Editor

ಸೌಜನ್ಯ ‌ಅತ್ಯಾಚಾರ ಮತ್ತು ಕೊಲೆ ಪ್ರಕರಣ| ನ್ಯಾಯಕ್ಕಾಗಿ ಆಗ್ರಹಿಸಿ ‘ಧರ್ಮಸ್ಥಳ ಚಲೋ’ಗೆ ನಿರ್ಣಯ

ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹಾಗೂ ತಪ್ಪಿತಸ್ಥರ ಶಿಕ್ಷೆಗೆ ಆಗ್ರಹಿಸಿ ಧರ್ಮಸ್ಥಳ ಚಲೊ ನಡೆಸಬೇಕು ಎಂಬ ನಿರ್ಣಯವನ್ನು ಸಮಾನ ಮನಸ್ಕರ ಸಭೆ ಕೈಗೊಂಡಿದೆ. ಈ ಪ್ರಕರಣದಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಚಿಂತಕರು, ರಂಗಕರ್ಮಿಗಳು ಹಾಗೂ ಹೋರಾಟಗಾರರು ಭಾಗವಹಿಸಿದ್ದರು. ಪ್ರಕರಣದ ಬಗ್ಗೆ ಚರ್ಚಿಸಿದ ಅವರು, ‘ಪಾದಯಾತ್ರೆ ಅಥವಾ ಬೈಕ್ ರ್‍ಯಾಲಿ ನಡೆಸಬೇಕು. ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶವನ್ನೂ ಆಯೋಜಿಸಬೇಕು. ಅದಕ್ಕೂ ಮೊದಲು ಜಿಲ್ಲಾ ಮಟ್ಟದಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಬೇಕು’ […]

ಸೌಜನ್ಯ ‌ಅತ್ಯಾಚಾರ ಮತ್ತು ಕೊಲೆ ಪ್ರಕರಣ| ನ್ಯಾಯಕ್ಕಾಗಿ ಆಗ್ರಹಿಸಿ ‘ಧರ್ಮಸ್ಥಳ ಚಲೋ’ಗೆ ನಿರ್ಣಯ Read More »

ಮುಲ್ಕಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ| ಸವಾರರಿಬ್ಬರು ದುರ್ಮರಣ

ಸಮಗ್ರ ನ್ಯೂಸ್: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ವೇಗವಾಗಿ ಬಂದ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲೆ ಸಂಚರಿಸುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಎಂಬ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆತ್ಮಾನಂದ (27) ನವೀನ್ ಹೂಗಾರ (26) ಮೃತ ಬೈಕ್ ಸವಾರರು ಎಂದು ತಿಳಿದುಬಂದಿದೆ. ಮೃತರು ಧಾರವಾಡ ಜಿಲ್ಲೆಯ ಕಲ್ಲೂರಿನ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಮಂಗಳೂರು ಉತ್ತರ ಸಂಚಾರಿ

ಮುಲ್ಕಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ| ಸವಾರರಿಬ್ಬರು ದುರ್ಮರಣ Read More »

9 ತಿಂಗಳುಗಳ ಬಳಿಕ ಭೂಮಿಗೆ ಬಂದ ಸುನಿತಾ ವಿಲಿಯಮ್ಸ್

ಸಮಗ್ರ ನ್ಯೂಸ್ : ಒಂಭತ್ತು ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣ(ಐಎಸ್ಎಸ್)ದಲ್ಲಿ ಸಿಲುಕಿಕೊಂಡಿದ್ದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಭಾರತೀಯ ಕಾಲಮಾನ ಬುಧವಾರ ಮುಂಜಾನೆ 3.27ಕ್ಕೆ ಫ್ಲಾರಿಡಾದ ಕಡಲ ತೀರಕ್ಕೆ ಬಂದಿಳಿದಿದ್ದಾರೆ. ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ 9 ತಿಂಗಳಿಗೆ ವಿಸ್ತರಣೆಗೊಂಡಿತ್ತು. ಕೇವಲ ಒಂದು ವಾರದ ಮಟ್ಟಿಗೆ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್

9 ತಿಂಗಳುಗಳ ಬಳಿಕ ಭೂಮಿಗೆ ಬಂದ ಸುನಿತಾ ವಿಲಿಯಮ್ಸ್ Read More »

ದಿ. ಸೌಜನ್ಯಳ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಲು ಹೈಕೋರ್ಟ್ ಅಸ್ತು

ಸಮಗ್ರ ನ್ಯೂಸ್: ಕಳೆದ 13 ವರ್ಷಗಳ‌ ಹಿಂದೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ‌ ಗ್ರಾಮದ ನೇತ್ರಾವತಿ ಸ್ನಾನಘಟ್ಟ ಬಳಿ ಅತ್ಯಾಚಾರಗೈದು ಕೊಲೆಯಾಗಿ ಹೋದ ವಿದ್ಯಾರ್ಥಿನಿ ಸೌಜನ್ಯಳ ನ್ಯಾಯಕ್ಕಾಗಿ ಆಗ್ರಹಿಸಿ ಶಾಂತಿಯುತ ಧರಣಿ, ಪ್ರತಿಭಟನೆ ನಡೆಸಬಹುದು ಎಂದು ಹೈಕೋರ್ಟ್ ಆದೇಶ ನೀಡಿದೆ. ಮಾ.18 ರಂದು ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜನೆ ಮಾಡಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆ ನಿಲ್ಲಿಸುವಂತೆ ಶೇಷಾದ್ರಿಪುರಂ ಪೊಲೀಸರು ನೀಡಿದ್ದ ನೋಟಿಸ್‌ ರಿಟ್‌ ಅರ್ಜಿ ವಿಚೃಣೆ ಮಾಡಿದ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಆದೇಶ ನೀಡಿದ್ದಾರೆ.

ದಿ. ಸೌಜನ್ಯಳ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಲು ಹೈಕೋರ್ಟ್ ಅಸ್ತು Read More »

ಬರೋಬ್ಬರಿ 9 ತಿಂಗಳ ಬಳಿಕ ಭೂಮಿಯತ್ತ ಬುಚ್ ವಿಲ್ಮೋರ್ ಮತ್ತು ಸುನೀತಾ| ಮಾ.19ರಂದು ಭೂಮಿಯಲ್ಲಿ ಲ್ಯಾಂಡ್ ಆಗಲಿದೆ ನೌಕೆ

ಸಮಗ್ರ ನ್ಯೂಸ್: ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಒಂಬತ್ತು ತಿಂಗಳ ಬಳಿಕ ಭೂಮಿಗೆ ಮರಳಲಿದ್ದು, ಇಂದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹೊರಡಲಿದ್ದಾರೆ. ತಾಂತ್ರಿಕ ಅಡಚಣೆಗಳಿಂದಾಗಿ ಸುಮಾರು ಒಂಬತ್ತು ತಿಂಗಳುಗಳಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿರುವ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಅವರನ್ನು ಯಶಸ್ವಿಯಾಗಿ ಭೂಮಿಗೆ ವಾಪಸ್ ಕರೆತರುವ ಕಾರ್ಯಾಚರಣೆ ಆರಂಭವಾಗಿದ್ದು, ಇಂದು ಬಾಹ್ಯಾಕಾಶ ನಿಲ್ದಾಣದಿಂದ ಹೊರಡಲಿದ್ದಾರೆ. ಸ್ಪೇಸ್ ಎಕ್ಸ್ ಕ್ರೂ – 10 ಮಿಷನ್ ಈಗಾಗಲೇ ಬಾಹ್ಯಾಕಾಶ ನಿಲ್ದಾಣ ತಲುಪಿದೆ. ಸುನಿತಾ,

ಬರೋಬ್ಬರಿ 9 ತಿಂಗಳ ಬಳಿಕ ಭೂಮಿಯತ್ತ ಬುಚ್ ವಿಲ್ಮೋರ್ ಮತ್ತು ಸುನೀತಾ| ಮಾ.19ರಂದು ಭೂಮಿಯಲ್ಲಿ ಲ್ಯಾಂಡ್ ಆಗಲಿದೆ ನೌಕೆ Read More »

ರಾಜ್ಯದಲ್ಲಿ ಖೋಟಾನೋಟು ಜಾಲ ಬಯಲಿಗೆ| ಪೊಲೀಸ್ ಸಿಬ್ಬಂದಿಯೇ ಕೃತ್ಯದಲ್ಲಿ ಭಾಗಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಖೋಟಾ ನೋಟುಗಳು ಜಾಲ ಹೆಚ್ಚಾಗುತ್ತಲೇ ಇದ್ದು, ಇದೀಗ ರಾಯಚೂರಿನಲ್ಲಿ ಸಕ್ರಿಯವಾಗಿ ತೊಡಗಿದ್ದ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಓರ್ವ ಪಿಸಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರಿನ ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ ಖೋಟಾ ನೋಟು ಮುದ್ರಿಸಲಾಗುತ್ತಿದೆ ಎಂದು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಈ ವೇಳೆ ಲಕ್ಷಾಂತರ ಮೌಲ್ಯದ ಖೋಟಾ ನೋಟು ಹಾಗೂ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಬಿಳಿ ಬಣ್ಣದ ಪೇಪರ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ರಾಜ್ಯದಲ್ಲಿ ಖೋಟಾನೋಟು ಜಾಲ ಬಯಲಿಗೆ| ಪೊಲೀಸ್ ಸಿಬ್ಬಂದಿಯೇ ಕೃತ್ಯದಲ್ಲಿ ಭಾಗಿ Read More »

ಹೊಸಕೋಟೆ: ಮಗುವಿನ ಮುಂದೆ ವ್ಯಕ್ತಿಯೊಬ್ಬರ ಮೇಲೆ ಅಮಾನವೀಯವಾಗಿ ಹಲ್ಲೆ

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದೆ. ಹಲ್ಲೆಯ ದೃಶ್ಯಗಳನ್ನು ಸೆರೆಹಿಡಿಯಾಗಿದ್ದು, ಇದೀಗ ಅದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಹೊಸಕೋಟೆಯಲ್ಲಿ ಲತಾ ಯಾದವ್ ಎಂಬ ಮಹಿಳೆಯ ಮನೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಅವಮಾನಿಸಲಾಗಿದೆ. ಚಂದನ, ಭರತ್, ಶಿವು ಮತ್ತು ಇತರರು ಸೇರಿದಂತೆ ಆಕೆಯ ಕುಟುಂಬ ಸದಸ್ಯರು ಹಲ್ಲೆಯಲ್ಲಿ ಭಾಗಿಯಾಗಿರುವುದು ವಿಡಿಯೋದಲ್ಲಿ ಕಾಣಸಿಗುತ್ತದೆ. ವ್ಯಕ್ತಿಗೆ ದೈಹಿಕ ಹಿಂಸೆ, ಅವಮಾನ ಮತ್ತು ಮಾನಸಿಕ ಕಿರುಕುಳ ನೀಡಲಾಗಿದೆ ಎಂದು

ಹೊಸಕೋಟೆ: ಮಗುವಿನ ಮುಂದೆ ವ್ಯಕ್ತಿಯೊಬ್ಬರ ಮೇಲೆ ಅಮಾನವೀಯವಾಗಿ ಹಲ್ಲೆ Read More »

ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ಸಮಗ್ರ ನ್ಯೂಸ್: ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ ಆಗಿರುವಂತಹ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಸಂಭವಿಸಿದೆ. ಚೌಡಯ್ಯ(70), ಭರತ್(13) ಮತ್ತು ಧನುಷ್(10) ಮೃತರು. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ತಾತ ಚೌಡಯ್ಯ ಇಳಿದಿದ್ದಾರೆ. ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ. ಮೃತರನ್ನು ಟಿ. ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳು ಎಂದು ಗುರುತಿಸಲಾಗಿದೆ. ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ

ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ Read More »

ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಪ್ರದೀಪ್ ಈಶ್ವರ್

ಸಮಗ್ರ ನ್ಯೂಸ್: ಕಾಂಗ್ರೆಸ್‌ ಪಕ್ಷದ ಶಾಸಕ ಪ್ರದೀಪ್‌ ಈಶ್ವರ್‌ ತಮ್ಮ ಡೈಲಾಗ್‌ಗಳಿಂದಲೇ ಫೇಮಸ್‌ ಆದವರು. ಆದರೆ ಇದೀಗ ಸರ್ಕಾರದ ವಿಚಾರವಾಗಿ ಏಕವಚನದಲ್ಲಿ ಅವಾಜ್ ಹಾಕಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ನಿನ್ನೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು ಇದೇ ವೇದಿಕೆಯಲ್ಲಿ ಬಿಜೆಪಿ ಸಂಸದ ಪಿಸಿ ಮೋಹನ್‌ ಕೂಡ ಇದ್ದು, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಸರ್ಕಾರಿ ಕಾರ್ಯಕ್ರಮವು ರಾಜಕೀಯ ಕಿತ್ತಾಟದ ವೇದಿಕೆಯಾಗಿ ಬದಲಾಗಿದೆ. ಈ

ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಪ್ರದೀಪ್ ಈಶ್ವರ್ Read More »

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ

ಸಮಗ್ರ ನ್ಯೂಸ್: ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಶುಕ್ರವಾರ (ಮಾರ್ಚ್ 14 ರಂದು) ವಿಧಿವಶರಾದರು. ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕರಾಗಿದರು. ಪಂಚಾಕ್ಷರಿ ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ Read More »