ಸಂಜೆ 7ಕ್ಕೆ ಡೆಡ್ ಸಿಟಿಯಾದರೆ ಕರಾವಳಿಗೆ ಯಾವ ಐಟಿ ಬಿಟಿಯವ್ರು ಬರ್ತಾರೆ? ಸದನದಲ್ಲಿ ಸ್ವಾರಸ್ಯಕರ ಚರ್ಚೆ ಹುಟ್ಟುಹಾಕಿದ ಡಿಸಿಎಂ ಡಿಕೆಶಿ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡದವರಿಗೆ ರಾತ್ರಿ ಎಂಟರ್ ಟೈನ್ ಮೆಂಟ್ ಬೇಕು, ಇಲ್ಲಾಂದ್ರೆ ಮನೆಯಿಂದಾನೇ ಹೊರಗೆ ಬರಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸದನದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಡಿಕೆಶಿ ಸ್ವಾರಸ್ಯಕರ ಚರ್ಚೆಗೆ ನಾಂದಿ ಹಾಡಿದರ. ದಕ್ಷಿಣ ಕನ್ನಡದಲ್ಲಿ ಎಲ್ಲದಕ್ಕೂ ಅವಕಾಶವಿದೆ. ಅಲ್ಲಿ ಹೆಲ್ತ್ ಟೂರಿಸಂ ಮಾಡಬಹುದು, ಅತೀ ಎಜುಕೇಷನಲ್ ಟೂರಿಸಂ ಮಾಡಬಹುದು, ಧಾರ್ಮಿಕ ಟೂರಿಸಂ ಮಾಡಬಹುದು. ಅತೀ ಹೆಚ್ಚು ಕಾಲೇಜುಗಳು, ಬೀಚ್ ಎಲ್ಲವೂ ಇದೆ. ಆದರೆ










