Editor

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ‌ ತೇಜಸ್ವಿ ಸೂರ್ಯ

ಸಮಗ್ರ ನ್ಯೂಸ್: ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಇಂದು (ಮಾರ್ಚ್ 6) ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಉಪಸ್ಥಿತಿಯಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ದವು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಇಂದೇ ಶಿವಶ್ರೀ ಅವರನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆಯಲಿದೆ. ಮಾರ್ಚ್

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ‌ ತೇಜಸ್ವಿ ಸೂರ್ಯ Read More »

ಸೌಜನ್ಯ ಪ್ರಕರಣ ಕುರಿತು ವಿಡಿಯೋ ಮಾಡಿದ ‘ಧೂತ’ ಸಮೀರ್| ಎಡಿಜಿಪಿಯಿಂದ ಪೊಲೀಸ್ ಆಯುಕ್ತರು, ಸೋಶಿಯಲ್ ಮೀಡಿಯಾ ಸೆಲ್ ಗಳಿಗೆ ಪತ್ರ

ಸಮಗ್ರ ನ್ಯೂಸ್: 2012ರಲ್ಲಿ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಎಂಬ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಂದಿಗೂ ಸಹ ಬಗೆಹರಿದಿಲ್ಲ. ಪ್ರಕರಣದಲ್ಲಿ ಪಿಎಸ್‌ಐ ಯೋಗೇಶ್ ಮಾಡಿದ ತಪ್ಪುಗಳಿಂದ ಪ್ರಕರಣಕ್ಕೆ ಯಾವುದೇ ಸಾಕ್ಷಿ ಇಲ್ಲದಂತಾಗಿದೆ. ಇನ್ನು ಸೌಜನ್ಯ ಕೊಲೆ ಪ್ರಕರಣದಲ್ಲಿ ಸಂತೋಷ್ ಎಂಬ ನಿರಪರಾಧಿಯನ್ನು ಬಂಧಿಸಿ ಇಡೀ ಪ್ರಕರಣವನ್ನು ಹಳ್ಳ ಹಿಡಿಸಿದ್ದ ಯೋಗೇಶ್ ಪ್ರಕರಣ ಇನ್ನೂ ಈ ಹಂತದಲ್ಲಿರಲು ಕಾರಣ. ಹೀಗೆ ಬಗೆಹರಿಯದೇ ಉಳಿದ ಈ ಪ್ರಕರಣ ಸೌಜನ್ಯ ಹುಟ್ಟುಹಬ್ಬ ಮತ್ತು ನಿಧನ ವಾರ್ಷಿಕೋತ್ಸವದ ದಿನಗಳಂದು ಮನೆಯವರು ಹಾಗೂ

ಸೌಜನ್ಯ ಪ್ರಕರಣ ಕುರಿತು ವಿಡಿಯೋ ಮಾಡಿದ ‘ಧೂತ’ ಸಮೀರ್| ಎಡಿಜಿಪಿಯಿಂದ ಪೊಲೀಸ್ ಆಯುಕ್ತರು, ಸೋಶಿಯಲ್ ಮೀಡಿಯಾ ಸೆಲ್ ಗಳಿಗೆ ಪತ್ರ Read More »

ಸೆಮಿಫೈನಲ್‌ ಗೆದ್ದ ನ್ಯೂಜಿಲೆಂಡ್‌/ ಫೈನಲ್‌ನಲ್ಲಿ ಭಾರತ- ನ್ಯೂಜಿಲೆಂಡ್ ಮುಖಾಮುಖಿ

ಸಮಗ್ರ ನ್ಯೂಸ್‌: ಐಸಿಸಿ ಚಾಂಪಿಯನ್ಸ್ ಟ್ರೋಫಿಯ 2ನೇ ಸೆಮಿ ಫೈನಲ್ ನಲ್ಲಿ ಅಬ್ಬರ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ನ್ಯೂಜಿಲೆಂಡ್ ತಂಡ ಬೌಲಿಂಗ್ ನಲ್ಲೂ ಪರಾಕ್ರಮ ಮೆರೆದಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಫೈನಲ್ ಗೆ ಲಗ್ಗೆ ಇಟ್ಟಿದೆ. ಪಾಕ್ ಲಾಹೋರ್ ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ ಬ್ಯಾಟಿಂಗ್ ನಡೆಸಿ ಆರು ವಿಕೆಟ್‌ಗಳಿಗೆ 362 ರನ್ ಗಳಿಸಿತು. ಇದನ್ನು ಬೆನ್ನತ್ತಿದ್ದ ಆಫ್ರಿಕಾ 9 ವಿಕೆಟ್ ಕಳೆದುಕೊಂಡು 312 ರನ್ ಗಳಿಸಿ ಸೋಲು ಅನುಭವಿಸಿದೆ.

ಸೆಮಿಫೈನಲ್‌ ಗೆದ್ದ ನ್ಯೂಜಿಲೆಂಡ್‌/ ಫೈನಲ್‌ನಲ್ಲಿ ಭಾರತ- ನ್ಯೂಜಿಲೆಂಡ್ ಮುಖಾಮುಖಿ Read More »

ಬೆಳಗಾವಿ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಳಗಾವಿಯ ರಾಯಬಾಗದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಬಳಿ ನಡೆದಿದೆ. ತಾಯಿ ಶಾರದಾ (32), ಮಕ್ಕಳಾದ ಅಮೃತಾ, ಆದರ್ಶ ಹಾಗೂ ಅನುಷ್ಕಾ ಮೃತ ದುರ್ದೈವಿಗಳು. ತಾಯಿ, ಮಕ್ಕಳು ನದಿಗೆ ಹಾರಿದ್ದನ್ನು ನೋಡಿದ ಸ್ಥಳೀಯರು ನೀರಿನಲ್ಲಿ ಮುಳುಗುತ್ತಿದ್ದ ಅನುಕ್ಷಾಳನ್ನು ರಕ್ಷಣೆ ಮಾಡಿದ್ದರು. ನಂತರ ಆಕೆಯನ್ನು ರಾಯಬಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆಗೆ ಸ್ಪಂದಿಸದೆ ಆಕೆಯೂ

ಬೆಳಗಾವಿ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ Read More »

ಮದುವೆಯಾಗಿ ಮೂರೇ ದಿನಕ್ಕೆ ನವ ವಿವಾಹಿತನ ದುರಂತ ಅಂತ್ಯ.. ಆಗಿದ್ದೇನು?

ಸಮಗ್ರ ನ್ಯೂಸ್: ನವ ವಿವಾಹಿತ ಯುವಕನೊಬ್ಬ ಮದುವೆಯಾಗಿ ಮೂರೇ ದಿನಕ್ಕೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಡ್ಯದ ಕೆ.ಆರ್ ಪೇಟೆಯಲ್ಲಿ ನಡೆದಿದೆ. ಪುರಸಭೆಯ ಸದಸ್ಯ ಕೆ.ಸಿ ಮಂಜುನಾಥ್ ಪುತ್ರ ಶಶಾಂಕ್ ಮೃತ ದುರ್ದೈವಿ. ಬೆಂಗಳೂರಿನ ಐಟಿ ಸಂಸ್ಥೆಯೊಂದರಲ್ಲಿ ಸಾಫ್ಟ್ವೇರ್ ಇಂಜಿನೀಯರ್ ಆಗಿ ಕೆಲಸ ಮಾಡುತ್ತಿದ್ದ ಶಶಾಂಕ್ ಜಾರ್ಖಂಡ್ ಮೂಲದ ಅಷ್ಣಾ ಹೆಸರಿನ ಯುವತಿಯನ್ನು ಪ್ರೀತಿಸಿ ಕಳೆದ ಭಾನುವಾರವಷ್ಟೇ ಮೈಸೂರಲ್ಲಿ ಬಹಳ ಅದ್ದೂರಿಯಾಗಿ ಮದುವೆಯಾಗಿದ್ದರು. ಮದುವೆಯ ದಿನ ಸ್ವಲ್ಪ ಜ್ವರ ಕಾಣಿಸಿಕೊಂಡಿದ್ದು, ಇದನ್ನು ಸ್ನೇಹಿತರ ಮುಂದೆ ಹೇಳಿಕೊಂಡಿದ್ದಾನೆ. ಆದರೆ ಮದುವೆಯ

ಮದುವೆಯಾಗಿ ಮೂರೇ ದಿನಕ್ಕೆ ನವ ವಿವಾಹಿತನ ದುರಂತ ಅಂತ್ಯ.. ಆಗಿದ್ದೇನು? Read More »

ಹಕ್ಕಿಜ್ವರದ ಭೀತಿ/ ಆರೋಗ್ಯ ಇಲಾಖೆ ಹೈ ಅಲರ್ಟ್

ಸಮಗ್ರ ನ್ಯೂಸ್‌: ಹಕ್ಕಿಜ್ವರದ ಭೀತಿ ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳ ನಂತರ ಇದೀಗ ಬೆಂಗಳೂರಿಗೂ ಕಾಡಲು ಶುರುವಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ. ಹಕ್ಕಿಜ್ವರ ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಇದೀಗ ಬೆಂಗಳೂರಿನ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿದ್ಧತೆಗೆ ಸೂಚನೆ ನೀಡಲಾಗಿದ್ದು, ಪ್ರತ್ಯೇಕ ವಾರ್ಡ್ ಮಾಡಲು ನಿರ್ದೇಶನ ನೀಡಲಾಗಿದೆ. ಹಕ್ಕಿಜ್ವರದ ಗುಣಲಕ್ಷಣ ಕಂಡು ಬಂದರೆ ಅಂಥವರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಇನ್ನು ಜ್ವರ ಬಂದಲ್ಲಿ ಜನರು ವೈದ್ಯರನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಜತೆಗೆ, ವೂ ಬಂದ ಸ್ಥಳದಲ್ಲಿ ಕೆಲಸ

ಹಕ್ಕಿಜ್ವರದ ಭೀತಿ/ ಆರೋಗ್ಯ ಇಲಾಖೆ ಹೈ ಅಲರ್ಟ್ Read More »

ನಟಿ ರನ್ಯಾ ರಾವ್ ಮನೆಯಿಂದ 17.29 ಕೋಟಿ ಮೌಲ್ಯದ ನಗ ನಗದು ವಶ

ಸಮಗ್ರ ನ್ಯೂಸ್: ನಟಿ ರನ್ಯಾ ರಾವ್ ನಿನ್ನೆಯಷ್ಟೆ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪ ನಟಿಯ ಮೇಲಿದೆ. ನಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಂತೆ ನಟಿಯ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇತಿಹಾಸದಲ್ಲಿಯೇ ಇಷ್ಟು ದೊಡ್ಡ ಮೊತ್ತದ ಚಿನ್ನ ವಶಪಡಿಸಿಕೊಂಡಿರುವುದು ಇದೇ ಮೊದಲು ಎನ್ನಲಾಗಿದೆ. ಡಿಆರ್​ಐ ಅಧಿಕಾರಿಗಳು

ನಟಿ ರನ್ಯಾ ರಾವ್ ಮನೆಯಿಂದ 17.29 ಕೋಟಿ ಮೌಲ್ಯದ ನಗ ನಗದು ವಶ Read More »

ಏಕದಿನ ಕ್ರಿಕೆಟ್ ಗೆ ಸ್ಟೀವ್ ಸ್ಮಿತ್ ವಿದಾಯ

ಸಮಗ್ರ ನ್ಯೂಸ್: ಆಸ್ಟ್ರೇಲಿಯಾದ ಅನುಭವಿ ಬ್ಯಾಟರ್‌ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್‌ಗೆ ಅಚ್ಚರಿಯ ವಿದಾಯ ಹೇಳಿದ್ದಾರೆ. ಚಾಂಪಿಯನ್ಸ್ ಟ್ರೋಫಿ 2025ರ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ವಿರುದ್ಧ ಸೋತ ಬೆನ್ನಲ್ಲೇ ಕ್ರಿಕೆಟಿಗ ದಿಢೀರ್‌ ನಿವೃತ್ತಿ ಘೋಷಿಸಿದ್ದಾರೆ. ಭಾರತ ವಿರುದ್ಧದ ಸೆಮಿ ಕದನದಲ್ಲಿ 73 ರನ್ ಗಳಿಸಿದ ಅವರು ಆಸ್ಟ್ರೇಲಿಯಾ ಪರ ಗರಿಷ್ಠ ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಇದನ್ನೇ ತಮ್ಮ ಕೊನೆಯ ಏಕದಿನ ಪಂದ್ಯ ಎಂದು ತಂಡದ ಸಹ ಆಟಗಾರರಿಗೆ ತಿಳಿಸಿದರು. ಏಕದಿನ ಸ್ವರೂಪಕ್ಕೆ ವಿದಾಯ ಹೇಳಿದರೂ, 35

ಏಕದಿನ ಕ್ರಿಕೆಟ್ ಗೆ ಸ್ಟೀವ್ ಸ್ಮಿತ್ ವಿದಾಯ Read More »

ದೇಶಕ್ಕಾಗಿ ರಂಜಾನ್ ಉಪವಾಸ ಮುರಿದ‌ ಮೊಹಮ್ಮದ್ ಶಮಿ

ಸಮಗ್ರ ನ್ಯೂಸ್: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ದೇಶಕ್ಕಾಗಿ ತಮ್ಮ ರಂಜಾನ್ ಉಪವಾಸ ಮುರಿದಿದ್ದಾರೆ. ಹೌದು, ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಉತ್ತಮ ಪ್ರದರ್ಶನ ನೀಡಲು ಉಪವಾಸ ಮುರಿದಿದ್ದಾರೆ. ದೇಶಕ್ಕಾಗಿ ಶಮಿ ತೆಗೆದುಕೊಂಡ ನಿರ್ಧಾರಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಮೊಹಮ್ಮದ್ ಶಮಿ ನಡೆಯನ್ನು ಕೊಂಡಾಡಿದ್ದಾರೆ. ಪಂದ್ಯದ ನಡುವೆ ಮೊಹಮ್ಮದ್ ಶಮಿ ಎನರ್ಜಿ ಜ್ಯೂಸ್ ಕುಡಿಯುತ್ತಿರುವ ವಿಡಿಯೋಗಳು ಹರಿದಾಡುತ್ತಿದೆ. ಇದೇ ವಿಡಿಯೋಗೆ ಕಮೆಂಟ್ ಮಾಡುತ್ತಿದ್ದಾರೆ. ಸದ್ಯ ಪವಿತ್ರ

ದೇಶಕ್ಕಾಗಿ ರಂಜಾನ್ ಉಪವಾಸ ಮುರಿದ‌ ಮೊಹಮ್ಮದ್ ಶಮಿ Read More »

“ಅಂಕದ ಕೋಳಿ ರುಚಿ ತೋರಿಸ್ತೇನೆ ಬನ್ನಿ”| ಸದನದಲ್ಲಿ ಡಿಸಿಎಂ ಗೆ ಆಹ್ವಾನ ನೀಡಿದ ಶಾಸಕ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ನಿಯಮಗಳನ್ನು ಸಡಿಲಗೊಳಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ಪ್ರಸ್ತಾಪಿಸಿದರು. ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಸುನೀಲ್‌ ಕುಮಾರ್‌ ಮಾತನಾಡಿ, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನ ನಿಲ್ಲಿಸುವಂತೆ ಅಡೆತಡೆಗಳು ಇವೆ.‌ ಅದನ್ನು ಸಡಿಲಗೊಳಿಸಿ ಎಂದು ಮನವಿ ಮಾಡಿದರು. ಈ ವೇಳೆ ಸ್ಪೀಕರ್‌ ಮಾತನಾಡಿ, ಮೊದಲು ಆ ರೀತಿ ಇರಲಿಲ್ಲ. 10 ಗಂಟೆಯ ನಂತರ ಧ್ವನಿವರ್ಧಕ ಬಳಸಬಾರದು ಎಂದು ನಿಯಮ ತಂದರು. ಈಗ

“ಅಂಕದ ಕೋಳಿ ರುಚಿ ತೋರಿಸ್ತೇನೆ ಬನ್ನಿ”| ಸದನದಲ್ಲಿ ಡಿಸಿಎಂ ಗೆ ಆಹ್ವಾನ ನೀಡಿದ ಶಾಸಕ ಸುನಿಲ್ ಕುಮಾರ್ Read More »