Editor

ಪ್ರಯಾಗ್ ರಾಜ್: ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಲ್ಲ| ಅಚ್ಚರಿಯ ವರದಿ ನೀಡಿದ ಎನ್ ಜಿಟಿ

ಸಮಗ್ರ ನ್ಯೂಸ್: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೋಟ್ಯಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದು, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ನೀರು ಕಲುಷಿತವಾಗಿದೆ ಎಂದು ವರದಿ ಮಾಡಿತ್ತು. ಇದೀಗ ಇದರ ಬೆನ್ನಲ್ಲೇ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅಚ್ಚರಿಯ ವರದಿಯನ್ನು ಮಾಡಿದೆ. ಫೆಬ್ರವರಿ 3 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದಂತೆ ಮಹಾ ಕುಂಭಮೇಳದ ಸಮಯದಲ್ಲಿ ಮಲ ಕೋಲಿಫಾರ್ಮ್ ಬ್ಯಾಕ್ಟೀರಿಯಾದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ ಎಂದು ಹೇಳಿತ್ತು. ಆದರೆ ಇದೀಗ ಗಂಗಾ […]

ಪ್ರಯಾಗ್ ರಾಜ್: ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಲ್ಲ| ಅಚ್ಚರಿಯ ವರದಿ ನೀಡಿದ ಎನ್ ಜಿಟಿ Read More »

ಬೆಳ್ತಂಗಡಿ: ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ| ಮೂವರು ವಿದ್ಯಾರ್ಥಿಗಳು ಗಂಭೀರ

ಸಮಗ್ರ ನ್ಯೂಸ್: ಶಾಲೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, 15 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿಗಳು ಪ್ರಾರ್ಥನೆ ಮುಗಿಸಿ ಶಾಲೆಯ ಒಳಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿವೆ. 15 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳಾದ ಅವಸಿನಾ (6), ಅಫೀಜ್‌ (12), ಶಾಬಿತ್‌ (11), ರಫಾ (7), ನಿಧಾ (13), ಶಾಬೆಲ್‌ (13),

ಬೆಳ್ತಂಗಡಿ: ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ| ಮೂವರು ವಿದ್ಯಾರ್ಥಿಗಳು ಗಂಭೀರ Read More »

ಚಿಕ್ಕಿಯಲ್ಲಿ ಹಾನಿಕಾರಕ ಅಂಶ ಪತ್ತೆ ಹಿನ್ನೆಲೆ| ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಚಿಕ್ಕಿ ವಿತರಣೆ ಇಲ್ಲ

ಸಮಗ್ರ ನ್ಯೂಸ್: ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶಗಳು ಪತ್ತೆಯಾಗಿದ್ದರ ಹಿನ್ನೆಲೆಯಲ್ಲಿ ಇದೀಗ ಶಿಕ್ಷಣ ಇಲಾಖೆಯ ಇನ್ನು ಮುಂದೆ ಸರಕಾರಿ ಶಾಲೆಗಳಲ್ಲಿ ಚಿಕ್ಕಿ ವಿತರಣೆ ಇಲ್ಲ ಎಂದು ತಿಳಿಸಿದೆ. ಕಲ್ಬುರ್ಗಿಯಲ್ಲಿ ಮಕ್ಕಳಿಗೆ ಕೊಟ್ಟ ಚಿಕ್ಕಿ ತಿನ್ನಲು ಯೋಗ್ಯವಾಗಿರಲಿಲ್ಲ. ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶ ಇದೀಗ ಚಿಕ್ಕಿಯಲ್ಲಿ ಪತ್ತೆಯಾಗಿದೆ. ಸಕ್ಕರೆ ಅಂಶ ಹೆಚ್ಚಿನ ಮಟ್ಟದಲ್ಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಈ ಸಂಬಂಧ ಇಲಾಖೆ ಹೆಚ್ಚುವರಿ ಆಯುಕ್ತರು ಪತ್ರ ಬರೆದಿದ್ದರು. ಹಾಗಾಗಿ ಮಕ್ಕಳಿಗೆ

ಚಿಕ್ಕಿಯಲ್ಲಿ ಹಾನಿಕಾರಕ ಅಂಶ ಪತ್ತೆ ಹಿನ್ನೆಲೆ| ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಚಿಕ್ಕಿ ವಿತರಣೆ ಇಲ್ಲ Read More »

ಸ್ಕೀಂ‌ ಹೆಸರಲ್ಲಿ ವಂಚನೆ; ಐವರು ಅರೆಸ್ಟ್

ಸಮಗ್ರ ನ್ಯೂಸ್: ವಂಚನೆ ಮಾಡುವ ಉದ್ದೇಶದಿಂದ ಗ್ರಾಹಕರಿಂದ ಹಣವನ್ನು ಸಂಗ್ರಹಿಸುತ್ತಿದ್ದ ಆರೋಪದಡಿ ಎಸ್‌.ವಿ. ಸ್ಮಾರ್ಟ್‌ ವಿಷನ್‌ ಎಂಬ ಸ್ಕೀಂನ ಮಾಲಕ ಸಹಿತ ಐವರನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ. ಸ್ಕೀಂ ಮಾಲಕ ಮಂಗಳೂರು ಸುರತ್ಕಲ್‌ ಮೂಲದ ಮಹಮದ್‌ ಅಶ್ರಫ್(37), ಮಡಿಕೇರಿಯ ಮಲ್ಲಿಕಾರ್ಜುನ ನಗರದ ನಿವಾಸಿ ಎಂ.ವೈ.ಸುಲೈಮಾನ್‌(37), ತ್ಯಾಗರಾಜ ಕಾಲನಿಯ ಅಬ್ದುಲ್‌ ಗಫ‌ೂರ್‌(34), ಮೊಹಮದ್‌ ಅಕ್ರಮ್‌ (34) ಹಾಗೂ ಕುಂಬಳಕೇರಿ ನಿವಾಸಿ ಎಚ್‌.ಎನ್‌.ಕಿಶೋರ್‌(41) ಬಂಧಿತರು. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್‌ಪಿ ಕೆ.ರಾಮರಾಜನ್‌, ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ರಾಣಿಪೇಟೆಯಲ್ಲಿ

ಸ್ಕೀಂ‌ ಹೆಸರಲ್ಲಿ ವಂಚನೆ; ಐವರು ಅರೆಸ್ಟ್ Read More »

ಕೊಟ್ಟಿಗೆಹಾರ: ಸಹೋದರನ ಅತ್ತೆಯನ್ನು ಕೊಲೆ ಮಾಡಿ ಶಶಿಧರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಅತ್ತೆ ಯಮುನಾ ಕುಡಿದ ಮತ್ತಿನಲ್ಲಿದ್ದ ಅಳಿಯನಿಗೆ ಬುದ್ದಿ ಹೇಳಿದ ಕಾರಣಕ್ಕೆ ಅವನ ಸಹೋದರ ಶಶಿಧರ್ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆ ಮಾಡಿದ ಬಳಿಕ ಶಶಿಧರ್ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಬಣಕಲ್ ಪೊಲೀಸರು ನಿನ್ನೆ ಮೊದಲು ತನಿಖೆ ಆರಂಭಿಸಿದ್ದರು. ಶಶಿಧರ್ ನನ್ನು ಪತ್ತೆ ಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರು. ಫೆ.18 ರಂದು ಭಾರತೀಬೈಲು ಕಾಫಿತೋಟದಲ್ಲಿ ಶಶಿಧರ್ ನೇಣು

ಕೊಟ್ಟಿಗೆಹಾರ: ಸಹೋದರನ ಅತ್ತೆಯನ್ನು ಕೊಲೆ ಮಾಡಿ ಶಶಿಧರ್ ಆತ್ಮಹತ್ಯೆ Read More »

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಸಮಗ್ರ ನ್ಯೂಸ್: ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ನಿವೃತ್ತಿ ಹೊಂದುತ್ತಿರುವ ರಾಜೀವ್ ಕುಮಾರ್ ಅವರ ಸ್ಥಾನದಲ್ಲಿ ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. 1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ ಕಳೆದ ವರ್ಷ ಮಾರ್ಚ್ ನಿಂದ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಕುಮಾರ್ ಆಗಿದ್ದಾರೆ, ಇದು ಚುನಾವಣಾ ಆಯೋಗದ

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ Read More »

ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ಸಾವು| ಶವಕ್ಕಾಗಿ ಶೋಧ ಮುಂದುವರಿಕೆ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಎನ್.ಆರ್.ಪುರ ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ. ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದನು. ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಡಿದರೂ ಸಾಧ್ಯವಾಗಲಿಲ್ಲ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದರು. ಆದರೆ

ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ಸಾವು| ಶವಕ್ಕಾಗಿ ಶೋಧ ಮುಂದುವರಿಕೆ Read More »

ಚಿನ್ನದ ದರದಲ್ಲಿ ಮತ್ತೆ ಏರಿಕೆ| ಇಂದಿನ ಚಿನ್ನದ‌ ದರ ನೋಡಿ…

ಸಮಗ್ರ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ 500 ರೂ. ಏರಿಕೆಯಾಗಿ 79,550 ರೂಪಾಯಿಗಳಲ್ಲಿ ವಹಿವಾಟು ನಡೆಸಿದೆ. 24 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂ 550 ರೂಪಾಯಿ ಹೆಚ್ಚಾಗಿ 86,770 ರೂ.ಗೆ ದಾಖಲಾಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 55 ರೂ ಹೆಚ್ಚಳವಾಗಿ 8662 ರೂ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಂ ನ 22 ಕ್ಯಾರಟ್ ಚಿನ್ನದ ಬೆಲೆ 79,400 ರೂ

ಚಿನ್ನದ ದರದಲ್ಲಿ ಮತ್ತೆ ಏರಿಕೆ| ಇಂದಿನ ಚಿನ್ನದ‌ ದರ ನೋಡಿ… Read More »

ದೆಹಲಿಯಲ್ಲಿ ರೈಲು ಏರುವ ಧಾವಂತದಲ್ಲಿ ಕಾಲ್ತುಳಿತ| ಪ್ರಯಾಗರಾಜ್ ಗೆ ತೆರಳುತ್ತಿದ್ದ ಭಕ್ತರ ಸಾವು

ಸಮಗ್ರ ನ್ಯೂಸ್: ಮಹಾಕುಂಭ ಮೇಳಕ್ಕೆಂದು ತೆರಳುತ್ತಿದ್ದ ಜನ ದೆಹಲಿ ರೈಲು ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಸಾವನ್ನಪ್ಪಿದ ದುರಂತ ಘಟನೆ ಕಳೆದ ದಿನ ರಾತ್ರಿ ಸಂಭವಿಸಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಮಹಾ ಕುಂಭಮೇಳಕ್ಕೆ ಎರಡು ರೈಲುಗಳು ವಿಳಂಬವಾಗಿದ್ದರಿಂದ ಶನಿವಾರ ರಾತ್ರಿ ಜನದಟ್ಟಣೆ ಉಂಟಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಿಂದಾಗಿ ಪ್ರಧಾನಿ ಮೋದಿ ಸೇರಿದಂತೆ ಇತರ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ 10 ಮಹಿಳೆಯರು, ಮೂವರು ಮಕ್ಕಳು ಮತ್ತು

ದೆಹಲಿಯಲ್ಲಿ ರೈಲು ಏರುವ ಧಾವಂತದಲ್ಲಿ ಕಾಲ್ತುಳಿತ| ಪ್ರಯಾಗರಾಜ್ ಗೆ ತೆರಳುತ್ತಿದ್ದ ಭಕ್ತರ ಸಾವು Read More »

ಕೆಎಸ್ಎಸ್ ಕಾಲೇಜಿನಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ದಲ್ಲಿ ಹಿಂದಿ ವಿಭಾಗದ ವತಿಯಿಂದ ವಿಶ್ವ ಹಿಂದಿ ದಿವಸ ಕಾರ್ಯಕ್ರಮವನ್ನು ಫೆ.15 ರಂದು ಆಚರಿಸಲಾಯಿತು. ವಿಶ್ವಹಿಂದಿ ದಿವಸದ ಪ್ರಯುಕ್ತ “ಹಿಂದಿ ಭಾಷೆ ಮತ್ತು ಉದ್ಯೋಗ” ಎಂಬ ವಿಷಯದ ಕುರಿತು ವಿಶೇಷ ವ್ಯಾಖ್ಯಾನ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಜ್ಯೋತಿ ಜ್ಞಾನೇಶ್ವರಿ ಸಹಾಯಕ ಪ್ರಾಧ್ಯಾಪಕಿ, ಹಿಂದಿ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಭಾರತ ಹಿಂದಿ ಪ್ರಚಾರ ಮದ್ರಾಸ್ ಇವರು ನಡೆಸುವ ಪರೀಕ್ಷೆಗಳಲ್ಲಿ

ಕೆಎಸ್ಎಸ್ ಕಾಲೇಜಿನಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »