Editor

ಸಂಜೆ 7ಕ್ಕೆ ಡೆಡ್ ಸಿಟಿಯಾದರೆ ಕರಾವಳಿಗೆ ಯಾವ ಐಟಿ ಬಿಟಿಯವ್ರು ಬರ್ತಾರೆ? ಸದನದಲ್ಲಿ ಸ್ವಾರಸ್ಯಕರ ಚರ್ಚೆ ಹುಟ್ಟುಹಾಕಿದ ಡಿಸಿಎಂ ಡಿಕೆಶಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದವರಿಗೆ ರಾತ್ರಿ ಎಂಟರ್ ಟೈನ್ ಮೆಂಟ್ ಬೇಕು, ಇಲ್ಲಾಂದ್ರೆ ಮನೆಯಿಂದಾನೇ ಹೊರಗೆ ಬರಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸದನದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಡಿಕೆಶಿ ಸ್ವಾರಸ್ಯಕರ ಚರ್ಚೆಗೆ ನಾಂದಿ ಹಾಡಿದರ. ದಕ್ಷಿಣ ಕನ್ನಡದಲ್ಲಿ ಎಲ್ಲದಕ್ಕೂ ಅವಕಾಶವಿದೆ. ಅಲ್ಲಿ ಹೆಲ್ತ್ ಟೂರಿಸಂ ಮಾಡಬಹುದು, ಅತೀ ಎಜುಕೇಷನಲ್ ಟೂರಿಸಂ ಮಾಡಬಹುದು, ಧಾರ್ಮಿಕ ಟೂರಿಸಂ ಮಾಡಬಹುದು. ಅತೀ ಹೆಚ್ಚು ಕಾಲೇಜುಗಳು, ಬೀಚ್ ಎಲ್ಲವೂ ಇದೆ. ಆದರೆ

ಸಂಜೆ 7ಕ್ಕೆ ಡೆಡ್ ಸಿಟಿಯಾದರೆ ಕರಾವಳಿಗೆ ಯಾವ ಐಟಿ ಬಿಟಿಯವ್ರು ಬರ್ತಾರೆ? ಸದನದಲ್ಲಿ ಸ್ವಾರಸ್ಯಕರ ಚರ್ಚೆ ಹುಟ್ಟುಹಾಕಿದ ಡಿಸಿಎಂ ಡಿಕೆಶಿ Read More »

ಅಕ್ರಮ ಚಿನ್ನ ಸಾಗಾಟ| ಬೆಂಗಳೂರು‌ ಏರ್ ಪೋರ್ಟ್ ನಲ್ಲಿ ನಟಿ ರನ್ಯಾ ರಾವ್ ಅರೆಸ್ಟ್

ಸಮಗ್ರ ನ್ಯೂಸ್: ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು​ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅವರನ್ನು ವಶಕ್ಕೆ ಪಡೆದ ಬಳಿಕ ವಿಚಾರಣೆ ನಡೆಸಲಾಗುತ್ತಿದೆ. ಅವರು ಸುದೀಪ್ ನಟನೆಯ ‘ಮಾಣಿಕ್ಯ’ ಸಿನಿಮಾದಲ್ಲಿ ನಟಿಸಿದ್ದರು. ನಟಿ ರನ್ಯಾ ರಾವ್ ಅವರು ಡಿಜಿಪಿ ರಾಮಚಂದ್ರ ರಾವ್ ಮಗಳು. ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ

ಅಕ್ರಮ ಚಿನ್ನ ಸಾಗಾಟ| ಬೆಂಗಳೂರು‌ ಏರ್ ಪೋರ್ಟ್ ನಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ Read More »

ಸೌಜನ್ಯ ಕೇಸ್ ನಲ್ಲಿ ಧ್ವನಿ‌ ಎತ್ತಿದ ಕನ್ನಡದ ಯೂಟ್ಯೂಬರ್ ಸಮೀರ್ ಗೆ ಜೀವ ಬೆದರಿಕೆ| ಯಾವಾಗ ಏನು ಬೇಕಾದರೂ ಆಗಬಹುದು ಎಂದು ಪೋಸ್ಟ್ ಹಾಕಿದ ‘ಧೂತ’

ಸಮಗ್ರ ನ್ಯೂಸ್: ಕನ್ನಡದ ಯುಟ್ಯೂಬರ್ ಸಮೀರ್ ಎಂಬಾತ ತನ್ನ ವಿಭಿನ್ನ ವಿಡಿಯೊಗಳಿಂದ ಯುವ ವೀಕ್ಷಕ ವರ್ಗವನ್ನು ತನ್ನತ್ತ ಸೆಳೆದವರು. ಮಾಟ, ದೆವ್ವ ಹಾಗೂ ವಿಸ್ಮಯಗಳಂತಹ ವಿಭಿನ್ನ ವಿಡಿಯೊಗಳನ್ನು ಮಾಡುತ್ತಾ ಬರುತ್ತಿದ್ದ ಸಮೀರ್ ಆಗಾಗ ಕೆಲ ಘಟನೆಗಳ ಕುರಿತು ಸಹ ವಿಡಿಯೊಗಳನ್ನು ಮಾಡುತ್ತಿದ್ದರು. ಹೀಗೆ ಒಳ್ಳೊಳ್ಳೆ ಅಂಶಗಳಿರುವ ವಿಡಿಯೊಗಳನ್ನು ಮಾಡುತ್ತಾ ಬಂದಿರುವ ಸಮೀರ್ ಸದ್ಯ ತನ್ನ ಯುಟ್ಯೂಬ್ ಚಾನೆಲ್‌ನಲ್ಲಿ ಹೊಸ ವಿಡಿಯೊವೊಂದನ್ನು ಹಂಚಿಕೊಂಡಿದ್ದು ಸದ್ಯ ಆ ವಿಡಿಯೊ ತೀವ್ರ ವಿರೋಧವನ್ನು ಹುಟ್ಟುಹಾಕಿದೆ. ದಶಕದ ಹಿಂದೆ ನಡೆದಿದ್ದ ಸೌಜನ್ಯಾ ರೇಪ್

ಸೌಜನ್ಯ ಕೇಸ್ ನಲ್ಲಿ ಧ್ವನಿ‌ ಎತ್ತಿದ ಕನ್ನಡದ ಯೂಟ್ಯೂಬರ್ ಸಮೀರ್ ಗೆ ಜೀವ ಬೆದರಿಕೆ| ಯಾವಾಗ ಏನು ಬೇಕಾದರೂ ಆಗಬಹುದು ಎಂದು ಪೋಸ್ಟ್ ಹಾಕಿದ ‘ಧೂತ’ Read More »

ಬಂಡೀಪುರ: ರೆಸಾರ್ಟ್‌ನಲ್ಲಿ ತಂಗಿದ್ದ ದಂಪತಿ, ಮಗು ಅಪಹರಣ

ಸಮಗ್ರ ನ್ಯೂಸ್: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದ ದಂಪತಿ ಮತ್ತು ಅವರ ಮಗುವನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ನಡೆದಿದೆ. ನಿಶಾಂತ್ ಮತ್ತು ಚಂದನ ದಂಪತಿಗಳು ತಮ್ಮ ಮಗುವಿನೊಂದಿಗೆ ಭಾನುವಾರ ರಾತ್ರಿ ಬಂಡೀಪುರ ಸಮೀಪದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಸೋಮವಾರ ದಂಪತಿ ಹಾಗೂ ಮಗು ರೆಸಾರ್ಟ್ ನಿಂದ ಹೊರ ಬಂದ ವೇಳೆ ಎರಡು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ಮೂವರನ್ನು ಅಪಹರಿಸಿದ್ದಾರೆಂದು ತಿಳಿದುಬಂದಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು,

ಬಂಡೀಪುರ: ರೆಸಾರ್ಟ್‌ನಲ್ಲಿ ತಂಗಿದ್ದ ದಂಪತಿ, ಮಗು ಅಪಹರಣ Read More »

ಐಸಿಸಿ‌ ಚಾಂಪಿಯನ್ಸ್ ಟ್ರೋಫಿ| ಆಸ್ಟ್ರೇಲಿಯಾ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಟೀಂ‌ ಇಂಡಿಯಾ

ಸಮಗ್ರ ನ್ಯೂಸ್: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಇಂದು ಆಸ್ಟ್ರೇಲಿಯಾ ಹಾಗೂ ಭಾರತ ಮುಖಾಮುಖಿಯಾಗಿದ್ದವು. ಎರಡೂ ತಂಡಗಳು ಬಲಿಷ್ಠ ಆಟಗಾರರ ಪಡೆಯನ್ನೇ ಹೊಂದಿದ್ದ ಕಾರಣ ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು. ಅದರಂತೆ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ, ಪೂರ್ಣ

ಐಸಿಸಿ‌ ಚಾಂಪಿಯನ್ಸ್ ಟ್ರೋಫಿ| ಆಸ್ಟ್ರೇಲಿಯಾ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಟೀಂ‌ ಇಂಡಿಯಾ Read More »

ಪುತ್ತೂರು: ಕೆಲ‌ ಗ್ರಾಮಗಳಲ್ಲಿ ಕಂಪಿಸಿದ ಭೂಮಿ? ಕ್ಷಣಕಾಲ ಆತಂಕ ನಿರ್ಮಾಣ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರೆಲ್ಲರೂ ಭಯಭೀತರಾಗಿ ಮನೆಯಿಂದ ಓಡಿ ಬಂದಿದ್ದಾರೆ. ಅಷ್ಟೇ ಅಲ್ಲದೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಮಾ.4 ರ ಸಂಜೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಮಾರು ಐದು ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದ್ದಾಗಿ ಸ್ಥಳೀಯ ಮಾಹಿತಿಗಳಿಂದ ತಿಳಿದುಬಂದಿದೆ. ಕೆಲ ಕಾಲ ಭೂಮಿ ಕಂಪಿಸಿದ್ದರಿಂದಾಗಿ ಜನರು ಭಯ ಭೀತರಾದರು ಎಂಬುದಾಗಿ ಹೇಳಲಾಗುತ್ತಿದೆ. ಆದರೆ ಪುತ್ತೂರು ವ್ಯಾಪ್ತಿಯ

ಪುತ್ತೂರು: ಕೆಲ‌ ಗ್ರಾಮಗಳಲ್ಲಿ ಕಂಪಿಸಿದ ಭೂಮಿ? ಕ್ಷಣಕಾಲ ಆತಂಕ ನಿರ್ಮಾಣ!! Read More »

ಪರೀಕ್ಷೆಗೂ ಮುನ್ನ ತನ್ನ ಮೃತ ತಾಯಿಗೆ ನಮಸ್ಕರಿಸಿದ ವಿದ್ಯಾರ್ಥಿ

ಸಮಗ್ರ ನ್ಯೂಸ್: ತಮಿಳುನಾಡಿನಲ್ಲಿ ಒಂದು ಮನಕಲಕುವ ಘಟನೆ ನಡೆದಿದೆ. ಹೌದು ಇದೀಗ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆ ಆರಂಭಕ್ಕೆ ಕೆಲವೇ ಗಂಟೆಗಳ ಮುನ್ನ ವಿದ್ಯಾರ್ಥಿಯ ತಾಯಿ ಹಠಾತ್​ ಆಗಿ ಸಾವನ್ನಪ್ಪಿದ್ದರು. ಹೀಗಾಗಿ ಕಣ್ಣಲ್ಲಿ ನೀರು ತುಂಬಿಕೊಂಡೇ ವಿದ್ಯಾರ್ಥಿ ಕಾಲೇಜಿಗೆ ತೆರಳಿದ್ದಾನೆ. ಅದಕ್ಕೂ ಮುನ್ನ ತಾಯಿಯ ಮೃತದೇಹಕ್ಕೆ ನಮಸ್ಕರಿಸಿದ್ದಾನೆ. ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಲಿಯೂರಿನ ವಿದ್ಯಾರ್ಥಿ ಸುನೀಲ್ ಕುಮಾರ್ ಅವರ ತಾಯಿ ಸುಬ್ಬಲಕ್ಷ್ಮೀ 12 ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಮೊದಲ ದಿನವಾದ ಮಾರ್ಚ್​ 3ರ ಬೆಳಗ್ಗೆ

ಪರೀಕ್ಷೆಗೂ ಮುನ್ನ ತನ್ನ ಮೃತ ತಾಯಿಗೆ ನಮಸ್ಕರಿಸಿದ ವಿದ್ಯಾರ್ಥಿ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ.

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಪ್ರಾಕ್ತನ ವಿದ್ಯಾರ್ಥಿ ಪರಿಷತ್, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ  ಮಾ.4 ರಂದು ರಕ್ತದಾನ ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಯಿತು.  ರೋಟರಿ ಕ್ಯಾಂಪ್ ಬ್ಲಡ್ ಸೆಂಟರ್ ಪುತ್ತೂರಿನ ವೈದ್ಯಾಧಿಕಾರಿಗಳಾದ ಡಾ .ಕೆ ಸೀತಾರಾಮ ಭಟ್ ಶಿಬಿರವನ್ನು ಉದ್ಘಾಟಿಸಿದರು. ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರು ಡಾ. ದಿನೇಶ್ ಕೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ. Read More »

ಆಸ್ತಿ ತೆರಿಗೆ ಬಾಕಿ/ 258 ಸರ್ಕಾರಿ ಕಚೇರಿಗಳಿಗೆ ಬಿಬಿಎಂಪಿ ನೋಟಿಸ್‌

ಸಮಗ್ರ ನ್ಯೂಸ್‌: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಬೆಂಗಳೂರು ಮಹಾನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ನೋಟಿಸ್‌ ನೀಡುವ ಮೂಲಕ ಕಠಿಣ ಕ್ರಮಕ್ಕೆ ಮುಂದಾಗಿದೆ. ಬಿಬಿಎಂಪಿ ನೋಟಿಸ್‌ ನೀಡಿರುವ ಪೈಕಿ ವಿಧಾನಸೌಧ, ವಿಕಾಸ ಸೌಧ, ರಾಜಭವನ ಸೇರಿದಂತೆ 258 ಸರ್ಕಾರಿ ಕಚೇರಿಗಳು ಕೂಡ ಒಳಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಖಾಸಗಿ ಆಸ್ತಿಗಳಿಗೆ ನೀಡುವಂತೆಯೇ ಸರ್ಕಾರಿ ಆಸ್ತಿಗಳಿಗೂ ಕೂಡ ತೆರಿಗೆ ಬಾಕಿ ಪಾವತಿಗೆ ನೋಟಿಸ್‌ ನೀಡಲಾಗುತ್ತಿದೆ. ಆದರೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದು, ತೆರಿಗೆ ಬಾಕಿ

ಆಸ್ತಿ ತೆರಿಗೆ ಬಾಕಿ/ 258 ಸರ್ಕಾರಿ ಕಚೇರಿಗಳಿಗೆ ಬಿಬಿಎಂಪಿ ನೋಟಿಸ್‌ Read More »

ಕಾಸರಗೋಡು: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಒಂದೇ ಕುಟುಂಬದ ಮೂವರು ದುರ್ಮರಣ

ಸಮಗ್ರ ನ್ಯೂಸ್: ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ವಾಮಂಜೂರು ಚೆಕ್​ಪೋಸ್ಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್​ಗೆ ಡಿಕ್ಕಿಯಾಗಿದೆ. ಸೋಮವಾರ ತಡರಾತ್ರಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ, ಪುತ್ರ ವರುಣ್ ಹಾಗೂ ಕಿಶನ್ ಮೃತ ದುರ್ದೈವಿಗಳು. ರತ್ನಾ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಉಪ್ಪಳದ ಪೈವಳಿಕೆ ಬಾಯಿಕಟ್ಟೆ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜೇಶ್ವರ ಪೊಲೀಸ್

ಕಾಸರಗೋಡು: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಒಂದೇ ಕುಟುಂಬದ ಮೂವರು ದುರ್ಮರಣ Read More »