ಕುಕ್ಕೆ ಸುಬ್ರಹ್ಮಣ್ಯ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರಿಗೆ ಆಹ್ವಾನ| ಕ್ಷೇತ್ರ ಸಂರಕ್ಷಣಾ ವೇದಿಕೆಯಿಂದ ವಿರೋಧ
ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ನಡೆಯುತ್ತಿದೆ. ಆದರೆ, ಈ ಮಹೋತ್ಸವಕ್ಕೆ ಸ್ಪೀಕರ್ ಯುಟಿ ಖಾದರ್ ಸೇರಿದಂತೆ ಅನ್ಯಧರ್ಮೀಯ ನಾಯಕರನ್ನು ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆಯು ಇದನ್ನು ವಿರೋಧಿಸಿ ಇಂದು ಪ್ರತಿಭಟನೆಗೆ ಮುಂದಾಗಿದ್ದು, ಅನ್ಯಧರ್ಮೀಯ ನಾಯಕರಿಗೆ ಕೊಟ್ಟಿರುವ ಆಹ್ವಾನಗಳನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆಗ್ರಹಿಸಿದೆ. ಸ್ಪೀಕರ್ ಯು.ಟಿ. ಖಾದರ್, ಐವಾನ್ ಡಿಸೋಜ, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಗಫೂರ್, ಕನಿಷ್ಠ ವೇತನ ಸಲಹಾ […]










