Editor

ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ : ಇಬ್ಬರು ಯಾತ್ರಿಕರ ಸಾವು

ಸಮಗ್ರ ನ್ಯೂಸ್: ಪ್ರಯಾಗ್ ರಾಜ್ ನಲ್ಲಿ ಕುಂಭ ಮೇಳ ನಡೆಯುತ್ತಿದ್ದು, ಅಲ್ಲಿಗೆ ತೆರಳುತ್ತಿದ್ದ ರಾಜ್ಯದ ಇಬ್ಬರು ಯಾತ್ರಿಗಳು ಗುಜರಾತ್​​ನ ಪೋರ್ ​ಬಂದರ್​​ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನಿವಾಸಿಗಳಾದ ವಿಶ್ವನಾಥ ಅವಜಿ (55), ಮಲ್ಲಿಕಾರ್ಜುನ ಸದ್ದಲಗಿ (40) ಮೃತ ದುರ್ದೈವಿಗಳು. ವಾಹನದಲ್ಲಿ ಒಟ್ಟು 17 ಜನ ಪ್ರಯಾಗ್​ರಾಜ್​ಗೆ ತೆರಳುತ್ತಿದ್ದರು. ಯಾತ್ರಾರ್ಥಿಗಳಿದ್ದ ವಾಹನ ಮಾರ್ಗ ಮಧ್ಯೆ ನಿಂತಿದ್ದ ಟಿಪ್ಪರ್​​ಗೆ ಡಿಕ್ಕಿಯಾಗಿದೆ. ವಾಹನದಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಪೋರಬಂದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ

ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ : ಇಬ್ಬರು ಯಾತ್ರಿಕರ ಸಾವು Read More »

ನಾಳೆ ಪ್ರಯಾಗದಲ್ಲಿ‌ ಕೊನೆಯ ಮಹಾಕುಂಭ ಪುಣ್ಯಸ್ನಾನ| ಹರಿದು‌‌ ಬರುತ್ತಲಿದೆ‌‌ ಭಕ್ತಸಾಗರ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳವು ಅಂತಿಮ ಘಟ್ಟಕ್ಕೆ ತಲುಪಿದೆ. ಈಗಾಗಲೇ 60 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದು, ನಾಳೆ ನಡೆಯುವ ಕೊನೆಯ ಪುಣ್ಯ ಸ್ನಾನದಲ್ಲಿ ಅತಿ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಜನವರಿ 13 ರಿಂದ ಆರಂಭವಾದ ಈ ಮಹಾ ಕುಂಭ ಮೇಳ ಪವಿತ್ರ ಸ್ನಾನ ಇದೇ ಫೆ.26 ಅಂದರೆ ನಾಳೆ ಮುಕ್ತಾಯವಾಗಲಿದೆ. ಕುಂಭ ಮೇಳದಲ್ಲಿ ಬರುವ ಪವಿತ್ರ ಸ್ನಾನಕ್ಕೂ ಶಾಹಿ ಸ್ನಾನಕ್ಕೂ

ನಾಳೆ ಪ್ರಯಾಗದಲ್ಲಿ‌ ಕೊನೆಯ ಮಹಾಕುಂಭ ಪುಣ್ಯಸ್ನಾನ| ಹರಿದು‌‌ ಬರುತ್ತಲಿದೆ‌‌ ಭಕ್ತಸಾಗರ Read More »

ಕಡಬ: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ| ಐತ್ತೂರು ಗ್ರಾ.ಪಂ ಸದಸ್ಯ ಮನಮೋಹನ ಗೋಳ್ಯಾಡಿ‌ ಗಂಭೀರ

ಸಮಗ್ರ ನ್ಯೂಸ್: ಬೈಕ್‌ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ‌ ಸಮೀಪದ‌ ಕಲ್ಲಾಜೆ ‌ಎಂಬಲ್ಲಿ ಸಂಭವಿಸಿದೆ. ಅಪಘಾತದಲ್ಲಿ ತೀವ್ರತರವಾದ ಗಾಯಗಳಾಗಿದ್ದು, ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ ಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಡಬ: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ| ಐತ್ತೂರು ಗ್ರಾ.ಪಂ ಸದಸ್ಯ ಮನಮೋಹನ ಗೋಳ್ಯಾಡಿ‌ ಗಂಭೀರ Read More »

ಬೆಳಗಾವಿ: ಕಂಡಕ್ಟರ್ ವಿರುದ್ಧ ದಾಖಲಾದ ಪೋಕ್ಸೋ ಕೇಸ್ ವಾಪಸ್ – ಸಂತ್ರಸ್ತ ಬಾಲಕಿ ತಾಯಿ ಸ್ಪಷ್ಟನೆ

ಸಮಗ್ರ ನ್ಯೂಸ್: ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮಹಾದೇವಪ್ಪ ಮೇಲೆ ನೀಡಿರುವ ಪೋಕ್ಸೋ (POCSO) ದೂರನ್ನು ವಾಪಸ್ ಹಿಂಪಡೆದಿದ್ದೇವೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಹೇಳಿಕೆ ನೀಡಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂತ್ರಸ್ತೆಯ ತಾಯಿ, ನಾವು ಕೂಡ ಕನ್ನಡಿಗರೇ. ಈ ವಿಚಾರದಲ್ಲಿ ಕನ್ನಡ-ಮರಾಠಿಗರ ನಡುವೆ ಜಗಳ ಆಗುತ್ತಿದೆ. ನಿರ್ವಾಹಕ ಮಹಾದೇವಪ್ಪ ಅವರ ಮೇಲೆ ನೀಡಿದ್ದ ದೂರನ್ನು ಹಿಂಪಡೆದಿದ್ದೇವೆ ಎಂದರು. ನಮ್ಮ ಮಗ, ಮಗಳು ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ಬಸ್ನಲ್ಲಿ ಟಿಕೆಟ್ ವಿಚಾರವಾಗಿ

ಬೆಳಗಾವಿ: ಕಂಡಕ್ಟರ್ ವಿರುದ್ಧ ದಾಖಲಾದ ಪೋಕ್ಸೋ ಕೇಸ್ ವಾಪಸ್ – ಸಂತ್ರಸ್ತ ಬಾಲಕಿ ತಾಯಿ ಸ್ಪಷ್ಟನೆ Read More »

ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ:ಖಾಸಗಿ ವಾಹನಗಳ ಪ್ರವೇಶ ನಿಷೇಧ

ಸಮಗ್ರ ನ್ಯೂಸ್: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ಮಹಾಶಿವರಾತ್ರಿಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾಮಹೋತ್ಸವ ನಡೆಯುತ್ತದೆ. ಈ ಜಾತ್ರೆಗೆ ಲಕ್ಷಾಂತರ ಭಕ್ತರು ತೆರಳುವುದರಿಂದ ವಾಹನ ದಟ್ಟಣೆ ಹೆಚ್ಚಾಗುತ್ತದೆ. ಈ ಕಾರಣದಿಂದ ಫೆಬ್ರವರಿ 25 ರಿಂದ ಮಾರ್ಚ್ 1ರವರೆಗೆ ಐದು ದಿನಗಳ ಕಾಲ ಮಹದೇಶ್ವರಬೆಟ್ಟಕ್ಕೆ ದ್ವಿಚಕ್ರ, ಆಟೋ ರಿಕ್ಷಾ, ಗೂಡ್ಸ್ ವಾಹನ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಕೌದಳ್ಳಿ ಬಳಿ ವಾಹನ ನಿಲುಗಡೆಗೆ

ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ:ಖಾಸಗಿ ವಾಹನಗಳ ಪ್ರವೇಶ ನಿಷೇಧ Read More »

ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ

ಸಮಗ್ರ ನ್ಯೂಸ್: ಬೆಂಗಳೂರು ನಗರದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೌದು ತೆರಿಗೆ ಇಲಾಖೆ (IT) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಎಂಜಿ ರಸ್ತೆಯಲ್ಲಿನ ಪ್ರೆಸ್ಟೀಜ್ ಗ್ರೂಪ್ ​ ಮುಖ್ಯ ಕಚೇರಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಸುಮಾರು 50 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರೆಸ್ಟೀಜ್ ಗ್ರೂಪ್​ನಿಂದ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಎಂ.ಜಿ ರಸ್ತೆಯ ಪ್ರೇಸ್ಟಿಜ್ ಮುಖ್ಯ ಕಚೇರಿ ಸೇರಿ ನಾಲ್ಕು ಕಡೆ ದಾಳಿ

ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ Read More »

ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ| ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್‌ಪ್ರೆಸ್‌ ರಸ್ತೆ ಸದ್ಯ ಟೋಲ್ ಫ್ರೀ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಅತಿದೊಡ್ಡ ಎಕ್ಸ್‌ಪ್ರೆಸ್‌ ವೇನಲ್ಲಿ ಒಂದಾಗಿರುವ ಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಸಂಚಾರಕ್ಕೆ ಮುಕ್ತವಾಗಿದೆ. ಮೂರು ರಾಜ್ಯಗಳನ್ನು ಒಳಗೊಂಡ ಎಕ್ಸ್‌ಪ್ರೆಸ್‌ ವೇ ಮಾರ್ಗ ಇದಾಗಿದೆ. ಕರ್ನಾಟಕ ರಾಜ್ಯ ಭಾಗದ 71 ಕಿಲೋ ಮೀಟರ್ ಮಾರ್ಗದ ಕಾಮಗಾರಿ ಸಂಪೂರ್ಣ ಮುಕ್ತಾಯವಾಗಿದೆ. ಮಾರ್ಗಸೂಚಿ ಫಲಕಗಳು, ನಾಮಫಲಕಗಳು, ಡಿಜಿಟಲ್ ಫಲಕಗಳು ಸೇರಿದಂತೆ ಕೆಲಸಗಳು ಮುಗಿದಿದ್ದು, ತಾತ್ಕಾಲಿಕವಾಗಿ ಟೋಲ್ ಇಲ್ಲದೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹೊಸಕೋಟೆಯ ಇಂಟರ್ ಚೇಂಜ್‌ನಿಂದ ಚೆನ್ನೈವರೆಗೆ 280 ಕಿ.ಮೀ ಉದ್ದದ ಎಕ್ಸ್‌ಪ್ರೆಸ್ ವೇ

ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ| ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್‌ಪ್ರೆಸ್‌ ರಸ್ತೆ ಸದ್ಯ ಟೋಲ್ ಫ್ರೀ Read More »

ಗುಂಡ್ಯ: ಚಲಿಸುತ್ತಿದ್ದ ಲಾರಿಯಿಂದ ಏಕಾಏಕಿ ಹೊರಜಿಗಿದ ನಿರ್ವಾಹಕ| ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಫೆ.25ರಂದು ಮುಂಜಾನೆ ನಡೆದಿದೆ. ತಮಿಳುನಾಡು ಚಿನ್ನತೂಬುರ್ ನಾಗಪಟ್ಟಿನಮ್ ನಿವಾಸಿ ಲಕ್ಷ್ಮಣನ್ ಸೆಂಗುತ್ತುವನ್(46ವ.) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ತಮಿಳುನಾಡಿನ ಕೃಷ್ಣಗಿರಿಯಿಂದ ಕಲ್ಲಂಗಡಿಯನ್ನು ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯು ಗುಂಡ್ಯ ಸಮೀಪದ ಅಡ್ಡಹೊಳೆ ತಲುಪುತಿದ್ದಂತೆ ಏಕಾಏಕಿಯಾಗಿ ನಿರ್ವಾಹಕ ಲಾರಿಯಿಂದ ಜಿಗಿದು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು

ಗುಂಡ್ಯ: ಚಲಿಸುತ್ತಿದ್ದ ಲಾರಿಯಿಂದ ಏಕಾಏಕಿ ಹೊರಜಿಗಿದ ನಿರ್ವಾಹಕ| ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವು Read More »

ಸುಳ್ಯ: ಎಂ ಸಿ ಸಿ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ|ರಂಜಿತ್ ಅಧ್ಯಕ್ಷರಾಗಿ ಪುನರಾಯ್ಕೆ

ಸುಳ್ಯ: ಮಾರ್ನಿಂಗ್ ಕ್ರಿಕೆಟ್ ಕ್ಲಬ್(ಎಂ.ಸಿ.ಸಿ)ನ ಇದರ ನೂತನ ಪದಾಧಿಕಾರಿಗಳ ನೇಮಕ ಆಯ್ಕೆ ಹಾಗೂ ಮಹಾಸಭೆ ಫೆ.23 ರಂದು ನಡಯಿತು. ಹಾಲಿ ಅಧ್ಯಕ್ಷ ರಂಜಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೆಕ್ಕ ಪತ್ರ ಮಂಡನೆ ಮಾಡಿ ನೂತನ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅದ್ಯಕ್ಷರಾಗಿ ರಂಜಿತ್ ಕುಮಾರ್ ಪುನರಾಯ್ಕೆ ಮಾಡಲಾಯಿತು.ಕಾರ್ಯದರ್ಶಿಯಾಗಿ ಬಾಲಕುಮಾರನ್, ಕೋಶಾಧಿಕಾರಿ ಯಾಗಿ ಆಸೀಫ್ ಜಯನಗರ, ಉಪಾಧ್ಯಕ್ಷ ಹನೀಫ್ ಅವರನ್ನು ಆಯ್ಕೆ ಮಾಡಲಾಯಿತು. ವೇದಿಕೆಯಲ್ಲಿ ಅಧ್ಯಕ್ಷ ರಂಜಿತ್, ಕಾರ್ಯದರ್ಶಿ ಜುಬೀರ್ (ಉಬ್ಬಿ)

ಸುಳ್ಯ: ಎಂ ಸಿ ಸಿ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ|ರಂಜಿತ್ ಅಧ್ಯಕ್ಷರಾಗಿ ಪುನರಾಯ್ಕೆ Read More »

ಮಾಣಿ-ಸಂಪಾಜೆ ರಾ.ಹೆದ್ದಾರಿ ವಿಸ್ತರಣೆ ಡಿಪಿಆರ್ ಗೆ ರಾಜ್ಯ ಸರ್ಕಾರದ ಅನುಮೋದನೆ – ಸಂಸದ ಚೌಟ

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್‌ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಅವರು ಖುದ್ದು ಮನವಿ ಮಾಡಿದ್ದರು. ಈ

ಮಾಣಿ-ಸಂಪಾಜೆ ರಾ.ಹೆದ್ದಾರಿ ವಿಸ್ತರಣೆ ಡಿಪಿಆರ್ ಗೆ ರಾಜ್ಯ ಸರ್ಕಾರದ ಅನುಮೋದನೆ – ಸಂಸದ ಚೌಟ Read More »