ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ ವರದಿ ಸಲ್ಲಿಸಲು ಕೋರ್ಟ್ ಆದೇಶ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆ. 25ರಿಂದ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ. ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಗದ ಕಾರಣ, ಪೋಷಕರು ಹೈಕೋರ್ಟ್ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಪೊಲೀಸರಿಗೆ ತನಿಖೆ ನಡೆಸಿ ಮಾ.12ರೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ. ವಿದ್ಯಾರ್ಥಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು. ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್ […]










