Editor

ಕೋಟ್ಯಂತರ ಜನರನ್ನು ಸೆಳೆದ ಮಹಾ ಕುಂಭಮೇಳ… ಭಕ್ತರಿಗೆ ಪ್ರಧಾನಿ ಮೋದಿ ಸಂದೇಶ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳ ಇದೀಗ ಮುಕ್ತಾಯಗೊಂಡಿದೆ. ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಬ್ಲಾಗ್​ ನಲ್ಲಿ ಬರೆದಿದ್ದು, ಇಂದು ‘ಏಕತೆಯ ಮಹಾ ಯಜ್ಞ ಪೂರ್ಣಗೊಂಡಿದೆ’ ಎಂದು ಹೇಳಿದ್ದಾರೆ. ಹಾಗೇ, ಈ ಬೃಹತ್ ಧಾರ್ಮಿಕ ಆಚರಣೆಯ ಸಮಯದಲ್ಲಿ ಭಕ್ತರು ಯಾವುದಾದರೂ ತೊಂದರೆಗಳನ್ನು ಎದುರಿಸಿದ್ದರೆ ಅದಕ್ಕೆ ಕ್ಷಮೆ ಕೋರುತ್ತೇನೆ ಎಂದು ಮೋದಿ ಹೇಳಿದ್ದಾರೆ. ಮಹಾ ಕುಂಭದಲ್ಲಿ 140 ಕೋಟಿ ದೇಶವಾಸಿಗಳ ನಂಬಿಕೆ 45 ದಿನಗಳ ಕಾಲ ಒಗ್ಗೂಡಿದ್ದರಿಂದ ಈ ಉತ್ಸವ ಅದ್ಭುತವಾಗಿ ಪೂರ್ಣಗೊಂಡಿದೆ. […]

ಕೋಟ್ಯಂತರ ಜನರನ್ನು ಸೆಳೆದ ಮಹಾ ಕುಂಭಮೇಳ… ಭಕ್ತರಿಗೆ ಪ್ರಧಾನಿ ಮೋದಿ ಸಂದೇಶ Read More »

ನಾಳೆಯಿಂದ(ಮಾ.1) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ಪರೀಕ್ಷೆ ಬರೆಯುವ ಮುನ್ನ ಈ ನಿಯಮಗಳನ್ನು ಗಮನಿಸಿ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ ನಡೆಯಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ .ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳು ಅನುಸರಿಬೇಕಾದ ಸೂಚನೆಗಳು ಇಲ್ಲಿದೆ. 1) ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.2) ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ3) ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ

ನಾಳೆಯಿಂದ(ಮಾ.1) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ಪರೀಕ್ಷೆ ಬರೆಯುವ ಮುನ್ನ ಈ ನಿಯಮಗಳನ್ನು ಗಮನಿಸಿ Read More »

ಮಾ.15ರಿಂದ ಒಂದು ತಿಂಗಳು ಶಿರಾಡಿ ಘಾಟ್ ಸಂಚಾರ ಬಂದ್!?

ಸಮಗ್ರ ನ್ಯೂಸ್: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ. ಸಂಸದ ಶ್ರೇಯಸ್‌ ಪಟೇಲ್‌ ಗುರುವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದ ವೇಳೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು

ಮಾ.15ರಿಂದ ಒಂದು ತಿಂಗಳು ಶಿರಾಡಿ ಘಾಟ್ ಸಂಚಾರ ಬಂದ್!? Read More »

ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ… ಚಿಕನ್ ತಿನ್ನದಂತೆ ಮನವಿ

ಸಮಗ್ರ ನ್ಯೂಸ್: ರಾಜ್ಯದೆಲ್ಲೆಡೆ ಹಕ್ಕಿ ಜ್ವರ ಭೀತಿ ಶುರುವಾಗಿದ್ದು, ಇದೀಗ ಚಿಕ್ಕಬಳ್ಳಾಪುರದ ವರದಹಳ್ಳಿ ಗ್ರಾಮದ ನಾಟಿ ಕೋಳಿಗಳಲ್ಲಿ ಹಕ್ಕಿಜ್ವರ ಪತ್ತೆಯಾಗಿದೆ. ಗ್ರಾಮದ ರೈತ ದ್ಯಾವಪ್ಪ ಎಂಬುವರಿಗೆ ಸೇರಿದ 23 ಕೋಳಿಗಳು ಫೆಬ್ರವರಿ 23ರಂದು ಮೃತಟ್ಟಿದ್ದವು. ಬಳಿಕ ಅದೇ ಗ್ರಾಮದ ರತ್ನಮ್ಮಗೆ ಸೇರಿದ 5 ಕೋಳಿಗಳು ಮೃತಪಟ್ಟಿದ್ದವು. ಇದರಿಂದ ಆತಂಕಗೊಂಡ ದ್ಯಾವಪ್ಪ ಹಾಗೂ ರತ್ನಮ್ಮ ಯಾರೊ ಕೋಳಿಗಳಿಗೆ ವಿಷ ಹಾಕಿದ್ದಾರೆ ಎಂದು ನಂಬಿದ್ದರು. ಸ್ಥಳಕ್ಕೆ ಆಗಮಿಸಿದ ಪಶುಪಾಲಾನಾ ಇಲಾಖೆಯ ವೈದ್ಯರು ಪರಿಶೀಲನೆ ನಡೆಸಿ ಮೃತ ಕೋಳಿಗಳ ಸ್ಯಾಂಪಲ್ ಅನ್ನು

ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ… ಚಿಕನ್ ತಿನ್ನದಂತೆ ಮನವಿ Read More »

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸ್ಟೇರಿಂಗ್ ಕಟ್| ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್‌ಆರ್‌ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ತುಂಡಾಗಿದ್ದರೂ ಚಾಲಕನ ಚಾಕಚಕ್ಯತೆಯಿಂದ ಅಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ನಂಬರಿನ ಶಿವಮೊಗ್ಗ ವಿಭಾಗದ ಬಸ್ ಚಾರ್ಮಾಡಿ ಘಾಟ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಹಠಾತ್‌ ಸ್ಟೀರಿಂಗ್ ಜಾಯಿಂಟ್ ಕಟ್ ಆಗಿತ್ತು. ಆದರೆ, ಚಾಲಕ ಎಚ್ಚರಿಕೆಯಿಂದ ಬಸ್‌ನ್ನು ನಿಯಂತ್ರಣಕ್ಕೆ ತಂದು, ಅಪಘಾತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಮಯೋಚಿತ ನಿರ್ವಹಣೆಯಿಂದ ಪ್ರಯಾಣಿಕರು ಯಾವುದೇ ಗಾಯಗಳಾಗದೆ ಸುರಕ್ಷಿತರಾಗಿದ್ದು, ಪ್ರಯಾಣಿಕರನ್ನು ಬದಲಿ ಬಸ್‌ನಲ್ಲಿ ಕಳಿಸಿಕೊಡಲಾಯಿತು.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸ್ಟೇರಿಂಗ್ ಕಟ್| ತಪ್ಪಿದ ಭಾರೀ ಅನಾಹುತ Read More »

ರಾಜ್ಯದ ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಬ್ಯಾನ್| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಲಾಗುವುದು. ಈ ಬಗ್ಗೆ ಶೀಘ್ರವೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ಲಾಸ್ಟಿಕ್ ಬಳಸಿದರೆ ವಿಧಿಸುವ ದಂಡ ಹಾಗೂ ಮುನ್ನೆಚ್ಚರಿಕೆ ಬಗ್ಗೆ ಇನ್ನೆರಡು ದಿನದಲ್ಲಿ ಅಧಿಕೃತವಾಗಿ

ರಾಜ್ಯದ ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಬ್ಯಾನ್| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ವಿವಾದಾತ್ಮಕ ವಕ್ಫ್(ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿಯ ಆಧಾರದ ಮೇಲೆ ವಿವಾದಾತ್ಮಕ ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಕೇಂದ್ರ ಸಚಿವ ಸಂಪುಟವು ಅನುಮೋದಿಸಿದೆ ಎಂದು ವರದಿಯಾಗಿದೆ. ಫೆ.13ರಂದು ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಯನ್ನು, ಫೆ.19ರಂದು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. 2025 ರ ಬಜೆಟ್ ಅಧಿವೇಶನದ ಮೊದಲಾರ್ಧದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ವರದಿಯನ್ನು ಮಂಡಿಸಲಾಯಿತು. ಪ್ರತಿಪಕ್ಷಗಳ ಗದ್ದಲದ ನಡುವೆ ಎರಡೂ ಸದನಗಳಲ್ಲಿ ಕಲಾಪಗಳನ್ನು ಸ್ವಲ್ಪ ಸಮಯದವರೆಗೆ ಮುಂದೂಡಲಾಯಿತು.ವಿರೋಧ ಪಕ್ಷದ ಸಂಸದರು ತಮ್ಮ ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಜೆಪಿಸಿ ವರದಿಯಿಂದ ತಿರುಚಲಾಗಿದೆ

ವಿವಾದಾತ್ಮಕ ವಕ್ಫ್(ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ Read More »

ಹವಾಮಾನ ವರದಿ|ಕರಾವಳಿ ಕರ್ನಾಟಕದಲ್ಲಿ ಹವಾಮಾನ ಬದಲಾವಣೆ| ಮಾ.03ರವರೆಗೆ ಶಾಖದ ಅಲೆ ಎಚ್ಚರಿಕೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಹವಾಮಾನ ಭಾರೀ ಬದಲಾವಣೆಗಳು ಆಗುತ್ತಿವೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಶಾಖದ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ. ಅಲ್ಲದೆ ವಿವಿಧ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಸಹ ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದಲ್ಲಿ ಕಳೆದ 15 ದಿನಗಳಿಂದ ಬಿಸಿಲು ಹೆಚ್ಚಳವಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಕಳೆದ 1 ತಿಂಗಳಿನಿಂದಲೂ ಚಳಿ ತೀವ್ರ ಕಡಿಮೆಯಾಗಿದ್ದು. ಬಿಸಿಲಿನ

ಹವಾಮಾನ ವರದಿ|ಕರಾವಳಿ ಕರ್ನಾಟಕದಲ್ಲಿ ಹವಾಮಾನ ಬದಲಾವಣೆ| ಮಾ.03ರವರೆಗೆ ಶಾಖದ ಅಲೆ ಎಚ್ಚರಿಕೆ Read More »

ಅಸ್ಸಾಂನಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ

ಸಮಗ್ರ ನ್ಯೂಸ್: ಭಾರತದಲ್ಲಿ ಅತಿ ಹೆಚ್ಚು ಭೂಕಂಪ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಅಸ್ಸಾಂನಲ್ಲಿ ಇದೀಗ ಮತ್ತೊಮ್ಮೆ ಭೂಕಂಪನ ಸಂಭವಿಸಿದೆ. ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೂಕಂಪದ ಅನುಭವವಾಗಿದೆ. ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1 ಎಂದು ದಾಖಲಾಗಿದೆ. ಗುವಾಹಟಿ ಮತ್ತು ರಾಜ್ಯದ ಇತರ ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಭೂಕಂಪನವು ಬೆಳಗಿನ ಜಾವ 2.25 ಕ್ಕೆ 16 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಅಸ್ಸಾಂನಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ Read More »

ಮಹಾಕುಂಭಮೇಳಕ್ಕೆ ಅಧಿಕೃತ ತೆರೆ| 45 ದಿನಗಳಲ್ಲಿ ದಾಖಲೆಯ 65 ಕೋಟಿ ಜನರಿಂದ ಪುಣ್ಯಸ್ನಾನ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ನಡೆದ ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಎಂದು ಖ್ಯಾತಿ ಪಡೆದಿರುವ ಮಹಾಕುಂಭ ಮೇಳಕ್ಕೆ ಮಹಾಶಿವರಾತ್ರಿ ದಿನವಾದ ಇಂದು ತೆರೆ ಬಿದ್ದಿದೆ. ಬುಧವಾರ ತ್ರಿವೇಣಿ ಸಂಗಮದಲ್ಲಿ ಕೊನೆಯ ಅಮೃತ ಸ್ನಾನ ನಡೆದಿದೆ. 45 ದಿನಗಳ ಕಾಲ ನಡೆದ ಮಹಾಕುಂಭ ಮೇಳಕ್ಕೆ ತೆರೆ ಬಿದ್ದಿದೆ. ಕೊನೆಯ ದಿನವಾದ ಇಂದು 1.44 ಕೋಟಿ ಜನ ಪುಣ್ಯ ಸ್ನಾನ ಮಾಡಿದ್ದಾರೆ. ಜನವರಿ 13ರಂದು ಶುರುವಾದ ಮಹಾಕುಂಭಮೇಳದಲ್ಲಿ ಇದುವರೆಗೆ 66 ಕೋಟಿ

ಮಹಾಕುಂಭಮೇಳಕ್ಕೆ ಅಧಿಕೃತ ತೆರೆ| 45 ದಿನಗಳಲ್ಲಿ ದಾಖಲೆಯ 65 ಕೋಟಿ ಜನರಿಂದ ಪುಣ್ಯಸ್ನಾನ Read More »