Editor

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ಏಳು ಮಂದಿ ವಿದ್ಯಾರ್ಥಿಗಳಿಗೆ 625 ಕ್ಕೆ 625

ಸಮಗ್ರ ನ್ಯೂಸ್: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ಈ ಬಾರಿಯ ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳ ಪೈಕಿ ಶೇ.94.1ರಷ್ಟು ಮಂದಿ ಪಾಸಾಗಿದ್ದಾರೆ. ಏಳು ಮಂದಿ ‌ವಿದ್ಯಾರ್ಥಿಗಳು 625 ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ […]

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ಏಳು ಮಂದಿ ವಿದ್ಯಾರ್ಥಿಗಳಿಗೆ 625 ಕ್ಕೆ 625 Read More »

ಕರ್ನಾಟಕಕ್ಕೂ ಕಾಲಿಟ್ಟ ಹಕ್ಕಿಜ್ವರ| ಹೆಸರಘಟ್ಟದಲ್ಲಿ ಪತ್ತೆಯಾದ ಮಾರಕ ವೈರಸ್

ಸಮಗ್ರ ನ್ಯೂಸ್: ದೇಶದ ವಿವಿಧ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿರುವ ಮಾರಕ ‘ಹಕ್ಕಿ ಜ್ವರ’ ಈಗ ರಾಜ್ಯಕ್ಕೂ ಕಾಲಿಟ್ಟಿದೆ. ಬೆಂಗಳೂರು ನಗರದ ಹೊರವಲಯದ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದ ಕೋಳಿ ಫಾರಂನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದ್ದು, ಪಶುಸಂಗೋಪನಾ ಇಲಾಖೆ ತೀವ್ರ ಹೈ ಅಲರ್ಟ್ ಘೋಷಿಸಿದೆ. ತಪಾಸಣೆ ವೇಳೆ ಕೋಳಿಗಳಲ್ಲಿ ವೈರಸ್ ಇರುವುದು ದೃಢಪಟ್ಟಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚೆಗೆ ಫಾರಂನಲ್ಲಿ ಹಕ್ಕಿಗಳು ಸರಣಿಯಾಗಿ ಸಾವನ್ನಪ್ಪುತ್ತಿದ್ದವು. ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ‘H5N1’ ಇರುವುದು ದೃಢಪಟ್ಟಿದೆ.ಈ ಜಾಗದಿಂದಲೇ ರಾಜ್ಯದ

ಕರ್ನಾಟಕಕ್ಕೂ ಕಾಲಿಟ್ಟ ಹಕ್ಕಿಜ್ವರ| ಹೆಸರಘಟ್ಟದಲ್ಲಿ ಪತ್ತೆಯಾದ ಮಾರಕ ವೈರಸ್ Read More »

ಉಜಿರೆ: ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ

ಸಮಗ್ರ ನ್ಯೂಸ್: ವಿದ್ಯಾರ್ಥಿಯೊಬ್ಬ ತನ್ನ ನಿವಾಸದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಟಿ.ಬಿ. ಕ್ರಾಸ್ ನಿವಾಸಿ ಮಹಮ್ಮದ್ ಅಯಾನ್ (17) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಖಾಸಗಿ ಕಾಲೇಜಿನಲ್ಲಿ ಪಿಯು ವಿದ್ಯಾಭ್ಯಾಸ ಮಾಡುತ್ತಿದ್ದನು. ಇತ್ತೀಚೆಗಷ್ಟೇ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದ ಅಯಾನ್, ದ್ವಿತೀಯ ಪಿಯುಸಿ ತರಗತಿಗೆ ಪ್ರವೇಶ ಪಡೆದಿದ್ದನು ಎಂದು ತಿಳಿದುಬಂದಿದೆ. ಬುಧವಾರ ತನ್ನ ಅಪಾರ್ಟ್ಮೆಂಟ್‌ನ ಕೊಠಡಿಯಲ್ಲಿದ್ದ ಅಯಾನ್, ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾನೆ. ಮನೆಯವರು ಗಮನಿಸಿದಾಗ ವಿಷಯ

ಉಜಿರೆ: ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ Read More »

ಗಲಾಟೆ, ಗೊಂದಲದ ನಡುವೆಯೇ ಸಂಸತ್ತಿನಲ್ಲಿ ಪ್ರಮುಖ 3 ಮಸೂದೆಗಳ ಮಂಡನೆ

ಸಮಗ್ರ ನ್ಯೂಸ್: ದೇಶದ ರಾಜಕೀಯ ದಿಕ್ಕನ್ನು ಬದಲಾಯಿಸಬಹುದಾದ ಮಹತ್ವದ ಬೆಳವಣಿಗೆಯಾಗಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಮಸೂದೆ ಮಂಡನೆಯಾಗಿದೆ. ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ನೀಡುವ ಉದ್ದೇಶದಜೊತೆಗೆ, ಲೋಕಸಭೆಯ ಪ್ರಸ್ತುತ 543 ಸ್ಥಾನಗಳನ್ನು 850ಕ್ಕೆ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರ ಮುಂದಿಟ್ಟಿದೆ. ಇದೇ ಮಾದರಿಯಲ್ಲಿ ರಾಜ್ಯ ವಿಧಾನಸಭೆಗಳ ಸದಸ್ಯರ ಸಂಖ್ಯೆಯನ್ನೂ ವಿಸ್ತರಿಸುವ ಯೋಜನೆಗೆ ಸರ್ಕಾರ ಕೈಹಾಕಿದೆ. ಇವುಗಳ ಜೊತೆಗೆ 2026ರ ಗಡಿ ನಿರ್ಣಯ (ಡಿಲಿಮಿಟೇಶನ್) ಮಸೂದೆ, 2002ರ ಹಳೆಯ ಡಿಲಿಮಿಟೇಶನ್ ಕಾಯ್ದೆಯನ್ನು ರದ್ದುಗೊಳಿಸಿ ಅದರ ಬದಲಿಗೆ

ಗಲಾಟೆ, ಗೊಂದಲದ ನಡುವೆಯೇ ಸಂಸತ್ತಿನಲ್ಲಿ ಪ್ರಮುಖ 3 ಮಸೂದೆಗಳ ಮಂಡನೆ Read More »

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಶನಿವಾರ (ಏಪ್ರಿಲ್ 11) ಹೃದಯಾಘಾತ ಸಂಭವಿಸಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಅವರು ಇಂದು(ಎ.12) ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಇದರಿಂದ ಭಾರತೀಯ ಸಂಗೀತ ಕ್ಷೇತ್ರದ ಅಪ್ರತಿಮ ಕೊಂಡಿಯೊಂದು ಕಳಚಿದಂತಾಗಿದೆ. ಪ್ಟೆಂಬರ್ 8, 1933 ರಂದು ಜನಿಸಿದ ಅವರು ಬಹಳ ಚಿಕ್ಕ ವಯಸ್ಸಿನಲ್ಲೇ ಹಾಡಲು ಪ್ರಾರಂಭಿಸಿದರು ಮತ್ತು ವಿಶ್ವದ ಅತ್ಯಂತ ಹೆಚ್ಚು ರೆಕಾರ್ಡ್ ಮಾಡಲಾದ ಕಲಾವಿದರಲ್ಲಿ ಆಶಾ ಒಬ್ಬರೆನಿಸಿದ್ದಾರೆ. ಹಿಂದಿ,

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ Read More »

ಇರಾನ್ -ಅಮೇರಿಕಾ ನಡುವಿನ ಸಂಧಾನ ಸಭೆ ವಿಫಲ| ಇತ್ತ ಹಾರ್ಮೋಜ್ ದಾಟಿದ ಅಮೇರಿಕಾ ಯುದ್ಧ ನೌಕೆಗಳು

ಸಮಗ್ರ ನ್ಯೂಸ್: ಇರಾನ್ ಮತ್ತು ಅಮೆರಿಕ ನಡುವಿನ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳು ಯಾವುದೇ ಅಂತಿಮ ತೀರ್ಮಾನವಿಲ್ಲದೆ ಅಂತ್ಯಗೊಂಡಿವೆ. ಈ ಕುರಿತು ಮಾಹಿತಿ ನೀಡಿರುವ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ (JD Vance), ಎರಡೂ ದೇಶಗಳ ನಡುವೆ ಒಮ್ಮತ ಮೂಡದ ಕಾರಣ ಸಂಧಾನ ಮಾತುಕತೆ ವಿಫಲವಾಗಿದೆ ಎಂದು ಖಚಿತಪಡಿಸಿದ್ದಾರೆ. ಗಂಟೆಗಳ ಕಾಲ ನಡೆದ ಸುದೀರ್ಘ ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ದೇಶಗಳಿಗೆ ಸಮ್ಮತವಾಗುವಂತಹ “ತೃಪ್ತಿದಾಯಕ ಒಪ್ಪಂದಕ್ಕೆ” ಬರಲು ಸಾಧ್ಯವಾಗಲಿಲ್ಲ. ಅಮೆರಿಕ ಮುಂದಿಟ್ಟಿದ್ದ ಪ್ರಮುಖ ನಿಯಮ

ಇರಾನ್ -ಅಮೇರಿಕಾ ನಡುವಿನ ಸಂಧಾನ ಸಭೆ ವಿಫಲ| ಇತ್ತ ಹಾರ್ಮೋಜ್ ದಾಟಿದ ಅಮೇರಿಕಾ ಯುದ್ಧ ನೌಕೆಗಳು Read More »

ಪ್ರಧಾನಿ ಹತ್ಯೆಗೆ ಸಂಚು; ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭದ್ರತೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಬಿಹಾರದ ಬಕ್ಸರ್‌ನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತನೆಗೆ ನೆರವಾಗುತ್ತಿದ್ದ ಇನ್ನಿಬ್ಬರನ್ನೂ ಸಹ ವಶಕ್ಕೆ ಪಡೆಯಲಾಗಿದೆ. ಕೇಂದ್ರ ತನಿಖಾ ಸಂಸ್ಥೆಗಳ ಖಚಿತ ಮಾಹಿತಿಯ ಮೇರೆಗೆ ಸ್ಥಳೀಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ​ಬಂಧಿತ ಆರೋಪಿಯನ್ನು ಬಕ್ಸರ್ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದ್ದು, ಇವನು ದೀರ್ಘಕಾಲದಿಂದ ಹ್ಯಾಕಿಂಗ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಈತ ಪ್ರಧಾನಿಯವರ ಭದ್ರತಾ ವ್ಯವಸ್ಥೆ, ಅವರ ಸಂಚಾರ

ಪ್ರಧಾನಿ ಹತ್ಯೆಗೆ ಸಂಚು; ಮೂವರು ಅರೆಸ್ಟ್ Read More »

ಚಿಕ್ಕಮಗಳೂರು: ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತದ ಬಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದನಾ (15) ಕೊನೆಯೂ ಶವವಾಗಿ ಪತ್ತೆಯಾಗಿದ್ದಾರೆ. ಮಾಣಿಕ್ಯಧಾರಾದ 2000 ಅಡಿ ಕೆಳಗೆ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸುದೀರ್ಘ ಶೋಧ ಕಾರ್ಯವು ದುರಂತ ಅಂತ್ಯ ಕಂಡಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕಳೆದ ನಾಲ್ಕು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀನಂದನಾ (15) ಕೊನೆಗೂ

ಚಿಕ್ಕಮಗಳೂರು: ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶವವಾಗಿ ಪತ್ತೆ Read More »

ಹುಲಿಕಲ್ ಘಾಟ್ ನಲ್ಲಿ ಗುಡ್ಡ ಕುಸಿತ| ಮೂವರು ಕಾರ್ಮಿಕರು ಸಾವು; ನಾಲ್ಕು ಮಂದಿ ಗಂಭೀರ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಗುಡ್ಡ ಕುಸಿತದಲ್ಲಿ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಹುಲಿಕಲ್ ಘಾಟಿಯ ಚಂಡಿಕಾಂಬಾ ದೇವಾಲಯದ ಸಮೀಪವಿರುವ ಹೇರ್ ಪಿನ್ ತಿರುವಿನಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಗುರುವಾರ ಸಂಜೆ ಸುಮಾರು 6:30ರ ವೇಳೆಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಏಕಾಏಕಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಈ ವೇಳೆ ಕೆಲಸ ಮಾಡುತ್ತಿದ್ದ ಏಳು ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು.

ಹುಲಿಕಲ್ ಘಾಟ್ ನಲ್ಲಿ ಗುಡ್ಡ ಕುಸಿತ| ಮೂವರು ಕಾರ್ಮಿಕರು ಸಾವು; ನಾಲ್ಕು ಮಂದಿ ಗಂಭೀರ Read More »

ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯೊಳಗೆ 5 ಗಂಟೆಗಳ ಕಾಲ ಅಡಗಿ ಕುಳಿತ ಆಧುನಿಕ ದುರ್ಯೋಧನ!! ತಾವರೆ ಗಿಡದ ದಂಟಿನಿಂದ ಉಸಿರಾಟ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಳ್ಳನೊಬ್ಬ ತೋರಿದ ಬುದ್ಧಿವಂತಿಕೆ ಮತ್ತು ಆತನನ್ನು ಹಿಡಿಯಲು ಪೊಲೀಸರು ನಡೆಸಿದ ಕಾರ್ಯಾಚರಣೆ ಈಗ ಎಲ್ಲೆಡೆ ವೈರಲ್ ಆಗಿದೆ. ಕಳ್ಳನೊಬ್ಬ ಸತತ 5 ಗಂಟೆಗಳ ಕಾಲ ಕೆರೆಯ ನೀರಿನಲ್ಲಿ ಅಡಗಿ ಕುಳಿತು, ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ​ಬಂಧಿತ ಕಳ್ಳನನ್ನು ಕಮಲೇಶ್ ಎಂದು ಗುರುತಿಸಲಾಗಿದೆ. ಈತ ಜಬಲ್‌ಪುರದ ಬೆಲ್‌ಖೇಡಾ ಭಾಗದಲ್ಲಿ ಕಳವು ಮಾಡಿ ಪರಾರಿಯಾಗುತ್ತಿದ್ದಾಗ ಪೊಲೀಸರು ಬೆನ್ನಟ್ಟಿದ್ದರು. ತಪ್ಪಿಸಿಕೊಳ್ಳಲು ದಾರಿ ಕಾಣದ ಕಳ್ಳ ಸಮೀಪದಲ್ಲಿದ್ದ ಕಮಲದ ಹೂವುಗಳಿಂದ ತುಂಬಿದ್ದ ಕೆರೆಗೆ

ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯೊಳಗೆ 5 ಗಂಟೆಗಳ ಕಾಲ ಅಡಗಿ ಕುಳಿತ ಆಧುನಿಕ ದುರ್ಯೋಧನ!! ತಾವರೆ ಗಿಡದ ದಂಟಿನಿಂದ ಉಸಿರಾಟ Read More »