Editor

ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ನಿಧನ

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಇದೀಗ ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದರು. ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾಂತಾರ: […]

ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ನಿಧನ Read More »

ದ.ಕ ಜಿಲ್ಲಾ ಬಂದ್ ಗೆ ಕರೆ ನೀಡಿದ್ದ ಶರಣ್ ಪಂಪ್‌ವೆಲ್ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ರೌಡಿಶೀಟರ್ ಹಾಗೂ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ತಕ್ಷಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಬಂದ್ ಕರೆ ನೀಡಿದ್ದ ಹಿನ್ನೆಲೆ ಇದೀಗ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಬಂದ್ ಕರೆ ನೀಡಿದ್ದ ಹಿನ್ನೆಲೆ ಇದೀಗ VHP ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ವಿರುದ್ಧ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ

ದ.ಕ ಜಿಲ್ಲಾ ಬಂದ್ ಗೆ ಕರೆ ನೀಡಿದ್ದ ಶರಣ್ ಪಂಪ್‌ವೆಲ್ ಮೇಲೆ ಎಫ್ಐಆರ್ Read More »

ಭಾರತ‌ ಯುದ್ಧ ಸನ್ನಧ್ದ| ನಾಳೆ ದೇಶಾದ್ಯಂತ ಮೊಳಗಲಿದೆ ‘ವಾರ್ ಸೈರನ್’

ಸಮಗ್ರ ನ್ಯೂಸ್: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸೇಡು ತೀರಿಸಿಕೊಳ್ಳಲು ಭಾರತ ಶತ್ರು ರಾಷ್ಟ್ರ ಪಾಕಿಸ್ತಾನದ ಜೊತೆ ಯುದ್ಧ ಮಾಡಲು ಸಹ ಸಿದ್ಧವಾಗಿದೆ. ಯುದ್ಧಕ್ಕೆ ಮಿಲಿಟರಿ ಸಿದ್ಧತೆಗಳ ಮಧ್ಯೆ, ಭಾರತ ಸರ್ಕಾರವು ನಾಗರಿಕ ಮಟ್ಟದಲ್ಲಿ ಯುದ್ಧಕ್ಕೆ ಸಿದ್ಧತೆಗಳನ್ನು ಪ್ರಾರಂಭಿಸಿದೆ. ದೇಶಾದ್ಯಂತ 244 ಜಿಲ್ಲೆಗಳಲ್ಲಿ ನಾಗರಿಕ ರಕ್ಷಣಾ ಅಣಕು ಕವಾಯತುಗಳು, ಅಭ್ಯಾಸಗಳು ಮತ್ತು ಪೂರ್ವಾಭ್ಯಾಸಗಳನ್ನು ನಡೆಸಲು ಕೇಂದ್ರ ಗೃಹ ಸಚಿವಾಲಯವು ಆದೇಶಗಳನ್ನು ಹೊರಡಿಸಿದೆ. ಜನರಿಗೆ ಆತ್ಮರಕ್ಷಣೆಯ ತರಬೇತಿ ನೀಡಬೇಕು. ಪಾಕಿಸ್ತಾನದೊಂದಿಗಿನ ಯುದ್ಧ ಪ್ರಾರಂಭವಾಗುವ ಮೊದಲು 1971 ರಲ್ಲಿ ಇಂತಹ ಅಣಕು

ಭಾರತ‌ ಯುದ್ಧ ಸನ್ನಧ್ದ| ನಾಳೆ ದೇಶಾದ್ಯಂತ ಮೊಳಗಲಿದೆ ‘ವಾರ್ ಸೈರನ್’ Read More »

ಸಮಗ್ರ ಕರ್ನಾಟಕದ ಕ್ಷಮೆ ಕೇಳಿದ ಗಾಯಕ ಸೋನುನಿಗಮ್

ಸಮಗ್ರ ನ್ಯೂಸ್: ಕಾರ್ಯಕ್ರಮ ಒಂದರಲ್ಲಿ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಖ್ಯಾತ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಮುಂದೆ ಮಂಡಿಯೂರಿದ್ಧು, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕ್ಷಮಿಸು ಕರ್ನಾಟಕ ಎಂದು ಪೋಸ್ಟ್ ಹಾಕಿದ್ದಾರೆ ಕೊನೆಗೂ ಕನ್ನಡಿಗರಿಗೆ ಸೋನು ನಿಗಮ್ ಕ್ಷಮೆ ಕೇಳಿದ್ದಾರೆ. ಕನ್ನಡಿಗರ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದರು ಈ ವಿಚಾರವಾಗಿ ಸೋನು ನಿಗಮ್ ಇದೀಗ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿ ಸೋನು ನಿಗಮ್ ಕೊನೆಗೂ ಕ್ಷಮೆ ಕೇಳಿದ್ದಾರೆ.

ಸಮಗ್ರ ಕರ್ನಾಟಕದ ಕ್ಷಮೆ ಕೇಳಿದ ಗಾಯಕ ಸೋನುನಿಗಮ್ Read More »

ಮನೆಕೆಲಸದಾಕೆಯಿಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ| ಆರೋಪಿ ಮಹಿಳೆಯ ಬಂಧನ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಹೈದರಾಬಾದ್‌ನ ಜೂಬಿಲಿ ಹಿಲ್ಸ್‌ನಲ್ಲಿರುವ ಮನೆಯಲ್ಲಿ ಮನೆಗೆಲಸದಾಕೆಯಾಗಿ ಕೆಲಸ ಮಾಡುತ್ತಿದ್ದ ಈ ಮಹಿಳೆ, ತನ್ನ ಸಹೋದ್ಯೋಗಿಯ 17 ವರ್ಷದ ಮಗನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಜೂಬಿಲಿ ಹಿಲ್ಸ್‌ನಲ್ಲಿರುವ ಮನೆಯೊಂದರಲ್ಲಿ ಮನೆಗೆಲಸದಾಕೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಏಪ್ರಿಲ್ 29 ರಂದು ಮಹಿಳೆ 17 ವರ್ಷದ ಬಾಲಕನಿಗೆ

ಮನೆಕೆಲಸದಾಕೆಯಿಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ| ಆರೋಪಿ ಮಹಿಳೆಯ ಬಂಧನ Read More »

ರಾಮ ದೇವರಲ್ಲ, ಪೌರಾಣಿಕ ವ್ಯಕ್ತಿ| ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸವೊಂದರಲ್ಲಿ ಭಗವಾನ್ ರಾಮ ಮತ್ತು ಇತರ ಹಿಂದೂ ದೇವತೆಗಳನ್ನು “ಪೌರಾಣಿಕ ವ್ಯಕ್ತಿಗಳು” ಎಂದು ಉಲ್ಲೇಖಿಸುವ ಮೂಲಕ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ, ರಾಹುಲ್ ಗಾಂಧಿ, “ಎಲ್ಲರೂ ಪೌರಾಣಿಕ ವ್ಯಕ್ತಿಗಳು; ಭಗವಾನ್ ರಾಮನು ಆ ರೀತಿಯವನು, ಅವನು ಕ್ಷಮಿಸುತ್ತಿದ್ದನು, ಅವನು ಸಹಾನುಭೂತಿಯುಳ್ಳವನಾಗಿದ್ದನು.”ಎಂದಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ, ಅವರು ಮತ್ತು ಕಾಂಗ್ರೆಸ್ ಪಕ್ಷವು ಹಿಂದೂ ನಂಬಿಕೆಗಳನ್ನು ದುರ್ಬಲಗೊಳಿಸುತ್ತಿದೆ ಎಂದು

ರಾಮ ದೇವರಲ್ಲ, ಪೌರಾಣಿಕ ವ್ಯಕ್ತಿ| ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ Read More »

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಖಂಡಿಸಿ ಚಿಕ್ಕಮಗಳೂರು ಬಂದ್| ಅನುಮತಿ ಇಲ್ಲದಿದ್ದರೂ ಕಾಫಿನಾಡು ಸ್ಥಬ್ದ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ (ವಿ.ಎಚ್.ಪಿ.) ಹಾಗೂ ಬಜರಂಗದಳ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ. ಜಿಲ್ಲಾಡಳಿತದ ವಿರೋಧದ ನಡುವೆಯೂ ಈ ಬಂದ್‌ಗೆ ಕಾಫಿನಾಡಿನ ಗ್ರಾಮೀಣ ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೇರಿದಂತೆ ಮಂಗಳೂರು-ಚಿಕ್ಕಮಗಳೂರು ಗಡಿ ಗ್ರಾಮಗಳು ಸಂಪೂರ್ಣ ಸ್ಥಬ್ಧವಾಗಿವೆ. ಬೆಳಿಗ್ಗೆ 9 ಗಂಟೆಯಾದರೂ ಅಂಗಡಿ-ಮುಂಗಟ್ಟುಗಳು ತೆರೆಯದೇ ಇದ್ದು, ಜನಜೀವನ ಸಂಪೂರ್ಣ ಸ್ತಬ್ಧವಾಗಿದೆ. ಕೊಟ್ಟಿಗೆಹಾರದಲ್ಲಿ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿವೆ,

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಖಂಡಿಸಿ ಚಿಕ್ಕಮಗಳೂರು ಬಂದ್| ಅನುಮತಿ ಇಲ್ಲದಿದ್ದರೂ ಕಾಫಿನಾಡು ಸ್ಥಬ್ದ Read More »

ಹಿಂದೂಗಳನ್ನು ಕೊಂದಾತ ಹಿಂದೂ ಹೋರಾಟಗಾರ ಹೇಗಾಗುತ್ತಾನೆ? | ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲು ತಡಕಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಖಂಡಿಸಲು ಸುದ್ದಿಗೋಷ್ಠಿ ಕರೆದಿದ್ದ ಸುಳ್ಯದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ತಡವರಿಸಿ ಸುದ್ದಿಗೋಷ್ಠಿಯನ್ನೇ ಅವಸರದಲ್ಲಿ ಮುಗಿಸಿದ ಘಟನೆ ರವಿವಾರ ಮಂಗಳೂರಿನಲ್ಲಿ ನಡೆಯಿತು. ರವಿವಾರ ಮಧ್ಯಾಹ್ನ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದ ಭಾಗೀರಥಿ ಮುರುಳ್ಯ ಅವರು, ಸುಹಾಸ್ ಶೆಟ್ಟಿ ಕೊಲೆಯನ್ನು ಖಂಡಿಸಿ ಮಾತನಾಡಿದರು. ಸುಹಾಸ್ ಶೆಟ್ಟಿ ಹಿಂದುತ್ವಕ್ಕಾಗಿ ಹೋರಾಡಿದ ಯುವಕ. ಆತನನನ್ನು ರೌಡಿಶೀಟರ್ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದರು. ಸುಹಾಸ್ ಶೆಟ್ಟಿ

ಹಿಂದೂಗಳನ್ನು ಕೊಂದಾತ ಹಿಂದೂ ಹೋರಾಟಗಾರ ಹೇಗಾಗುತ್ತಾನೆ? | ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲು ತಡಕಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ Read More »

ಧರ್ಮಸ್ಥಳ: ಹೃದಯಾಘಾತದಿಂದ ಬಾಲಕ ಸಾವು

ಸಮಗ್ರ ನ್ಯೂಸ್: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್‌ (16) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಉಜಿರೆ ಖಾಸಗಿ ಆಸ್ಪತ್ರೆಯಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹವನ್ನು ಶವಪರೀಕ್ಷೆಗೆಂದು ಸಾಗಿಸಲಾಗಿದೆ. ಧರ್ಮಸ್ಥಳ

ಧರ್ಮಸ್ಥಳ: ಹೃದಯಾಘಾತದಿಂದ ಬಾಲಕ ಸಾವು Read More »

ಕೇಸ್ ಗಳಿವೆ ಎಂದ ಮಾತ್ರಕ್ಕೆ ರೌಡಿಶೀಟರ್ ಎನ್ನುವುದಾದರೆ ಡಿಸಿಎಂ, ಗೃಹಸಚಿವರನ್ನ ಗೂಂಡಾ ಎನ್ನಬಹುದೇ? ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ

ಸಮಗ್ರ ನ್ಯೂಸ್: ಹಿಂದುತ್ವಕ್ಕಾಗಿ ಕೆಲಸ ಮಾಡಿ ಹತ್ಯೆಗೊಳಗಾದ ಸುಹಾಸ್‌ ಶೆಟ್ಟಿ, ಅವರನ್ನು ರೌಡಿ ಶೀಟರ್‌ ಎಂದು ಬಿಂಬಿಸುವುದು ಸರಿಯಲ್ಲ. ಕೇಸ್‌ಗಳಿವೆ ಎಂಬ ಮಾತ್ರಕ್ಕೆ ಅವರನ್ನು ರೌಡಿ ಶೀಟರ್‌ ಎನ್ನುವುದಾದರೆ ಹಲವು ಕೇಸ್‌ಗಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಪರಮಶ್ವರ್ ಅವರನ್ನೂ ಗೂಂಡಾ ಎನ್ನಬಹುದೇ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ ಸುಹಾಸ್‌ ಶೆಟ್ಟಿ ಅವರು ಆತ್ಮರಕ್ಷಣೆಗೂ ಆಯುಧ ಇರಿಸದಂತೆ ಪೊಲೀಸರು ಪದೇ ಪದೇ ತಪಾಸಣೆ ನಡೆಸಿದ್ದಾರೆ, ಪೊಲೀಸರಿಗೆ ತಿಳಿದೇ

ಕೇಸ್ ಗಳಿವೆ ಎಂದ ಮಾತ್ರಕ್ಕೆ ರೌಡಿಶೀಟರ್ ಎನ್ನುವುದಾದರೆ ಡಿಸಿಎಂ, ಗೃಹಸಚಿವರನ್ನ ಗೂಂಡಾ ಎನ್ನಬಹುದೇ? ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ Read More »