Editor

ಇಂದಿನಿಂದ ಟಿ.ನರಸೀಪುರದಲ್ಲಿ 3 ದಿನಗಳ ಕುಂಭಮೇಳ| ಲಕ್ಷಾಂತರ ಭಕ್ತರಿಂದ ಪುಣ್ಯಸ್ನಾನ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದ ಬೆನ್ನಲ್ಲೇ ಕರ್ನಾಟಕದಲ್ಲೂ ಇಂದಿನಿಂದ 3 ದಿನ ಕುಂಭಮೇಳ ನಡೆಯಲಿದೆ. ಭಕ್ತರಿಗೆ ಪುಣ್ಯ ಸ್ನಾನ ಮಾಡಲು 5 ಕಡೆ ಸ್ಥಳ ಗುರುತು ಮಾಡಲಾಗಿದೆ. ಮೈಸೂರು ಜಿಲ್ಲಾಡಳಿತ ಹಾಗೂ ಕುಂಭಮೇಳ ಆಚರಣಾ ಸಮಿತಿ ಸಹಯೋಗದೊಂದಿಗೆ 13ನೇ ಕುಂಭಮೇಳವನ್ನು ಫೆ.10, 11 ಮತ್ತು 12 ರಂದು ಜಿಲ್ಲೆಯ ಟಿ. ನರಸೀಪುರದ ಶ್ರೀ ಕ್ಷೇತ್ರ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದೆ. ಫೆ.10ರ ಬೆಳಗ್ಗೆ 8.30ಕ್ಕೆ ಶ್ರೀ ಅಗಸ್‌ತ್ಯೇಶ್ವರ ಸ್ವಾಮಿ ಸನ್ನಿಧಿಯಲ್ಲಿ […]

ಇಂದಿನಿಂದ ಟಿ.ನರಸೀಪುರದಲ್ಲಿ 3 ದಿನಗಳ ಕುಂಭಮೇಳ| ಲಕ್ಷಾಂತರ ಭಕ್ತರಿಂದ ಪುಣ್ಯಸ್ನಾನ Read More »

ಸುಳ್ಯ: ಸದ್ಗುರುಶ್ರೀ ರಾಮರವರ ಮಾರ್ಗದರ್ಶನದ ಮನೋಶಕ್ತಿ ಕಾರ್ಯಗಾರ ಉದ್ಘಾಟನೆ

ಸದ್ಗುರುಶ್ರೀ ರಾಮರವರ ಮಾರ್ಗದರ್ಶನದಲ್ಲಿ ಸುಳ್ಯದ ಗೌಡ ಸಮುದಾಯ ಭವನದಲ್ಲಿ ಮನೋಶಕ್ತಿ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮವು ಫೆ. 9ರಂದು ನಡೆಯಿತು.  ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಡಿ. ವಿ. ಲೀಲಾಧರ್ ರವರು ಕಾರ್ಯಕ್ರಮಕ್ಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ಬಗ್ಗೆ ಮಾತನಾಡಿದ ಇವರು ನಮ್ಮ ಹೃದಯ ಮತ್ತು ಮನಸ್ಸು ಶಾಂತವಾಗಿರಲು ಇಂತಹ ಕಾರ್ಯಕ್ರಮ ಸಹಕಾರಿಯಾಗಬಲ್ಲದು” ಎಂದು ಶುಭಹಾರೈಸಿದರು. ಉಪಾಸನ ಫೌಂಡೇಶನ್ ನ ಮುಖ್ಯಸ್ಥ ಸದ್ಗುರುಶ್ರೀ ರಾಮರವರು ಮಾತನಾಡಿ, “ನಮ್ಮ ಮನಸ್ಸೇ

ಸುಳ್ಯ: ಸದ್ಗುರುಶ್ರೀ ರಾಮರವರ ಮಾರ್ಗದರ್ಶನದ ಮನೋಶಕ್ತಿ ಕಾರ್ಯಗಾರ ಉದ್ಘಾಟನೆ Read More »

ಧರ್ಮಸ್ಥಳ: ಪಾದಯಾತ್ರಿಗಳಿಗೆ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ಪ್ರತಿ ವರ್ಷದಂತೆ ಮಹಾ ಶಿವರಾತ್ರಿ ಆಚರಣೆ ಮಾಡಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಮಂದಿ ಭಕ್ತರು ರಾಜ್ಯದ ಮೂಲೆ-ಮೂಲೆಗಳಿಂದ ಆಗಮಿಸುತ್ತಾರೆ. ಇದು ಪ್ರತಿ ವರ್ಷವೂ ನಡೆದುಕೊಂಡು ಬರುತ್ತಲೇ ಇದೆ. ಈ ವರ್ಷವೂ ಸಹ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ರಸ್ತೆಯಲ್ಲಿ ವಾಹನ ದಟ್ಟಣೆ ಇರುವ ಹಿನ್ನೆಲೆ ಕಡ್ಡಾಯವಾಗಿ ಉಡುವ ಬಟ್ಟೆಯ ಬೆನ್ನಿನಲ್ಲಿ, ತೋಳಿನಲ್ಲಿ, ತಲೆಯ ದಿರಿಸಿನಲ್ಲಿ ಪ್ರತಿಫಲಕ ಇರಲೇಬೇಕು. ಪಾದಯಾತ್ರೆಯಲ್ಲಿ ಬರುವಾಗ ಶಿವ ಪಂಚಾಕ್ಷರಿ ಮಂತ್ರ ಪಠಿಸುತ್ತಾ ಬನ್ನಿ.

ಧರ್ಮಸ್ಥಳ: ಪಾದಯಾತ್ರಿಗಳಿಗೆ ಮಹತ್ವದ ಸೂಚನೆ Read More »

ತಿರುಪತಿ: ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ| ನಾಲ್ವರನ್ನು ಬಂಧಿಸಿದ ಸಿಬಿಐ

ಸಮಗ್ರ ನ್ಯೂಸ್: ತಿರುಪತಿ ತಿರುಮಲ ಲಡ್ಡು ಪ್ರಸಾದ ತಯಾರಿಸಲು ಬಳಸುವ ಹಸುವಿನ ತುಪ್ಪದಲ್ಲಿ ಕಲಬೆರಕೆ ಮಾಡಿದ ಆರೋಪದ ಮೇಲೆ ಸಿಬಿಐ ತನಿಖಾ ತಂಡ ನಾಲ್ವರನ್ನು ಬಂಧಿಸಿದೆ. ಬಂಧಿತರಲ್ಲಿ ಭೋಲೆ ಬಾಬಾ ಡೈರಿ (ರೂರ್ಕಿ, ಉತ್ತರಾಖಂಡ್) ಮಾಜಿ ನಿರ್ದೇಶಕರಾದ ಬಿಪಿನ್ ಜೈನ್ ಮತ್ತು ಪೊಮಿಲ್ ಜೈನ್, ವೈಷ್ಣವಿ ಡೈರಿ (ಪೂನಂಬಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿ (ದುಂಡಿಗಲ್) ಎಂಡಿ ರಾಜು ರಾಜಶೇಖರನ್ ಸೇರಿದ್ದಾರೆ. ತನಿಖಾಧಿಕಾರಿಗಳು ಅಪರಾಧ ಸಂಖ್ಯೆ ೪೭೦/೨೪ ರ ಅಡಿಯಲ್ಲಿ ಆರೋಪಿಗಳನ್ನು

ತಿರುಪತಿ: ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ| ನಾಲ್ವರನ್ನು ಬಂಧಿಸಿದ ಸಿಬಿಐ Read More »

ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ಮರ್ಲೆನಾ ರಾಜೀನಾಮೆ

ಸಮಗ್ರ ನ್ಯೂಸ್: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹೀನಾಯವಾಗಿ ಸೋಲನಭುವಿಸಿದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ಮರ್ಲೇನಾ ರಾಜೀನಾಮೆ ನೀಡಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರನ್ನು ಭೇಟಿಯಾದ ನಿರ್ಗಮಿತ ಸಿಎಂ ಆತಿಶಿ ಮರ್ಲೇನಾ ಬಳಿಕ ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲನುಭವಿಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 27 ವರ್ಷಗಳ ಬಳಿಕ ಬಿಜೆಪಿ ದೆಹಲಿ ಗದ್ದುಗೆ ಏರಲಿದೆ.

ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ಮರ್ಲೆನಾ ರಾಜೀನಾಮೆ Read More »

ಪತ್ನಿಯ ಅನಾರೋಗ್ಯದಿಂದ ಸಂಕಷ್ಟಕ್ಕೀಡಾದ ಪದ್ಮಶ್ರೀ ಮಹಾಲಿಂಗ ನಾಯ್ಕ

ಸಮಗ್ರ ನ್ಯೂಸ್: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಅವರು ಪತ್ನಿಯ ಅನಾರೋಗ್ಯದಿಂದ ಸಂಕಷ್ಟಕ್ಕೀಡಾಗಿದ್ದಾರೆ. ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲಾಗದೆ ಪರದಾಡುತ್ತಿದ್ದಾರೆ. ಸುರಂಗ ಕೊರೆದು ಜಮೀನಿಗೆ ನೀರು ಹಾಯಿಸಿದ್ದನ್ನು ಆಧುನಿಕ ಭಗೀರಥನೆಂದು ಕರೆದು ಕೇಂದ್ರ ಸರಕಾರ “ಪದ್ಮಶ್ರೀ’ ಪ್ರಶಸ್ತಿ ಪ್ರದಾನ ಮಾಡಿತ್ತು. ಇದು ಪ್ರಗತಿಪರ ಕೃಷಿಕರಾಗಿ ದೇಶದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾದ ಅವರು ಕೃಷ್ಯುತ್ಪತ್ತಿಯಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ಇದೀಗ ಅವರ ಪತ್ನಿ ಏಕಾಏಕಿ ತಲೆಯ ನರದ ಸಮಸ್ಯೆಗೆ ಒಳಗಾಗಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಹೆಚ್ಚಿನ

ಪತ್ನಿಯ ಅನಾರೋಗ್ಯದಿಂದ ಸಂಕಷ್ಟಕ್ಕೀಡಾದ ಪದ್ಮಶ್ರೀ ಮಹಾಲಿಂಗ ನಾಯ್ಕ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದೈನಂದಿನ ಜೀವನದಲ್ಲಿ ರಾಶಿಗಳ ಪ್ರಭಾವ ಮಹತ್ವದ್ದು. ಪ್ರತಿಯೊಂದು ಘಟನೆಗಳಿಗೂ ರಾಶಿಗಳ ಪ್ರಭಾವ ಕಾರಣ ಎಂಬುದು ಶಾಸ್ತ್ರ ನಂಬಿಕೆ. ಈ ಹಿನ್ನಲೆಯಲ್ಲಿ 2025ರ ಫೆಬ್ರವರಿ 9ರ ಭಾನುವಾರದಿಂದ 15ರ ಶನಿವಾರದವರೆಗೆ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಮೇಷ ರಾಶಿ:ನಿಮ್ಮ ಕ್ರೆಡಿಟ್ ಹೆಚ್ಚಾಗುತ್ತದೆ. ಕಾರ್ಯಕ್ರಮಗಳು ಸರಾಗವಾಗಿ ನಡೆಯುತ್ತವೆ. ದೂರದ ಸ್ಥಳಗಳಿಂದ ಪ್ರಮುಖ ಮಾಹಿತಿ ದೊರೆಯಲಿದೆ. ಸ್ನೇಹಿತರ ಸಹಾಯದಿಂದ ಒಂದು ಹೆಜ್ಜೆ ಮುಂದಿಡುತ್ತೀರಿ. ಸಭೆಗಳು ಮತ್ತು ಸಮ್ಮೇಳನಗಳಲ್ಲಿ ಭಾಗವಹಿಸುತ್ತೀರಿ. ಇಲ್ಲಿಯವರೆಗೆ ಪಟ್ಟ ಶ್ರಮಕ್ಕೆ ಪ್ರತಿಫಲ ಸಿಗುತ್ತದೆ. ವಿದ್ಯಾರ್ಥಿಗಳು ಮತ್ತು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಎನ್‌ಆರ್ ಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ

ಸಮಗ್ರ ನ್ಯೂಸ್: ಕಾಫಿನಾಡಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಇದೀಗ ಮತ್ತೊಬ್ಬ ಕಾರ್ಮಿಕ ಮಹಿಳೆ ಕಾಡಾನೆ ದಾಳಿಯಿಂದ ದಾರುಣವಾಗಿ ಸಾವನ್ನಪ್ಪಿದ್ದಾರೆ. ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ. ವಿನೋದಾ (39) ಮೃತ ಕಾರ್ಮಿಕ ಮಹಿಳೆಯಾಗಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ಮೂಲದ ವಿನೋದಾ ಬಾಯಿ, ಕೂಲಿಗಾಗಿ ವಿಜಯನಗರ ಜಿಲ್ಲೆಯಿಂದ ತಮ್ಮ ಕುಟುಂಬದೊಂದಿಗೆ ವಲಸೆ ಬಂದಿದ್ದರು. ಇಂದು ಬೆಳಗ್ಗೆ ಕಾಫಿ ಹಣ್ಣು ಕೊಯ್ಯುವಾಗ ತೋಟದಲ್ಲಿದ್ದ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ಪರಿಣಾಮವಾಗಿ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ

ಎನ್‌ಆರ್ ಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ Read More »

ದೆಹಲಿ ವಿಧಾನಸಭಾ ಚುನಾವಣೆ| ಮೂಲೆ ಸೇರಿದ ಪೊರಕೆ; ಹ್ಯಾಟ್ರಿಕ್ ಸೊನ್ನೆ ಸುತ್ತಿದ ಕೈ| ರಾಷ್ಟ್ರ ರಾಜಧಾನಿಯಲ್ಲಿ ಕೇಸರಿ ಕಹಳೆ

ಸಮಗ್ರ ನ್ಯೂಸ್: 2025 ರ ದೆಹಲಿ ಚುನಾವಣೆಯ ಫಲಿತಾಂಶಗಳ ಚಿತ್ರಣ ಸ್ಪಷ್ಟವಾಗಿದೆ. 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ಬಿಜೆಪಿಯ ಬೃಹತ್ ಗೆಲುವಿನೊಂದಿಗೆ, ಆಮ್ ಆದ್ಮಿ ಪಕ್ಷದ ದೆಹಲಿ ಅಧ್ಯಾಯವು ಕೊನೆಯಾಗಿದೆ. ನವದೆಹಲಿ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ಮತ್ತು ಜಂಗ್ಪುರದಿಂದ ಮನೀಶ್ ಸಿಸೋಡಿಯಾ ಚುನಾವಣೆಯಲ್ಲಿ ಸೋತಿದ್ದಾರೆ. ಆಪ್​ಗೆ ಇರುವ ಇರುವ ಒಂದೇ ಒಂದು ಸಮಾಧಾನಕರ ವಿಚಾರವೆಂದರೆ ಮುಖ್ಯಮಂತ್ರಿ ಅತಿಶಿ ಕಲ್ಕಾಜಿ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಇಲ್ಲಿಯವರೆಗಿನ ಫಲಿತಾಂಶಗಳನ್ನು ನೋಡಿದರೆ, ಬಿಜೆಪಿ 47 ಸ್ಥಾನಗಳಲ್ಲಿ ಮುನ್ನಡೆ

ದೆಹಲಿ ವಿಧಾನಸಭಾ ಚುನಾವಣೆ| ಮೂಲೆ ಸೇರಿದ ಪೊರಕೆ; ಹ್ಯಾಟ್ರಿಕ್ ಸೊನ್ನೆ ಸುತ್ತಿದ ಕೈ| ರಾಷ್ಟ್ರ ರಾಜಧಾನಿಯಲ್ಲಿ ಕೇಸರಿ ಕಹಳೆ Read More »

ದೆಹಲಿ ವಿಧಾನಸಭಾ ಚುನಾವಣೆ| ಮಾಜಿ ಸಿಎಂ ಕೇಜ್ರಿವಾಲ್ ಗೆ ಹೀನಾಯ ಸೋಲು

ಸಮಗ್ರ ನ್ಯೂಸ್: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಸೋಲಾಗಿದೆ ಎಂದು ತಿಳಿದುಬಂದಿದೆ. ಎಎಪಿ ನಾಯಕ ಮಾಜಿ ಸಿಎಂ ಕೇಜ್ರಿವಾಲ್ ಗೆ ಸೋಲಾಗಿದ್ದು, ದೆಹಲಿಯಲ್ಲಿ ಭಾರಿ ಮುಖಭಂಗ ಆಗಿದೆ. ದೇಶದ ಗಮನ ಸೆಳೆದ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಆಪ್ ಮೂರನೇ ಬಾರಿ ಅಧಿಕಾರಿಗಳ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿತ್ತು ಆದರೆ ಚುನಾವಣಾ ಫಲಿತಾಂಶದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ.

ದೆಹಲಿ ವಿಧಾನಸಭಾ ಚುನಾವಣೆ| ಮಾಜಿ ಸಿಎಂ ಕೇಜ್ರಿವಾಲ್ ಗೆ ಹೀನಾಯ ಸೋಲು Read More »