Editor

ಪುತ್ತೂರು: ಕೋರ್ಟ್ ನಲ್ಲಿ ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಸಮಗ್ರ ನ್ಯೂಸ್: ವ್ಯಕ್ತಿಯೋರ್ವ ಕೋರ್ಟ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಕಾವು ಮಣಿಯಡ್ಕ ನಿವಾಸಿ ರವಿ (35) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಪತ್ನಿ ವಿದ್ಯಾಶ್ರೀ ನಡುವೆ ಕೌಟುಂಬಿಕ ಕಲಹವಾಗಿತ್ತು. ಎರಡು ದಿನಗಳ ಹಿಂದೆ ರವಿ ತನ್ನ ಪತ್ನಿ ವಿದ್ಯಾಶ್ರೀಯನ್ನು ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದ. ಗಂಡ-ಹೆಂಡತಿ ಜಗಳ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ […]

ಪುತ್ತೂರು: ಕೋರ್ಟ್ ನಲ್ಲಿ ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ Read More »

ಜಮ್ಮು: ಕಂದಕಕ್ಕೆ ಉರುಳಿದ ಸೇನಾ ವಾಹನ| 10 ಸೈನಿಕರ ದಾರುಣ ಸಾವು

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಡೋಡಾ ಜಿಲ್ಲೆಯಲ್ಲಿ ಒಂದು ಭಯಾನಕ ಘಟನೆ ಸಂಭವಿಸಿದೆ. 17 ಸವಾರರು ಸಂಚರಿಸುತ್ತಿದ್ದ ಸೇನಾ ವಾಹನವೊಂದು ಬೃಹತ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ಘಟನೆಯಲ್ಲಿ 10 ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಸೈನಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸೇನೆ, ‘ಪ್ರತಿಕೂಲ ಹವಾಮಾನ ಮತ್ತು ಕಳಪೆ ಗೋಚರತೆಯ ಪರಿಸ್ಥಿತಿಯಿಂದಾಗಿ ಭಾರತೀಯ ಸೇನೆಯ ವಾಹನವೊಂದು ಸ್ಕಿಡ್ ಆಗಿ ಕಂದಕಕ್ಕೆ

ಜಮ್ಮು: ಕಂದಕಕ್ಕೆ ಉರುಳಿದ ಸೇನಾ ವಾಹನ| 10 ಸೈನಿಕರ ದಾರುಣ ಸಾವು Read More »

ಪುತ್ತೂರು: ನಕಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ 51 ಲಕ್ಷ ಕಳೆದುಕೊಂಡ ವ್ಯಕ್ತಿ

ಸಮಗ್ರ ನ್ಯೂಸ್: ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡುತ್ತಿರುವ ಪುತ್ತೂರಿನ ವ್ಯಕ್ತಿಯೊಬ್ಬರು , ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಅದರಲ್ಲಿದ್ದ ವಾಟ್ಸಾಫ್ ಗ್ರೂಪ್ ಗೆ ಸೇರಿ ಅಲ್ಲಿ ನಕಲಿ ಷೇರು ಮಾರುಕಟ್ಟೆಗೆ ಹೂಡಿಕೆ ಮಾಡಿ 51 ಲಕ್ಷ ಕಳೆದುಕೊಂಡಿದ್ದಾರೆ. ಪುತ್ತೂರಿನ ನಿವಾಸಿಯಾಗಿರುವ ವ್ಯಕ್ತಿ ಈ ಹಿಂದೆ ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುತ್ತಿದ್ದರು. 15-11-2025 ರಂದು ಫೇಸ್‌ಬುಕ್‌ನಲ್ಲಿ ಹೆಚ್ಚು ಲಾಭಾಂಶದ ಜಾಹೀರಾತು ನೋಡಿ ವಾಟ್ಸಪ್ ಗ್ರೂಪ್‌ಗೆ ಸೇರಿರುತ್ತಾರೆ. ಸದ್ರಿ ಗ್ರೂಪ್ ಹಾಗೂ ವಾಟ್ಸಪ್

ಪುತ್ತೂರು: ನಕಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ 51 ಲಕ್ಷ ಕಳೆದುಕೊಂಡ ವ್ಯಕ್ತಿ Read More »

ಜಾಗತಿಕ ಬಿಕ್ಕಟ್ಟಿಗೆ ಹೈರಾಣಾದ ಷೇರುಪೇಟೆ| ಭಾರೀ ಕುಸಿತ ಕಂಡ ನಿಪ್ಟಿ, ಸೆನ್ಸೆಕ್ಸ್

ಸಮಗ್ರ ನ್ಯೂಸ್: ಜಾಗತಿಕ ಮಟ್ಟದಲ್ಲಿನ ಬಿಕ್ಕಟ್ಟುಗಳು ತೀವ್ರಗೊಂಡಿರುವುದು ಹಾಗೂ ಜಾಗತಿಕ ಷೇರುಪೇಟೆಗಳಲ್ಲಿನ ಮಂದಗತಿಯ ವಹಿವಾಟು ಮಂಗಳವಾರ ಭಾರತದ ಷೇರುಪೇಟೆಗಳ ಮೇಲೆ ಪರಿಣಾಮ ಬೀರಿದವು. ಇದರಿಂದಾಗಿ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 1,065 ಅಂಶ ಕುಸಿಯಿತು. ಮಂಗಳವಾರದ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ₹9.86 ಲಕ್ಷ ಕೋಟಿಯಷ್ಟು ಕರಗಿತು. ಅಮೆರಿಕದ ಡಾಲರ್ ಎದುರು ರೂಪಾಯಿ ದುರ್ಬಲವಾಗಿದ್ದುದು, ವಿದೇಶಿ ಹೂಡಿಕೆಯ ಹೊರಹರಿವು ಕೂಡ ಹೂಡಿಕೆದಾರರ ಉತ್ಸಾಹ ತಗ್ಗಿಸಿದವು ಎಂದು ವರ್ತಕರು ಹೇಳಿದ್ದಾರೆ. ರಾಷ್ಟ್ರೀಯ ಷೇರುಪೇಟೆಯ ನಿಫ್ಟಿ ಸೂಚ್ಯಂಕವು 353 ಅಂಶಗಳಷ್ಟು ಕುಸಿದಿದೆ.

ಜಾಗತಿಕ ಬಿಕ್ಕಟ್ಟಿಗೆ ಹೈರಾಣಾದ ಷೇರುಪೇಟೆ| ಭಾರೀ ಕುಸಿತ ಕಂಡ ನಿಪ್ಟಿ, ಸೆನ್ಸೆಕ್ಸ್ Read More »

ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಬಿಹಾರದ ನಿತಿನ್ ನಬಿನ್ ಗೆ ಮಣೆ ಹಾಕಿದ ಕೇಸರಿ ಪಕ್ಷ

ಸಮಗ್ರ ನ್ಯೂಸ್: ಅಚ್ಚರಿಯ ಆಯ್ಕೆಗೆ ಹೆಸರಾಗಿರುವ ಬಿಜೆಪಿ ಈ ಬಾರಿಯೂ ತನ್ನ ರಾಷ್ಟ್ರೀಯ ಅಧ್ಯಕ್ಷರ ಪಟ್ಟಕ್ಕೆ ಯಾರೂ ನಿರೀಕ್ಷಿಸದ ಬಿಹಾರದ ಯುವ ನಾಯಕ ನಿತಿನ್ ನಬೀನ್‌ ಅವರನ್ನು ಆಯ್ಕೆ ಮಾಡಿದೆ. ಈ ಮೂಲಕ ಸಂಘಟನಾ ಚತುರ, ಸಮೂಹ ನಾಯಕನಿಗೆ ಪಕ್ಷದ ಚುಕ್ಕಾಣಿ ನೀಡಿದೆ. ಹಾಗೆಂದು ನಿತಿನ್‌ಗೆ ಇದು ಏಕಾಏಕಿ ಒಲಿದು ಬಂದ ಅದೃಷ್ಟವಲ್ಲ. ನಿತಿನ್‌ರ ರಾಜಕೀಯ ಪ್ರಯಾಣ ಶುರುವಾಗುವುದು ಸರಿಯಾಗಿ 20 ವರ್ಷಗಳ ಹಿಂದೆ. ವಿದ್ಯಾರ್ಥಿಯಾಗಿದ್ದಾಗ ಎಬಿವಿಪಿ ಮೂಲಕ ಬಿಜೆಪಿ ಸಂಪರ್ಕಕ್ಕೆ ಬಂದ ನಿತಿನ್‌, 2000ದಲ್ಲಿ ರಾಜಕೀಯಕ್ಕೆ

ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಬಿಹಾರದ ನಿತಿನ್ ನಬಿನ್ ಗೆ ಮಣೆ ಹಾಕಿದ ಕೇಸರಿ ಪಕ್ಷ Read More »

ರಾಸಲೀಲೆ ವಿಡಿಯೋ ವೈರಲ್ ಪ್ರಕರಣ| ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್

ಸಮಗ್ರ ನ್ಯೂಸ್: ಕಚೇರಿಯಲ್ಲಿ ಮಹಿಳೆಗೆ ಮುತ್ತಿಟ್ಟು ಚೇರ್ ಮೇಲೆ ಕೂರಿಸಿಕೊಂಡು ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತು ಗೊಳಿಸಲಾಗಿದೆ ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲಾಗಿತ್ತು. ಅದರ ಬೆನ್ನಲ್ಲೇ ಬಿಜೆಪಿ ರಾಮಚಂದ್ರರಾವ್ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ಪರಮೇಶ್ವರ್ ಭೇಟಿಗೆ ಅವಕಾಶ ನೀಡಲಿಲ್ಲ. ಇದೀಗ ರಾಮಚಂದ್ರರಾವ್ ಅಜ್ಞಾತ

ರಾಸಲೀಲೆ ವಿಡಿಯೋ ವೈರಲ್ ಪ್ರಕರಣ| ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್ Read More »

ಪುತ್ತೂರಿನ ಪಡುಮಲೆ ಜಾತ್ರೆ ವೇಳೆ ಅವಘಡ| ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ಸಿಲುಕಿ ಶಾರ್ಟ್ ಸರ್ಕ್ಯೂಟ್| ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಾರು ಸುಟ್ಟು ಭಸ್ಮವಾಗಿದೆ. ಶ್ರೀ ಪೂಮಾನಿ-ಕಿನ್ನಿಮಾನಿ ಪ್ರದೇಶದ ಬಳಿಯ ಪಡುಮಲೆಯಲ್ಲಿ ಮತ್ತು ಬಡಗನ್ನೂರು ಗ್ರಾಮ ಪಂಚಾಯತ್‌ನ ಪಡುಮಲೆ ಪ್ರದೇಶದ ಮೈಂದಿನಡ್ಕದಲ್ಲಿರುವ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿ ಭಾನುವಾರ ಈ ಘಟನೆ ಸಂಭವಿಸಿದೆ. ದೇವಾಲಯದ ವಾರ್ಷಿಕ ಉತ್ಸವ ನಡೆಯುತ್ತಿರುವಾಗ ಈ ಘಟನೆ ನಡೆದಿದೆ. ದೇವಾಲಯದ ಆವರಣದೊಳಗಿನ ವಿದ್ಯುತ್ ಕಂಬದ ಬಳಿ ಕಾರು ನಿಲ್ಲಿಸಲಾಗಿತ್ತು. ಹತ್ತಿರದ ಜಾತ್ರೆಯಿಂದ ಬಂದ ಗ್ಯಾಸ್ ಬಲೂನ್ ಬಲವಾದ ಗಾಳಿಯಿಂದ

ಪುತ್ತೂರಿನ ಪಡುಮಲೆ ಜಾತ್ರೆ ವೇಳೆ ಅವಘಡ| ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ಸಿಲುಕಿ ಶಾರ್ಟ್ ಸರ್ಕ್ಯೂಟ್| ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ Read More »

ವೈರಲ್ ಆಯ್ತು ಐಜಿಪಿ ರಾಮಚಂದ್ರ ರಾವ್ ರಾಸಲೀಲೆ| ಕರ್ತವ್ಯದಲ್ಲಿದ್ದಾಗಲೇ ಮಹಿಳೆಯೊಂದಿಗೆ ಸರಸ, ಸರ್ಕಾರಕ್ಕೆ ಮುಜುಗರ

ಸಮಗ್ರ ನ್ಯೂಸ್:ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ‘ಕಾಮಕಾಂಡ’ ಈಗ ಇಡೀ ಸರ್ಕಾರವನ್ನೇ ಮುಜುಗರಕ್ಕೀಡು ಮಾಡಿದೆ. ಕರ್ನಾಟಕದ ಐಜಿಪಿ (DGP ಶ್ರೇಣಿ) ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋಗಳು ವೈರಲ್ ಆಗಿವೆ. ಈ ‘ಕಾಮಕಾಂಡ’ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ

ವೈರಲ್ ಆಯ್ತು ಐಜಿಪಿ ರಾಮಚಂದ್ರ ರಾವ್ ರಾಸಲೀಲೆ| ಕರ್ತವ್ಯದಲ್ಲಿದ್ದಾಗಲೇ ಮಹಿಳೆಯೊಂದಿಗೆ ಸರಸ, ಸರ್ಕಾರಕ್ಕೆ ಮುಜುಗರ Read More »

BBK12- ಪ್ರಶಸ್ತಿ ‌ಮುಡಿಗೇರಿಸಿಕೊಂಡ ಗಿಲ್ಲಿನಟ

ಸಮಗ್ರ ನ್ಯೂಸ್: ಕಲರ್ಸ್ ಕನ್ನಡ ವಾಹಿನಿಯಲ್ಲಿ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಡೆಸಿಕೊಟ್ಟ ‘ಬಿಗ್ ಬಾಸ್ ಕನ್ನಡ’ 12ನೇ ಸೀಸನ್‌ನಲ್ಲಿ ಗಿಲ್ಲಿ ನಟ ಎಂದೇ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಟರಾಜ್ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ. ಫೈನಲ್‌ನಲ್ಲಿ ಕರಾವಳಿ ಮೂಲದ, ಪ್ರಸ್ತುತ ಮುಂಬೈಯಲ್ಲಿ ವಾಸವಿರುವ ರಕ್ಷಿತಾ ಶೆಟ್ಟಿ ಅವರು ರನ್ನರ್‌ಅಪ್ ಪ್ರಶಸ್ತಿಗೆ ಪಾತ್ರರಾದರೆ, ಕನ್ನಡಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಅಶ್ವಿನಿ ಗೌಡ ಎರಡನೇ ರನ್ನರ್‌ಅಪ್ ಆಗಿದ್ದಾರೆ. ವಿಜೇತರಾಗಿ ಗಿಲ್ಲಿ ನಟ ಅವರಿಗೆ 50 ಲಕ್ಷ ರೂ.

BBK12- ಪ್ರಶಸ್ತಿ ‌ಮುಡಿಗೇರಿಸಿಕೊಂಡ ಗಿಲ್ಲಿನಟ Read More »

ಮಂಡ್ಯ: ಆಸ್ತಿಗಾಗಿ ಮದುವೆ ಫಿಕ್ಸ್ ಆಗಿದ್ದ ಸಹೋದರನ ಕೊಂದ ಅಣ್ಣ

ಸಮಗ್ರ ನ್ಯೂಸ್: ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಯೋಗೇಶ್(35) ಎಂದು ತಿಳಿದುಬಂದಿದೆ. ಮೃತ ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ಹತ್ಯೆ ಮಾಡಿದ್ದಾರೆ. ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಬಳಿಕ ಮೂವರು ಆರೋಪಿಗಳು ಪರಾರಿ ಆಗಿದ್ದಾರೆ.

ಮಂಡ್ಯ: ಆಸ್ತಿಗಾಗಿ ಮದುವೆ ಫಿಕ್ಸ್ ಆಗಿದ್ದ ಸಹೋದರನ ಕೊಂದ ಅಣ್ಣ Read More »