Editor

ಬರೋಬ್ಬರಿ 9 ತಿಂಗಳ ಬಳಿಕ ಭೂಮಿಯತ್ತ ಬುಚ್ ವಿಲ್ಮೋರ್ ಮತ್ತು ಸುನೀತಾ| ಮಾ.19ರಂದು ಭೂಮಿಯಲ್ಲಿ ಲ್ಯಾಂಡ್ ಆಗಲಿದೆ ನೌಕೆ

ಸಮಗ್ರ ನ್ಯೂಸ್: ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಒಂಬತ್ತು ತಿಂಗಳ ಬಳಿಕ ಭೂಮಿಗೆ ಮರಳಲಿದ್ದು, ಇಂದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹೊರಡಲಿದ್ದಾರೆ. ತಾಂತ್ರಿಕ ಅಡಚಣೆಗಳಿಂದಾಗಿ ಸುಮಾರು ಒಂಬತ್ತು ತಿಂಗಳುಗಳಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿರುವ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಅವರನ್ನು ಯಶಸ್ವಿಯಾಗಿ ಭೂಮಿಗೆ ವಾಪಸ್ ಕರೆತರುವ ಕಾರ್ಯಾಚರಣೆ ಆರಂಭವಾಗಿದ್ದು, ಇಂದು ಬಾಹ್ಯಾಕಾಶ ನಿಲ್ದಾಣದಿಂದ ಹೊರಡಲಿದ್ದಾರೆ. ಸ್ಪೇಸ್ ಎಕ್ಸ್ ಕ್ರೂ – 10 ಮಿಷನ್ ಈಗಾಗಲೇ ಬಾಹ್ಯಾಕಾಶ ನಿಲ್ದಾಣ ತಲುಪಿದೆ. ಸುನಿತಾ,

ಬರೋಬ್ಬರಿ 9 ತಿಂಗಳ ಬಳಿಕ ಭೂಮಿಯತ್ತ ಬುಚ್ ವಿಲ್ಮೋರ್ ಮತ್ತು ಸುನೀತಾ| ಮಾ.19ರಂದು ಭೂಮಿಯಲ್ಲಿ ಲ್ಯಾಂಡ್ ಆಗಲಿದೆ ನೌಕೆ Read More »

ರಾಜ್ಯದಲ್ಲಿ ಖೋಟಾನೋಟು ಜಾಲ ಬಯಲಿಗೆ| ಪೊಲೀಸ್ ಸಿಬ್ಬಂದಿಯೇ ಕೃತ್ಯದಲ್ಲಿ ಭಾಗಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಖೋಟಾ ನೋಟುಗಳು ಜಾಲ ಹೆಚ್ಚಾಗುತ್ತಲೇ ಇದ್ದು, ಇದೀಗ ರಾಯಚೂರಿನಲ್ಲಿ ಸಕ್ರಿಯವಾಗಿ ತೊಡಗಿದ್ದ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಓರ್ವ ಪಿಸಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರಿನ ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ ಖೋಟಾ ನೋಟು ಮುದ್ರಿಸಲಾಗುತ್ತಿದೆ ಎಂದು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಈ ವೇಳೆ ಲಕ್ಷಾಂತರ ಮೌಲ್ಯದ ಖೋಟಾ ನೋಟು ಹಾಗೂ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಬಿಳಿ ಬಣ್ಣದ ಪೇಪರ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ರಾಜ್ಯದಲ್ಲಿ ಖೋಟಾನೋಟು ಜಾಲ ಬಯಲಿಗೆ| ಪೊಲೀಸ್ ಸಿಬ್ಬಂದಿಯೇ ಕೃತ್ಯದಲ್ಲಿ ಭಾಗಿ Read More »

ಹೊಸಕೋಟೆ: ಮಗುವಿನ ಮುಂದೆ ವ್ಯಕ್ತಿಯೊಬ್ಬರ ಮೇಲೆ ಅಮಾನವೀಯವಾಗಿ ಹಲ್ಲೆ

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದೆ. ಹಲ್ಲೆಯ ದೃಶ್ಯಗಳನ್ನು ಸೆರೆಹಿಡಿಯಾಗಿದ್ದು, ಇದೀಗ ಅದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಹೊಸಕೋಟೆಯಲ್ಲಿ ಲತಾ ಯಾದವ್ ಎಂಬ ಮಹಿಳೆಯ ಮನೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಅವಮಾನಿಸಲಾಗಿದೆ. ಚಂದನ, ಭರತ್, ಶಿವು ಮತ್ತು ಇತರರು ಸೇರಿದಂತೆ ಆಕೆಯ ಕುಟುಂಬ ಸದಸ್ಯರು ಹಲ್ಲೆಯಲ್ಲಿ ಭಾಗಿಯಾಗಿರುವುದು ವಿಡಿಯೋದಲ್ಲಿ ಕಾಣಸಿಗುತ್ತದೆ. ವ್ಯಕ್ತಿಗೆ ದೈಹಿಕ ಹಿಂಸೆ, ಅವಮಾನ ಮತ್ತು ಮಾನಸಿಕ ಕಿರುಕುಳ ನೀಡಲಾಗಿದೆ ಎಂದು

ಹೊಸಕೋಟೆ: ಮಗುವಿನ ಮುಂದೆ ವ್ಯಕ್ತಿಯೊಬ್ಬರ ಮೇಲೆ ಅಮಾನವೀಯವಾಗಿ ಹಲ್ಲೆ Read More »

ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ಸಮಗ್ರ ನ್ಯೂಸ್: ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ ಆಗಿರುವಂತಹ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಸಂಭವಿಸಿದೆ. ಚೌಡಯ್ಯ(70), ಭರತ್(13) ಮತ್ತು ಧನುಷ್(10) ಮೃತರು. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ತಾತ ಚೌಡಯ್ಯ ಇಳಿದಿದ್ದಾರೆ. ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ. ಮೃತರನ್ನು ಟಿ. ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳು ಎಂದು ಗುರುತಿಸಲಾಗಿದೆ. ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ

ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ Read More »

ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಪ್ರದೀಪ್ ಈಶ್ವರ್

ಸಮಗ್ರ ನ್ಯೂಸ್: ಕಾಂಗ್ರೆಸ್‌ ಪಕ್ಷದ ಶಾಸಕ ಪ್ರದೀಪ್‌ ಈಶ್ವರ್‌ ತಮ್ಮ ಡೈಲಾಗ್‌ಗಳಿಂದಲೇ ಫೇಮಸ್‌ ಆದವರು. ಆದರೆ ಇದೀಗ ಸರ್ಕಾರದ ವಿಚಾರವಾಗಿ ಏಕವಚನದಲ್ಲಿ ಅವಾಜ್ ಹಾಕಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ನಿನ್ನೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು ಇದೇ ವೇದಿಕೆಯಲ್ಲಿ ಬಿಜೆಪಿ ಸಂಸದ ಪಿಸಿ ಮೋಹನ್‌ ಕೂಡ ಇದ್ದು, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಸರ್ಕಾರಿ ಕಾರ್ಯಕ್ರಮವು ರಾಜಕೀಯ ಕಿತ್ತಾಟದ ವೇದಿಕೆಯಾಗಿ ಬದಲಾಗಿದೆ. ಈ

ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಪ್ರದೀಪ್ ಈಶ್ವರ್ Read More »

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ

ಸಮಗ್ರ ನ್ಯೂಸ್: ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಶುಕ್ರವಾರ (ಮಾರ್ಚ್ 14 ರಂದು) ವಿಧಿವಶರಾದರು. ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕರಾಗಿದರು. ಪಂಚಾಕ್ಷರಿ ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ Read More »

‘ಮೇಡಂ’ ಅಂದ್ರೆ ಗೌರವ ಸೂಚಕ ಅಂದ್ಕೊಂಡ್ರಾ? ಇದರ‌ ನಿಜಾರ್ಥ ಗೊತ್ತಾದ್ರೆ ನೀವು ಹೌಹಾರೋದು ಪಕ್ಕಾ!! ಏನಿದು ‘ಮೇಡಂ’ ಕಹಾನಿ? ಇಲ್ಲಿದೆ ನೋಡಿ…

ಸಮಗ್ರ ನ್ಯೂಸ್: ದೇಶದಲ್ಲಿ ಆಂಗ್ಲರ ಕೊಡುಗೆಯನ್ನು ಪ್ರಸಾದ ಎಂದು ಸ್ವೀಕರಿಸಿ ಶತಮಾನ ಕಳೆದಿದೆ. ಇಂಗ್ಲಿಷ್​ ಮಾತನಾಡಿದರಷ್ಟೇ ಮಹಾನ್​ ಸಾಧಕರು, ಅವರು ಆಕಾಶದಲ್ಲಿ ತೇಲಾಡುವವರು ಎಂದೋ ಅಂದುಕೊಂಡು ಆಗಿಬಿಟ್ಟಿದೆ. ಕನ್ನಡ ನಾಡಿನಲ್ಲಿಯೇ ಹುಟ್ಟಿ, ಕನ್ನಡದ ಮಣ್ಣಿನಲ್ಲಿಯೇ ಬೆಳೆದು, ಇಲ್ಲಿಯ ಅನ್ನ ತಿನ್ನುತ್ತಾ, ಇಲ್ಲಿಯದ್ದೇ ಹಣವನ್ನು ಸಂಪಾದನೆ ಮಾಡುತ್ತಿದ್ದವರು ಸ್ಟೈಲ್​ ಆಗಿ ‘ಕನಡ್​ ಗೊತ್ತಿಲ್​’ ಎಂದೋ ‘ಸಲಪ ಸಲಪ ಕನಡ ಗೊತು’ ಎಂದು ಸ್ಟೈಲ್​ ಆಗಿ ಹೇಳಿಬಿಟ್ಟರೆ ಸಾಕು ಹೆಚ್ಚಿನವರಿಗೆ ಅದು ಹೆಮ್ಮೆಯ ವಿಷಯವಾಗಿದೆ. ಇನ್ನು ಕೆಲವು ಅಪ್ಪ-ಅಮ್ಮಂದಿರು ತಮ್ಮ

‘ಮೇಡಂ’ ಅಂದ್ರೆ ಗೌರವ ಸೂಚಕ ಅಂದ್ಕೊಂಡ್ರಾ? ಇದರ‌ ನಿಜಾರ್ಥ ಗೊತ್ತಾದ್ರೆ ನೀವು ಹೌಹಾರೋದು ಪಕ್ಕಾ!! ಏನಿದು ‘ಮೇಡಂ’ ಕಹಾನಿ? ಇಲ್ಲಿದೆ ನೋಡಿ… Read More »

ಭೀಕರ ರಸ್ತೆ ಅಪಘಾತ| ಶಾಸಕ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರ

ಸಮಗ್ರ ನ್ಯೂಸ್: ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಅಪಘಾತಕ್ಕೀಡಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.‌ ಚಿತ್ರದುರ್ಗ ಜಿಲ್ಲೆಯ ಹಿರಿಯೂರ ತಾಲೂಕಿನ ಜವನಗೊಂಡನಹಳ್ಳಿ ಸಮೀಪದಲ್ಲಿ ಲಮಾಣಿ ಅವರಿಗೆ ಸ್ಕೂಟರ್ ಡಿಕ್ಕಿಯಾಗಿದ್ದು, ಗಂಭೀರಗವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುವಾಗ ಮಾರ್ಗಮಧ್ಯ, ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಲಮಾಣಿ ಅವರು ಇಳಿದಾಗ ಅದೇ ವೇಳೆ ಬಂದಂತಹ ಸ್ಕೂಟರ್ ಡಿಕ್ಕಿ ಹೊಡೆದಿದೆ. ಆಗ ಅವರ ತಲೆ, ಕೈ, ಕಾಲುಗಳಿಗೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಲಮಾಣಿ ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು,

ಭೀಕರ ರಸ್ತೆ ಅಪಘಾತ| ಶಾಸಕ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರ Read More »

ಚಿಕ್ಕಮಗಳೂರು: ನಲ್ಲೂರಿಗೆ ಬಂದ ಒಂಟಿ ಸಲಗ|ಸ್ಥಳೀಯರಲ್ಲಿ ಮೂಡಿದೆ ಆತಂಕ

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಮಾ13 ರಂದು ರಾತ್ರಿ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿಕ್ಕಮಗಳೂರು ನಗರದಿಂದ ಕೇವಲ 2 ಕಿ.ಮೀ. ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು ಇದು ನಗರ ಪ್ರದೇಶಕ್ಕೆ ಪ್ರವೇಶಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ನಲ್ಲೂರಿನ ವಿವಿಧ ರಸ್ತೆಗಳಲ್ಲೂ ಆನೆ ಸಂಚರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಹಿಂಜರಿದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು

ಚಿಕ್ಕಮಗಳೂರು: ನಲ್ಲೂರಿಗೆ ಬಂದ ಒಂಟಿ ಸಲಗ|ಸ್ಥಳೀಯರಲ್ಲಿ ಮೂಡಿದೆ ಆತಂಕ Read More »

ಉದ್ಯೋಗ ಅಕಾಂಕ್ಷಿಗಳಿಗೆ ಶುಭಸುದ್ಧಿ |ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ಸೂಪರ್ಮಾರ್ಕೆಟ್ ಕಂಪನಿಯ ನೇರಸಂದರ್ಶನ.

ಸಮಗ್ರ ನ್ಯೂಸ್: ಗಲ್ಫ್ ದೇಶದಲ್ಲಿ ಹೆಸರುವಾಸಿ ಆಗಿರುವ  _*ಒಮಾನ್*_ ಅನಿವಾಸಿ ಭಾರತೀಯರ ಹೆಮ್ಮೆಯ ದಿನಬಳಕೆ ವಸ್ತು ಖರೀದಿಯ ಹೆಸರಾಂತ ಸೂಪರ್ಮಾರ್ಕೆಟ್ ಸಂಸ್ಥೆಯಾದ ಮಾರ್ಕ್ ಅಂಡ್ ಸೇವ್ ಸೂಪರ್ಮಾರ್ಕೆಟ್ ಸಂಸ್ಥೆಯು ಇಧೇ  ಮೊದಲ ಬಾರಿಗೆ ತಮ್ಮ ಮೂಲ ಸಂಸ್ಥೆಯಲ್ಲಿನ ಉದ್ಯೋಗಾವಕಾಶಕ್ಕೆ ನೇರ ಸಂದರ್ಶನವನ್ನು ಮಂಗಳೂರಿನ ನೂರ್ ಇಂಟರ್ನ್ಯಾಷನಲ್ ಸಂಸ್ಥೆಯ ಕೇಂದ್ರ ಖಚೇರಿಯಲ್ಲಿ ಇಧೇ ಬರುವ (19/03/2025)ಬುಧವಾರದಂದು ನಡೆಸಲಿದೆ.  ಸೇಲ್ಸ್ ಹಾಗು ರೆಟೈಲ್  ಅಲ್ಲಿ ಅಥವಾ ಎಲೆಕ್ಟ್ರಾನಿಕ್ಸ್ ಗಾರ್ಮೆಂಟ್ಸ್ ಮೊಬೈಲ್ಸ್ ಹಣ್ಣಿ ಹಂಪಲು ತರಕಾರಿ ಅಥವಾ ಇನ್ನಿತರ ಮಾದ್ಯಮದಲ್ಲಿ ಅನುಭವವಿರುವ

ಉದ್ಯೋಗ ಅಕಾಂಕ್ಷಿಗಳಿಗೆ ಶುಭಸುದ್ಧಿ |ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ಸೂಪರ್ಮಾರ್ಕೆಟ್ ಕಂಪನಿಯ ನೇರಸಂದರ್ಶನ. Read More »