Editor

ರೆಡ್ ಅಲರ್ಟ್ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಜು.2ರಂದು ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ನಾಳೆ ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ (PU) ಸೇರಿದಂತೆ ಎಲ್ಲ ಕಾಲೇಜುಗಳಿಗೆ ನಾಳೆ ರಜೆ ಇರಲಿದೆ. ವಿದ್ಯಾರ್ಥಿಗಳ […]

ರೆಡ್ ಅಲರ್ಟ್ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಜು.2ರಂದು ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ Read More »

ಜು.5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಇಂದು ರಾಜ್ಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕಳೆದ 24 ಗಂಟೆಗಳಲ್ಲಿ ಉಡುಪಿಯ ಸಿದ್ದಾಪುರ ಹಾಗೂ ಕಾರವಾರ ಭಾಗದಲ್ಲಿ ಗರಿಷ್ಠ 12

ಜು.5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಇಂದಿನಿಂದ ದೇಶಾದ್ಯಂತ ‘ವಿಬಿ ಜಿ ರಾಮ್ ಜಿ’ ಕಾಯ್ದೆ ಜಾರಿ| ಇತಿಹಾಸದ ಪುಟ ಸೇರಿದ ‘ನರೇಗಾ’

ಸಮಗ್ರ ನ್ಯೂಸ್: ಭಾರತದ ಗ್ರಾಮೀಣಾಭಿವೃದ್ಧಿ ಪಥದಲ್ಲಿ ಬದಲಾವಣೆಯೊಂದಕ್ಕೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಕಳೆದ ಎರಡು ದಶಕಗಳಿಂದ ದೇಶದ ಹಳ್ಳಿಗಳ ಆರ್ಥಿಕ ಶಕ್ತಿಯಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ – 2005) ಅಧಿಕೃತವಾಗಿ ರದ್ದಾಗಲಿದೆ. ಇದರ ಬದಲಿಗೆ ಕೇಂದ್ರ ಸರ್ಕಾರವು ರೂಪಿಸಿರುವ ನೂತನ ವಿಕಸಿತ ಭಾರತ್ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಅಥವಾ ವಿಬಿ-ಜಿ-ರಾಮ್ ಜಿ (VB-G-RAM ಜಿ) ಕಾಯ್ದೆ 2025 ಇಂದಿನಿಂದ (ಜುಲೈ 1) ದೇಶಾದ್ಯಂತ ಜಾರಿಗೆ

ಇಂದಿನಿಂದ ದೇಶಾದ್ಯಂತ ‘ವಿಬಿ ಜಿ ರಾಮ್ ಜಿ’ ಕಾಯ್ದೆ ಜಾರಿ| ಇತಿಹಾಸದ ಪುಟ ಸೇರಿದ ‘ನರೇಗಾ’ Read More »

ಇಂದಿನಿಂದ ರಾಜ್ಯಾದ್ಯಂತ ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆ| ಅನರ್ಹ ಫಲಾನುಭವಿಗಳ ಪತ್ತೆಗೆ ಕ್ರಮ

ಸಮಗ್ರ ನ್ಯೂಸ್: ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮನೆ ಮನೆ ಪರಿಶೀಲನೆ ಕಾರ್ಯ ಜುಲೈ 1ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ರಾಜ್ಯದ ಮತದಾರರು ಮತ್ತು ಅರ್ಹರಿಗೆ ಮಾತ್ರ ಗೃಹಜ್ಯೋತಿ ಯೋಜನೆ ನೀಡಲು ಪರಿಶೀಲನೆ ನಡೆಸಲಾಗುವುದು. ಮೀಟರ್ ರೀಡರ್ ಗಳು, ಎಸ್ಕಾಂ ಸಿಬ್ಬಂದಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಲಿದ್ದಾರೆ. 2023ರ ಜುಲೈನಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಾಗಿತ್ತು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯನ್ನು ಪುನರ್ ಪರಿಶೀಲಿಸಲಿದ್ದು, ಫಲಾನುಭವಿಗಳ ದಾಖಲೆ ಪರಿಶೀಲಿಸಿ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆ| ಅನರ್ಹ ಫಲಾನುಭವಿಗಳ ಪತ್ತೆಗೆ ಕ್ರಮ Read More »

ಮಂಗಳೂರು: ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಸಾವು| ನಿದ್ದೆ ಮಾಡುತ್ತಿದ್ದವರು ಚಿರನಿದ್ರೆಗೆ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಎಂದು ಗುರುತಿಸಲಾಗಿದೆ. ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ

ಮಂಗಳೂರು: ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಸಾವು| ನಿದ್ದೆ ಮಾಡುತ್ತಿದ್ದವರು ಚಿರನಿದ್ರೆಗೆ!! Read More »

ಗ್ರಾಹಕರಿಗೆ ಗುಡ್ ನ್ಯೂಸ್| LPG ದರದಲ್ಲಿ ಗಣನೀಯ ಇಳಿಕೆ

ಸಮಗ್ರ ನ್ಯೂಸ್: ತೈಲ ಕಂಪನಿಗಳು ಜುಲೈ 1 ರಿಂದ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹183.50 ರಷ್ಟು ಇಳಿಕೆ ಮಾಡಿವೆ. ಆದರೆ, ಗೃಹಬಳಕೆಯ 14 ಕೆಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಸ್ಥಿರವಾಗಿರಿಸಲಾಗಿದೆ. ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿದೆ. ತಿಂಗಳ ಮೊದಲ ದಿನ ತೈಲ ಕಂಪನಿಗಳು ತೈಲ ಮತ್ತು ಎಲ್‌ಪಿಜಿ ದರ ಪರಿಷ್ಕರಣೆ ಮಾಡುತ್ತವೆ. ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮದಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಎಲ್‌ಪಿಜಿ ಸೇರಿದಂತೆ ಬಹುತೇಕ

ಗ್ರಾಹಕರಿಗೆ ಗುಡ್ ನ್ಯೂಸ್| LPG ದರದಲ್ಲಿ ಗಣನೀಯ ಇಳಿಕೆ Read More »

ಕರಾವಳಿಯಲ್ಲಿ ಬೆಂಕಿ‌ ಹಚ್ಚಲು RSS ನಂತೆ ಸುರೇಶ್ ಭಟ್, ಗೌರಿ ಲಂಕೇಶ್ ಕೂಡಾ ಕಾರಣ‌ – ಲಕ್ಷ್ಮೀಶ ಗಬ್ಲಡ್ಕ

ಸಮಗ್ರ ನ್ಯೂಸ್: “ಸುರೇಶ್‌ ಭಟ್ ಬಾಕ್ರಬೈಲು ಕೋಮು ಸೌಹಾರ್ದತೆ ಹೆಸರಿನಲ್ಲಿ ‌ಅಪನಂಬಿಕೆ ಹೆಚ್ಚಿಸಲು ಕಾರಣರಾದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಕರಾವಳಿಯ ಬೆಂಕಿ ಹಚ್ಚಲು ಸಂಘ ಪರಿವಾರದ ಕೆಲವು ಮಂದಿ ಹೇಗೆ ಕಾರಣರೋ ಅದೇ ರೀತಿ ಗೌರಿ ಲಂಕೇಶ್, ಸುರೇಶ್ ಭಟ್ ಕೂಡಾ ಕಾರಣರು.” ಎಂದು ಕಾಂಗ್ರೆಸ್ ಮುಖಂಡ, ಧಾರ್ಮಿಕ ದತ್ತಿ ಇಲಾಖೆಯ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಅಭಿಪ್ರಾಯಪಟ್ಟಿದ್ದಾರೆ. ಗೌರಿ ಲಂಕೇಶ್ ಕರ್ನಾಟಕದ ಹಿರಿಯ ಪತ್ರಕರ್ತೆ ಹಾಗು ಕೋಮುವಾದ ವಿರೋಧಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಸಾಮಾಜಿಕ ಹೋರಾಟಗಾರ್ತಿ. ಆರೆಸ್ಸೆಸ್

ಕರಾವಳಿಯಲ್ಲಿ ಬೆಂಕಿ‌ ಹಚ್ಚಲು RSS ನಂತೆ ಸುರೇಶ್ ಭಟ್, ಗೌರಿ ಲಂಕೇಶ್ ಕೂಡಾ ಕಾರಣ‌ – ಲಕ್ಷ್ಮೀಶ ಗಬ್ಲಡ್ಕ Read More »

ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ| ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಭಾರಿ ಮಳೆಯಿಂದಾಗಿ ಪ್ರಮುಖ ರಸ್ತೆ ಸಂಪರ್ಕಗಳು ಕಡಿತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ. ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ಇಂದು ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಜುಲೈ 1ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ, ಜುಲೈ 2ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ

ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ| ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ Read More »

ಜು.1ರಿಂದ ತೈಲ ಮಾರಾಟದ ಮೇಲಿನ ಎಲ್ಲಾ ನಿರ್ಬಂಧ ತೆರವು

ಸಮಗ್ರ ನ್ಯೂಸ್: ವಾಹನ ಸವಾರರು ಮತ್ತು ವಾಣಿಜ್ಯ ಗ್ರಾಹಕರಿಗೆ ನಿರಾಳ ಸುದ್ದಿ ಸಿಕ್ಕಿದೆ. ದೇಶದಲ್ಲಿ ಇಂಧನ ಪೂರೈಕೆ ವ್ಯವಸ್ಥೆಯು ಸಂಪೂರ್ಣವಾಗಿ ಸುಧಾರಿಸಿರುವ ಹಿನ್ನೆಲೆಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿದ್ದ ಎಲ್ಲ ರದ್ದತಿ ಹಾಗೂ ನಿರ್ಬಂಧಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹೊಸ ಆದೇಶವು ಜುಲೈ 1 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಮಧ್ಯಪ್ರಾಚ್ಯದಲ್ಲಿ ಇತ್ತೀಚೆಗೆ ನಡೆದ ಸಂಘರ್ಷಗಳಿಂದಾಗಿ ಜಾಗತಿಕ ಸರಬರಾಜು ವ್ಯವಸ್ಥೆಯಲ್ಲಿ ಏರುಪೇರಾಗಿತ್ತು. ಇದರಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಇಂಧನ ಕೊರತೆ ಉಂಟಾಗದಂತೆ

ಜು.1ರಿಂದ ತೈಲ ಮಾರಾಟದ ಮೇಲಿನ ಎಲ್ಲಾ ನಿರ್ಬಂಧ ತೆರವು Read More »

ರಾಜ್ಯದಲ್ಲಿ ಇಂದಿನಿಂದ ಮತದಾರರ ಪಟ್ಟಿ ಪರಿಷ್ಕರಣೆ(SIR) ಆರಂಭ| ಬಿಎಲ್ಒ ಗಳು ಮನೆಗೆ ಬಂದಾಗ ಹೀಗೆ ಮಾಡಿ…

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದ್ದು, ಬಿಎಲ್‌ಒಗಳು (BLO) ಜುಲೈ 29ರವರೆಗೆ ರಾಜ್ಯದ ಮನೆ ಮನೆಗೆ ಭೇಟಿ ನೀಡಿ ಮತಪಟ್ಟಿ ಪರಿಷ್ಕರಣೆಯ ಎನ್ಯುಮರೇಷನ್ ಫಾರ್ಮ್ ನೀಡಲಿದ್ದಾರೆ. ಮತದಾರರು ಫಾರ್ಮ್ ಭರ್ತಿ ಮಾಡಿ, ಸಹಿ ಮಾಡಿ ಬಿಎಲ್‌ಒಗಳಿಗೆ ಮರಳಿ ನೀಡಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇಂದಿನಿಂದ ಜುಲೈ 29ರ ವರೆಗೆ ಮನೆ ಮನೆಗೆ ತೆರಳಿ ಬಿಎಲ್‌ಒಗಳು ಮತದಾರರಿಗೆ Enumeration form ಕೊಡಲಿದ್ದಾರೆ. ಎಲ್ಲಾ ಬಿಎಲ್‌ಒಗಳಿಗೆ

ರಾಜ್ಯದಲ್ಲಿ ಇಂದಿನಿಂದ ಮತದಾರರ ಪಟ್ಟಿ ಪರಿಷ್ಕರಣೆ(SIR) ಆರಂಭ| ಬಿಎಲ್ಒ ಗಳು ಮನೆಗೆ ಬಂದಾಗ ಹೀಗೆ ಮಾಡಿ… Read More »