕ್ಕಾಗಿ ಬಿಎಲ್‌ಒ (BLO)ಗಳು ಮೂರು ಬಾರಿ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ. ಆಗ ಅಗತ್ಯ ದಾಖಲೆಗಳನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಿ. ಒಂದು ವೇಳೆ ಮತದಾನದ ಹಕ್ಕನ್ನೇ ಕಳೆದುಕೊಂಡರೆ, ಭವಿಷ್ಯದಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿಯಂತಹ ಯಾವುದೇ ಸರ್ಕಾರಿ ಸೌಲಭ್ಯಗಳು ಸಿಗುವುದಿಲ್ಲ ಎಂದರು.

ಯೋಜನೆಗಳ ದುರುಪಯೋಗ ತಡೆಯಲು ಮತ್ತು ಅರ್ಹ ಬಡ ಕುಟುಂಬಗಳಿಗೆ ಮಾತ್ರ ಉಚಿತ ವಿದ್ಯುತ್ ಹಾಗೂ ಮಾಸಿಕ ಧನಸಹಾಯ ತಲುಪಿಸಲು ಈ ಮರುಅರ್ಜಿ ಪ್ರಕ್ರಿಯೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸಿಎಂ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

Leave a Comment

Your email address will not be published. Required fields are marked *