Editor

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026 ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಮೊದಲ ದಸರಾ ಮಹೋತ್ಸವ ಇದಾಗಿದ್ದು, ನಾಡ ಹಬ್ಬ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಧಾನಸೌಧದ ಸಮ್ಮೇಳನ ಸಭಾಗಂಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಮೈಸೂರು ದಸರಾ ಕುರಿತ ಸಭೆಯಲ್ಲಿ ಮೈಸೂರು ದಸರಾ ಮಹೋತ್ಸವ ಹಾಗೂ ಜಂಬೂಸವಾರಿಗೆ ದಿನಾಂಕ ನಿಗದಿಪಡಿಸಲಾಯಿತು. ಆಗಸ್ಟ್ 26ರಂದು ಮೈಸೂರು ಅರಮನೆ ಪ್ರವೇಶ ದ್ವಾರದಲ್ಲಿ ಗಜಪಡೆಗೆ ಪೂಜೆ […]

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ Read More »

‘ಇಂದಿರಾ ಕಿಟ್’ ಸಿಗೋದು ಡೌಟ್| 10ಕೆಜಿ ಅಕ್ಕಿ ಮುಂದುವರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿ ಬದಲಿಗೆ ತೊಗರಿಬೇಳೆ, ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಕಿಟ್’ ನೀಡುವ ಪ್ರಸ್ತಾವನೆಯನ್ನು ಕೈಬಿಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಜಟಿಲ ಷರತ್ತುಗಳಿಂದಾಗಿ ಕಳೆದ 8 ತಿಂಗಳಿಂದ ಟೆಂಡರ್ ಪ್ರಕ್ರಿಯೆ ನನೆಗುದಿಗೆ ಬಿದ್ದಿರುವುದು ಹಾಗೂ ಮಾಸಿಕ 550 ಕೋಟಿ ರೂ.ಗಳ ಹೆಚ್ಚುವರಿ ಬಜೆಟ್ ಹೊಂದಿಸುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ

‘ಇಂದಿರಾ ಕಿಟ್’ ಸಿಗೋದು ಡೌಟ್| 10ಕೆಜಿ ಅಕ್ಕಿ ಮುಂದುವರಿಕೆ ಸಾಧ್ಯತೆ Read More »

ಬಲ‌ಕಳೆದುಕೊಂಡ‌ ಮುಂಗಾರು| ಮತ್ತೆ ಬರ ಭೀತಿಯತ್ತ ಕರ್ನಾಟಕ

ಸಮಗ್ರ ನ್ಯೂಸ್: ಕರ್ನಾಟಕದ ಪಶ್ಚಿಮ ಘಟ್ಟಗಳ ಭಾಗ, ಕರಾವಳಿ, ಹಲವು ಒಳನಾಡು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಇದೀಗ ತಗ್ಗಿದೆ. ರಾಜ್ಯಾದ್ಯಂತ ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಸೇರಿ ಕೇವಲ 7 ಜಿಲ್ಲೆಗಳಲ್ಲಿ ಮಾತ್ರವೇ ಭಾರೀ ಮಳೆ ನಿರೀಕ್ಷೆ ಇದೆ. ಉಳಿದಂತೆ ಒಣಹವೆ ಮುಂದುವರಿಯುವ ಸಾಧ್ಯತೆಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ರಾಜ್ಯದ ಪ್ರಾದೇಶಿಕ ಕೇಂದ್ರ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರಗಳಿಂದ ಸಾಧಾರಣದಿಂದ ಭಾರೀ, ಅತೀ ಭಾರೀ ಮಳೆ ಕಂಡಿದ್ದ ರಾಜ್ಯದ ವಿವಿಧ

ಬಲ‌ಕಳೆದುಕೊಂಡ‌ ಮುಂಗಾರು| ಮತ್ತೆ ಬರ ಭೀತಿಯತ್ತ ಕರ್ನಾಟಕ Read More »

ಮೊರಾಕೊ ವಿರುದ್ಧ ಪ್ರಾನ್ಸ್ ಭರ್ಜರಿ ಗೆಲುವು| ಸೆಮಿಫೈನಲ್ಸ್ ಗೆ ಲಗ್ಗೆ ಇರಿಸಿದ ಎಂಬಾಪೆ ಪಡೆ

ಸಮಗ್ರ ನ್ಯೂಸ್: 2026 ಫಿಫಾ ವಿಶ್ವಕಪ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊರಾಕ್ಕೊ ವಿರುದ್ಧ 2-0 ಗೋಲುಗಳ ಅಂತರದ ಜಯ ಸಾಧಿಸಿರುವ ಫ್ರಾನ್ಸ್, ಸೆಮಿಫೈನಲ್‌ಗೆ ಪ್ರವೇಶಿಸಿದೆ. ಇದರೊಂದಿಗೆ ಆಫ್ರಿಕಾದ ಬಲಿಷ್ಠ ತಂಡ ಮೊರಾಕ್ಕೊದ ಕನಸು ಭಗ್ನಗೊಂಡಿದೆ. ಇಲ್ಲಿನ ಪ್ರಖ್ಯಾತ ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಮೊರಾಕ್ಕೊ ತಂಡವನ್ನು ಮಣಿಸಿದ ಫ್ರಾನ್ಸ್ ಸತತ ಮೂರನೇ ಬಾರಿಗೆ ಸೆಮಿಫೈನಲ್‌ ಪ್ರವೇಶಿಸಿತು. ಪಂದ್ಯದ ದ್ವಿತೀಯಾರ್ಧದಲ್ಲಿ ಮಿಂಚಿದ ನಾಯಕ ಕೈಲಿಯನ್ ಎಂಬಾಪೆ ಮತ್ತು ಒಸ್ಮಾನ್‌ ಡೆಂಬೆಲೆ ತಲಾ ಒಂದು

ಮೊರಾಕೊ ವಿರುದ್ಧ ಪ್ರಾನ್ಸ್ ಭರ್ಜರಿ ಗೆಲುವು| ಸೆಮಿಫೈನಲ್ಸ್ ಗೆ ಲಗ್ಗೆ ಇರಿಸಿದ ಎಂಬಾಪೆ ಪಡೆ Read More »

ಸುಳ್ಯ: “ಅಧಿಕಾರ ಬಳಸಿಕೊಂಡು 2ನೇ ಮದುವೆಗೆ ಸಿದ್ಧತೆ”| ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ

ಸಮಗ್ರ ನ್ಯೂಸ್: “ನನ್ನ ಪತಿ ಟಿ.ಎಂ.ಶಹೀದ್ ತೆಕ್ಕಿಲ್ ರವರು ನನ್ನ ಮದುವೆಯ ಸಂದರ್ಭದಲ್ಲಿ ನನ್ನ ತಂದೆ ನನಗಾಗಿ ನೀಡಿದ್ದ 110 ಪವನ್ ಚಿನ್ನ ಮತ್ತು ನನಗೆ ನೀಡಿರುವ ಆಸ್ತಿಯನ್ನು ಕಬಳಿಸಿ, ಇದೀಗ ನನಗೆ ಮತ್ತು ನನ್ನ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ. ಅದರ ಬಗ್ಗೆ ಅವರಲ್ಲಿ ಮಾತನಾಡಿದರೆ ‘ ನೀನು ಸಿ.ಎಂ. ಅಲ್ಲ ಪಿ.ಎಂ. ಬಳಿ ಹೋದರೂ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ’ ಎಂದು ಗದರಿಸುತ್ತಿದ್ದಾರೆ”, ಅಲ್ಲದೇ ರಾಜಕೀಯ ಪ್ರಭಾವ ಬಳಸಿಕೊಂಡು ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ” ಎಂದು

ಸುಳ್ಯ: “ಅಧಿಕಾರ ಬಳಸಿಕೊಂಡು 2ನೇ ಮದುವೆಗೆ ಸಿದ್ಧತೆ”| ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ Read More »

ರಾಜ್ಯದ ಸರ್ಕಾರಿ ಬಸ್ ಗಳಲ್ಲಿ ಧೂಮಪಾನ, ತಂಬಾಕು, ಗುಟ್ಕಾ ಸೇವನೆ ಸಂಪೂರ್ಣ ನಿಷೇದ| ತಪ್ಪಿದಲ್ಲಿ ಬೀಳಲಿದೆ ಭಾರೀ ದಂಡ

ಸಮಗ್ರ ನ್ಯೂಸ್: ರಾಜ್ಯದ ಪ್ರಯಾಣಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ಸಾರಿಗೆ ಇಲಾಖೆಯ ಎಲ್ಲಾ ನಿಗಮಗಳ ಸಾರ್ವಜನಿಕ ಬಸ್ಸುಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಸಾರಿಗೆ ಸಚಿವರು ಆದೇಶಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಶ್ರೀ ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯದ ಸಾರ್ವಜನಿಕ ಬಸ್ಸುಗಳಲ್ಲಿ ತಂಬಾಕು, ಗುಟ್ಕಾ ತಿನ್ನುವುದು ಹಾಗೂ ಧೂಮಪಾನ ಮಾಡುವುದರಿಂದ ಇತರೆ ಪ್ರಯಾಣಿಕರಿಗೆ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ,

ರಾಜ್ಯದ ಸರ್ಕಾರಿ ಬಸ್ ಗಳಲ್ಲಿ ಧೂಮಪಾನ, ತಂಬಾಕು, ಗುಟ್ಕಾ ಸೇವನೆ ಸಂಪೂರ್ಣ ನಿಷೇದ| ತಪ್ಪಿದಲ್ಲಿ ಬೀಳಲಿದೆ ಭಾರೀ ದಂಡ Read More »

ಅರಣ್ಯ ಇಲಾಖೆಯಲ್ಲಿ 750 ವೀಕ್ಷಕ ಹುದ್ದೆಗೆ ಶೀಘ್ರ ನೇಮಕಾತಿ

ಸಮಗ್ರ ನ್ಯೂಸ್: ಪ್ರಕೃತಿ ಸೇವೆ ಹಾಗೂ ವನ್ಯಜೀವಿಗಳ ರಕ್ಷಣೆಯಲ್ಲಿ ಆಸಕ್ತಿ ಹೊಂದಿರುವ ಯುವಕರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯಾದ್ಯಂತ ಖಾಲಿ ಇರುವ ಒಟ್ಟು 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಿದೆ . ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ (SSLC) ಅಥವಾ 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅಭ್ಯರ್ಥಿಗಳ ವಯಸ್ಸು 18 ರಿಂದ 32

ಅರಣ್ಯ ಇಲಾಖೆಯಲ್ಲಿ 750 ವೀಕ್ಷಕ ಹುದ್ದೆಗೆ ಶೀಘ್ರ ನೇಮಕಾತಿ Read More »

ಭಾರತೀಯ ರೈಲ್ವೆಯಲ್ಲಿ 6565 ಹುದ್ದೆಗಳಿಗೆ ನೇಮಕಾತಿ| ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ರೈಲ್ವೆ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಮತ್ತೊಂದು ಮಹತ್ವದ ಅವಕಾಶ ಲಭ್ಯವಾಗಿದೆ. ರೈಲ್ವೆ ನೇಮಕಾತಿ ಮಂಡಳಿ (RRB) 119 ಸೆಕ್ಷನ್ ಕಂಟ್ರೋಲರ್ ಹಾಗೂ 6,565 ಟೆಕ್ನೀಷಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಸೆಕ್ಷನ್ ಕಂಟ್ರೋಲರ್ ಹುದ್ದೆಗಳು CEN No. 03/2026 ಅಧಿಸೂಚನೆಯಡಿ ಭರ್ತಿಯಾಗಲಿದ್ದು, ಅರ್ಜಿ ಪ್ರಕ್ರಿಯೆ 2026ರ ಜುಲೈ 15ರಿಂದ ಆರಂಭವಾಗುತ್ತದೆ. ಅಭ್ಯರ್ಥಿಗಳು ಆಗಸ್ಟ್ 14ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವ

ಭಾರತೀಯ ರೈಲ್ವೆಯಲ್ಲಿ 6565 ಹುದ್ದೆಗಳಿಗೆ ನೇಮಕಾತಿ| ಇಲ್ಲಿದೆ ಡೀಟೈಲ್ಸ್ Read More »

ಯಲ್ಲಾಪುರ ಬಳಿ ಭೀಕರ ಅಪಘಾತ| ಆರು ಮಂದಿ ದಾರುಣ ಸಾವು

ಸಮಗ್ರ ನ್ಯೂಸ್: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಆರು ಜನ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ಸಮೀಪ ಬಳಗಾರ್ ಬಳಿ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ಹೊರಟಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾಗಿದೆ. ಕ್ರೂಸರ್ ವಾಹನದಲ್ಲಿದ್ದ ಆರು ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಧಾರವಾಡ ಮೂಲದವರು ಎನ್ನಲಾಗಿದೆ. ಕ್ರೂಸರ್ ವಾಹನದ ಚಾಲಕ ಸಂಜೀವ್(33), ಬಸವರಾಜ್(48), ಅಭಿಷೇಕ್ ಈಶ್ವರ್(28), ಅಕ್ಷಯ್(26), ಅಭಿಷೇಕ್(26), ಮಂಜುನಾಥ್ ಅಶೋಕ್ ಚುಲಕಿ(32) ಮೃತಪಟ್ಟವರು ಎಂದು

ಯಲ್ಲಾಪುರ ಬಳಿ ಭೀಕರ ಅಪಘಾತ| ಆರು ಮಂದಿ ದಾರುಣ ಸಾವು Read More »

ರಾಜ್ಯದಲ್ಲಿ ಮತ್ತೆ ದುರ್ಬಲಗೊಳ್ಳಲಿದೆ ಮುಂಗಾರು| ಜು.10ರಿಂದ ಮಳೆ‌ ಪ್ರಮಾಣ ತೀವ್ರ ಕುಸಿತಗೊಳ್ಳುವ ಸಾಧ್ಯತೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ನಿರೀಕ್ಷಿತ ಮಳೆ ಆಗದೇ ಕೇವಲ ತಂಪು ವಾತಾವರಣ ನಿರ್ಮಾಣವಾಗಿದೆ. ಇನ್ನೂ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಅಬ್ಬರಿಸಿದ್ದ ಮುಂಗಾರು ಮಳೆ ಏಕಾಎಕಿ ದುರ್ಬಲಗೊಂಡಿದೆ. ಭಾರೀ ಮಳೆ ಬಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತೆ ಬಿಸಿಲಿನ ವಾತಾವರಣ ಸೃಷ್ಟಿಯಾಗಿದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಇಂದಿನ ಮುನ್ಸೂಚನೆ ಪ್ರಕಾರ, ಶುಕ್ರವಾರವರೆಗೆ ಮಾತ್ರವೇ ರಾಜ್ಯದಲ್ಲಿ ಮಳೆ ಆಗಲಿದೆ. ‘ರೆಡ್

ರಾಜ್ಯದಲ್ಲಿ ಮತ್ತೆ ದುರ್ಬಲಗೊಳ್ಳಲಿದೆ ಮುಂಗಾರು| ಜು.10ರಿಂದ ಮಳೆ‌ ಪ್ರಮಾಣ ತೀವ್ರ ಕುಸಿತಗೊಳ್ಳುವ ಸಾಧ್ಯತೆ Read More »