Editor

ನಾಳೆ ಬೆಂಗಳೂರಿನಲ್ಲಿ ಆರ್ಸಿಬಿ – ಜಿಟಿ ಮ್ಯಾಚ್.. ಮೆಟ್ರೋ ಸೇವೆ ವಿಸ್ತರಣೆ

ಸಮಗ್ರ ನ್ಯೂಸ್: ನಾಳೆ ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯ ನಡೆಯಲಿದ್ದು, ಗುಜರಾತ್ ಟೈಟನ್ಸ್ ವಿರುದ್ಧ ಆರ್ಸಿಬಿ ಮ್ಯಾಚ್ ನಡೆಯಲಿದೆ. ಈ ಕಾರಣ ನಮ್ಮ ಮೆಟ್ರೋ ಕೂಡ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಈ ಬಗ್ಗೆ ಬಿಎಂಆರ್ಸಿಎಲ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಮಾಹಿತಿ ನೀಡಿದೆ ನಾಳೆ ಮೆಟ್ರೋ ಸೇವೆಯನ್ನು ತಡ ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಪ್ರಕಟನೆಯನ್ನು ಪರಿಶೀಲಿಸಿ ಎಂದು […]

ನಾಳೆ ಬೆಂಗಳೂರಿನಲ್ಲಿ ಆರ್ಸಿಬಿ – ಜಿಟಿ ಮ್ಯಾಚ್.. ಮೆಟ್ರೋ ಸೇವೆ ವಿಸ್ತರಣೆ Read More »

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬ್ರಹ್ಮಾವರದ ಬಿರಿಯಾನಿ ಪಾಯಿಂಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 8.30ರ ಸುಮಾರಿಗೆ ನಡೆದಿದೆ. ಮೃತರನ್ನು ಬ್ರಹ್ಮಾವರ ಎಸ್‌ಎಂಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿ ವಂಶ್ ಶೆಟ್ಟಿ(11) ಎಂದು ಗುರುತಿಸಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಬೇಸಿಗೆ ಕ್ರೀಡಾ ಶಿಬಿರ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ವಂಶ್ ಶೆಟ್ಟಿ ಶಾಲೆಗೆ ಹೋಗಲು ರಸ್ತೆ ದಾಟಲು ರಸ್ತೆ ಬದಿ ನಿಂತುಕೊಂಡಿದ್ದನು. ಈ

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು Read More »

ಪಟಾಕಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ| 17 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಗುಜರಾತ್‌ನ ಬನಸ್ಕಾಂತದ ದೀಸಾದ ಧುನ್ವಾ ರಸ್ತೆಯಲ್ಲಿರುವ ಪಟಾಕಿ ಕಾರ್ಖಾನೆ ಮತ್ತು ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 17 ಕಾರ್ಮಿಕರು ಸಾವನ್ನಪ್ಪಿದರು. ಉಳಿದ 3 ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆಯ ಸಮಯದಲ್ಲಿ ಅನೇಕ ಕಾರ್ಮಿಕರು ಸಾವನ್ನಪ್ಪಿದರು. ಮಾಹಿತಿಯ ಪ್ರಕಾರ, ಬಾಯ್ಲರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ನಂತರ, ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಲು ಪ್ರಾರಂಭಿಸಿದರು. ಬೆಂಕಿಯಿಂದಾಗಿ ಕಾರ್ಖಾನೆಯ ಮೊದಲ ಮಹಡಿ ಕುಸಿದು ಬಿದ್ದಿದೆ. ಪ್ರಸ್ತುತ

ಪಟಾಕಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ| 17 ಮಂದಿ ಸಜೀವ ದಹನ Read More »

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಇನ್ನಿಲ್ಲ!!? ಸೋಶಿಯಲ್ ಮೀಡಿಯಾದಲ್ಲಿ ಸಾವಿನ ಸುದ್ದಿ ವೈರಲ್

ಸಮಗ್ರ ನ್ಯೂಸ್: ಭಾರತದಿಂದ 2019ರಲ್ಲಿ ಪಲಾಯನಗೈದು ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ ಎಂಬ ಸಾರ್ವಭೌಮ ರಾಷ್ಟ್ರ ಸ್ಥಾಪಿಸಿರುವುದಾಗಿ ಘೋಷಿಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ನಿಧನ ಹೊಂದಿದ್ದಾನೆ ಎನ್ನುವ ಸುದ್ದಿಯೊಂದನ್ನು ನಿತ್ಯಾನಂದನ ಸಹೋದರಿಯ ಮಗ ಸುಂದರೇಶ್ವರನ್ ವಿಡಿಯೋ ಮೂಲಕ ಬಹಿರಂಗಪಡಿಸಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್​​ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸ್ವಯಂ ಘೋಷಿತ ಆಧ್ಯಾತ್ಮಿಕ ಗುರು ನಿತ್ಯಾನಂದ ಸ್ವಾಮಿಯವರ ನಿಧನದ ಸುದ್ದಿ ವೈರಲ್ ಆಗಿದೆ. ನಿತ್ಯಾನಂದ ಎರಡು ದಿನಗಳ ಹಿಂದೆ ನಿಧನರಾದರು ಎಂದು ಅವರ ಸೋದರಳಿಯ ಸುಂದರೇಶ್ವರನ್ ವೀಡಿಯೊದಲ್ಲಿ ಬಹಿರಂಗಪಡಿಸಿದ್ದಾರೆ. ಅವರು

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಇನ್ನಿಲ್ಲ!!? ಸೋಶಿಯಲ್ ಮೀಡಿಯಾದಲ್ಲಿ ಸಾವಿನ ಸುದ್ದಿ ವೈರಲ್ Read More »

ನಾಳೆ ಎ.1ರಿಂದ ದುಬಾರಿ ದುನಿಯಾ| ಹಲವು ಅಗತ್ಯ ವಸ್ತುಗಳು ಕಾಸ್ಟ್ಲಿ

ಸಮಗ್ರ ನ್ಯೂಸ್: ಈಗಾಗಲೇ ಬೆಲೆ ಏರಿಕೆಯಿಂದ ಜನರು ತಮಗೆ ಅಗತ್ಯವಿರುವ ದಿನನಿತ್ಯದ ವಸ್ತುಗಳನ್ನು ಖರೀದಿಸಿ ಜೀವನ ಮಾಡಲು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ದೇಶಾದ್ಯಂತ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿರುವುದು ಜನರಿಗೆ ಒಂದು ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಯಾಕೆಂದರೆ ನಾಳೆಯಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರ, ವಿದ್ಯುತ್ ದರ, ಜೊತೆಗೆ ದೇಶದಲ್ಲಿ ಹೊಸ ಟೋಲ್ ದರಗಳು ಜಾರಿಗೆ ಬರಲಿವೆ. ಹಾಲಿನ ದರ 4 ರೂಪಾಯಿ, ಮೊಸರು ದರ 4 ರೂಪಾಯಿ, ವಿದ್ಯುತ್ ದರ ಪ್ರತಿ ಯೂನಿಟ್​ಗೆ 36

ನಾಳೆ ಎ.1ರಿಂದ ದುಬಾರಿ ದುನಿಯಾ| ಹಲವು ಅಗತ್ಯ ವಸ್ತುಗಳು ಕಾಸ್ಟ್ಲಿ Read More »

ಸೌದಿಯ ಮರುಭೂಮಿಯಲ್ಲಿ ರಾರಾಜಿಸುತ್ತಿರುವ ಕರ್ನಾಟಕ ಕರಾವಳಿಯ ಬೆದ್ರ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಪ್ರಮುಖ ಪಟ್ಟಣ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳಿಗೆ ಫೇಮಸ್. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಸರುವಾಸಿ ಎಂಬುದಷ್ಟೇ ನಮಗೆ ಗೊತ್ತು. ಆದರೆ ಮರುಭೂಮಿ ದೇಶಗಳಲ್ಲೂ ಇದರ ಹೆಸರು ರಾರಾಜಿಸುತ್ತಿರುವುದು ಗೊತ್ತಾ? ತುಳುವಿನಲ್ಲಿ ಮಂಗಳೂರಿಗೆ ಕುಡ್ಲ, ಮೂಡುಬಿದಿರೆಗೆ ಬೆದ್ರ, ಕಾರ್ಕಳಕ್ಕೆ ಕಾರ್ಲ, ಉಪ್ಪಿನಂಗಡಿಗೆ ಉಬಾರ್ ಹೀಗೆ ಸ್ಥಳೀಯ ಸೊಗಡಿನ ಹೆಸರುಗಳಿವೆ. ಊರವರು ಎಲ್ಲಿ ಹೋದರೂ ತಮ್ಮತನವನ್ನು ಬಿಡುವುದಿಲ್ಲ ಎಂಬುದಕ್ಕೆ ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಓಡಾಡುವ ಬಸ್ ನೋಡಿದರೆ ಗೊತ್ತಾಗುತ್ತದೆ. ಕನ್ನಡ ಲಿಪಿಯಲ್ಲಿ ಬೆದ್ರ ಎಂದು ಬರೆಯಲಾಗಿರುವ ಈ

ಸೌದಿಯ ಮರುಭೂಮಿಯಲ್ಲಿ ರಾರಾಜಿಸುತ್ತಿರುವ ಕರ್ನಾಟಕ ಕರಾವಳಿಯ ಬೆದ್ರ!! Read More »

ಬೆಳ್ತಂಗಡಿ: ಬೈಕ್ ಅಪಘಾತಕ್ಕೆ ಯಕ್ಷಗಾನ ಭಾಗವತ ಬಲಿ

ಸಮಗ್ರ ನ್ಯೂಸ್: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವಿನಲ್ಲಿ ನಡೆದಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ಅಂಡಿಂಜೆ (40) ಸಾವನಪ್ಪಿದವರು. ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಸತೀಶ್ ಆಚಾರ್ಯ ಅವರು ತಮ್ಮ ಬೈಕ್‌ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿರುವ

ಬೆಳ್ತಂಗಡಿ: ಬೈಕ್ ಅಪಘಾತಕ್ಕೆ ಯಕ್ಷಗಾನ ಭಾಗವತ ಬಲಿ Read More »

ಹವಾಮಾನ ವರದಿ| ಎ.2 ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಏಪ್ರಿಲ್ ​2ರಿಂದ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ. ಈ ಬಾರಿ

ಹವಾಮಾನ ವರದಿ| ಎ.2 ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ Read More »

ಹಿಮಾಚಲ ಪ್ರದೇಶದ ಕುಲ್ಲುನಲ್ಲಿ ಭೂಕುಸಿತ| 6 ಮಂದಿ ಸಾವು

ಸಮಗ್ರ ನ್ಯೂಸ್: ಹಿಮಾಚಲ ಪ್ರದೇಶದ ಕುಲ್ಲುವಿನ ಗುರುದ್ವಾರ ಮಣಿಕರಣ್ ಸಾಹಿಬ್ ಎದುರಿನ ಪಿಡಬ್ಲ್ಯೂಡಿ ರಸ್ತೆಯ ಬಳಿ ಭಾನುವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಆರು ಜನ ಸಾವನ್ನಪ್ಪಿದ್ದು, ಈ ಪೈಕಿ ಮೂವರು ಮಹಿಳೆಯರು ಇದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ರಸ್ತೆಯ ಅಂಚಿನಲ್ಲಿ ಕುಳಿತಿದ್ದ ಜನರು ದೊಡ್ಡ ಮರವೊಂದು ಉರುಳಿ ಬಿದ್ದ ಪರಿಣಾಮ ನಲುಗಿ ಸಾವನ್ನಪ್ಪಿದರು.ಗಾಯಾಳುಗಳನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಜಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ರಸ್ತೆಬದಿಯ ವ್ಯಾಪಾರಿ, ಕಾರು ಸವಾರ ಮತ್ತು

ಹಿಮಾಚಲ ಪ್ರದೇಶದ ಕುಲ್ಲುನಲ್ಲಿ ಭೂಕುಸಿತ| 6 ಮಂದಿ ಸಾವು Read More »

ಕರಾವಳಿಯಾದ್ಯಂತ ಮಾ.31ರ ನಾಳೆ ಈದ್ ಉಲ್‌ ಫಿತರ್ ಆಚರಣೆ

ಸಮಗ್ರ ನ್ಯೂಸ್: ಶವ್ವಾಲ್ ಚಂದ್ರ ದರ್ಶನವಾದ ಹಿನ್ನೆಲೆ ಕರ್ನಾಟಕದ ಕರಾವಳಿಯಲ್ಲಿ ನಾಳೆ (ಮಾ.31) ರಂದು ಈದ್ ಉಲ್ ಫಿತರ್ ಆಚರಣೆ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಸೋಮವಾರ ಈದ್ ಉಲ್ ಫಿತರ್ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.ದಕ್ಷಿಣಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಸೋಮವಾರ ಹಬ್ಬ ಆಚರಣೆ ಮಾಡಲು ಸೂಚಿಸಲಾಗಿದೆ.ನಾಳೆ ಈದ್ಗಾ, ಮಸೀದಿಗಳಲ್ಲಿ ಮುಸ್ಲಿಮರು ಸಾಮೂಹಿಕ ಹಬ್ಬದ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಕರಾವಳಿಯಾದ್ಯಂತ ಮಾ.31ರ ನಾಳೆ ಈದ್ ಉಲ್‌ ಫಿತರ್ ಆಚರಣೆ Read More »