ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮುಂಗಾರು ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮಾಹಿತಿ ಪಡೆದ ಸಚಿವ ಕೃಷ್ಣ ಬೈರೇಗೌಡ
ಸಮಗ್ರ ನ್ಯೂಸ್: ಪ್ರಸ್ತುತ ವರ್ಷದ ಮಾನ್ಸೂನ್ನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಜೂನ್- ಸೆಪ್ಟೆಂಬರ್ ಅವಧಿಯಲ್ಲಿ ಮಾನ್ಸೂನ್ ಚುರುಕಾಗಲಿದೆ. ಏಪ್ರಿಲ್-ಮೇ ತಿಂಗಳಲ್ಲೂ ಉತ್ತಮ ಮಳೆ ನಿರೀಕ್ಷೆಯಿದೆ. ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ 2025ನೇ ಸಾಲಿನ ಹವಾಮಾನ ಪರಿಸ್ಥಿತಿ ಕುರಿತು ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ಉತ್ತರ ಕರ್ನಾಟಕ ಸೇರಿದಂತೆ […]










