Editor

ಪುತ್ತೂರು: 38ನೇ ನ್ಯಾಷನಲ್ ಗೇಮ್ಸ್ ಗೆ ಸೌಮ್ಯ ಪೂಜಾರಿ ಆಯ್ಕೆ

ಸಮಗ್ರ ನ್ಯೂಸ್: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರು ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ. ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ […]

ಪುತ್ತೂರು: 38ನೇ ನ್ಯಾಷನಲ್ ಗೇಮ್ಸ್ ಗೆ ಸೌಮ್ಯ ಪೂಜಾರಿ ಆಯ್ಕೆ Read More »

ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದ ವಿಮಾನ| 60 ಜನ ಸಾವನ್ನಪ್ಪಿರುವ ಶಂಕೆ

ಸಮಗ್ರ ನ್ಯೂಸ್: ಹೆಲಿಕಾಪ್ಟರ್ ಗೆ ಡಿಕ್ಕಿಯಾಗಿ ವಿಮಾನ ಪತನಗೊಂಡಿದ್ದು, 60ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಅಮೇರಿಕಾದಲ್ಲಿ‌ ನಡೆದಿದೆ. ರೊನಾಲ್ಡ್ ರೇಗನ್ ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪೊಟೊಮ್ಯಾಕ್ ನದಿಯಲ್ಲಿ ಅಮೆರಿಕನ್ ಏರ್ಲೈನ್ಸ್ ಪ್ರಯಾಣಿಕರ ವಿಮಾನವು ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದ ನಂತರ ಎರಡೂ ವಿಮಾನಗಳು ಗುರುವಾರ ಅಪಘಾತಕ್ಕೀಡಾಗಿವೆ. ವಿಮಾನದಲ್ಲಿ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ 64 ಜನರು ಇದ್ದರು ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗ ಹಲವಾರು ಅಗ್ನಿಶಾಮಕ ದೋಣಿಗಳು ಘಟನಾ ಸ್ಥಳದಲ್ಲಿವೆ ಎಂದು ವಾಷಿಂಗ್ಟನ್

ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದ ವಿಮಾನ| 60 ಜನ ಸಾವನ್ನಪ್ಪಿರುವ ಶಂಕೆ Read More »

ಕಲಬುರಗಿ: ಮೊಬೈಲ್ ಬೆಳಕಲ್ಲೇ ಹೆರಿಗೆ ಮಾಡಿಸಿದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ| ಖರ್ಗೆ ಸಾಹೇಬ್ರೇ ಇದೇನಾ ನಿಮ್ಮೂರ ಅಭಿವೃದ್ಧಿ!?

ಸಮಗ್ರ ನ್ಯೂಸ್: ಹಲವು ಸ್ವರೂಪದ ಅಪವಾದ ಹಾಗೂ ರಗಳೆಗಳಿಂದಲೇ ಸುದ್ದಿಗೆ ಗ್ರಾಸವಾಗುತ್ತಿರುವ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಮಂಗಳವಾರ ಇಡೀ ರಾತ್ರಿ ಏಕಾಏಕಿ ವಿದ್ಯುತ್ ಕೈ ಕೊಟ್ಟ ಪರಿಣಾಮ ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಕಾರ್ಯನಿರ್ವಹಿಸಿದ ಘಟನೆ ನಡೆದಿದೆ. ಗುಲ್ಬರ್ಗ ಇನ್ಸ್ಟಿಟ್ಯೂಟ್‍ಆಫ್ ಮೆಡಿಕಲ್ ಸೈನ್ಸ್ (ಜಿಮ್ಸ್) ಆಸ್ಪತ್ರೆಯ ತಾಯಿ ಮಕ್ಕಳ ವಿಭಾಗದಲ್ಲಿ ವಿದ್ಯುತ್ ಕೈ ಕೊಟ್ಟಿದ್ದರಿಂದ ವಿಭಾಗದ ವೈದ್ಯರು ಹಾಗೂ ಸಿಬ್ಬಂದಿ ಕತ್ತಲಲ್ಲೇ ರಾತ್ರಿ ಪಾಳಿಯ ಚಟುವಟಿಕೆ ನಿರ್ವಹಿಸಬೇಕಾಯಿತು. ಈ ಮಧ್ಯೆ, ಸಾವಿರಾರು ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ

ಕಲಬುರಗಿ: ಮೊಬೈಲ್ ಬೆಳಕಲ್ಲೇ ಹೆರಿಗೆ ಮಾಡಿಸಿದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ| ಖರ್ಗೆ ಸಾಹೇಬ್ರೇ ಇದೇನಾ ನಿಮ್ಮೂರ ಅಭಿವೃದ್ಧಿ!? Read More »

ತಿರುವನಂತಪುರಂ ಅನಂತ ಪದ್ಮನಾಭ ಕ್ಷೇತ್ರದ ಪ್ರಧಾನ ಅರ್ಚಕರಾಗಿ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ

ಸಮಗ್ರ ನ್ಯೂಸ್: ದೇಶದ ಅತೀ ಶ್ರೀಮಂತ ದೇವಸ್ಥಾನ ಕೇರಳದ ತಿರುವನಂತಪುರಂನ ಅನಂತಪದ್ಮನಾಭ ಕ್ಷೇತ್ರ ಯಾರಿಗೆ ಗೊತ್ತಿಲ್ಲ ಹೇಳಿ. ಈ ದೇವಾಲಯದ ವಿಶೇಷತೆ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಈ ಕ್ಷೇತ್ರದ ಪ್ರಧಾನ ಅರ್ಚಕರಾಗಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕಗೊಂಡಿದ್ದಾರೆ. ಬೆಳ್ತಂಗಡಿಯ ಕೊಕ್ಕಡದ ದಿ. ಸುಬ್ರಾಯ‌ ತೊಡ್ತಿಲ್ಲಾಯರ‌ ಮಗನಾಗಿರುವ ಸತ್ಯನಾರಾಯಣ ತೋಡ್ತಿಲ್ಲಾಯ, ದೇವಸ್ಥಾನದಿಂದ ನೀಡಲಾಗುವ ಛತ್ರಿ ಮರ್ಯಾದೆ‌ ಸ್ವೀಕರಿಸುವ ಮಹಾ ಪ್ರಧಾನ ಅರ್ಚಕ‌ ಸ್ಥಾನವನ್ನು ಅಲಂಕರಿಸಲಿದ್ದಾರೆ. ಇನ್ನು ಇವರ ತಂದೆ ದಿ.

ತಿರುವನಂತಪುರಂ ಅನಂತ ಪದ್ಮನಾಭ ಕ್ಷೇತ್ರದ ಪ್ರಧಾನ ಅರ್ಚಕರಾಗಿ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ Read More »

ಮಂಗಳೂರು: ಪ್ರೇತ ಉಚ್ಛಾಟನೆಗಾಗಿ ರಸ್ತೆ ಸಂಚಾರ ಬಂದ್!? ಏನಿದು ಸ್ಪೆಷಲ್ ನ್ಯೂಸ್?

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಪ್ರೇತ ಉಚ್ಚಾಟನೆ ಹಿನ್ನೆಲೆ ರಸ್ತೆ ಸಂಚಾರ ಬಂದ್​ ಮಾಡಿರುವಂತಹ ಘಟನೆ ನಡೆದಿದೆ. ಕೊಟ್ಟಾರದ ಮಹಾದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ರಣಕಾಳಿ ಹಾಗೂ ಬ್ರಹ್ಮರಾಕ್ಷಸ ಅನ್ಯಪ್ರೇತ ಉಚ್ಚಾಟನೆ ಹಿನ್ನೆಲೆ ಕೊಟ್ಟಾರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮಾಡದಂತೆ ಬ್ಯಾನರ್ ಅಳವಡಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 3 ಗಂಟೆಯವರೆಗೆ ಜನರು ಓಡಾಡದಂತೆ ಮನವಿ ಮಾಡಲಾಗಿದೆ. ಸದ್ಯ ಪ್ರೇತ ಉಚ್ಚಾಟನೆ ಬ್ಯಾನರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂದು ಅಮವಾಸ್ಯೆ ರಾತ್ರಿ 12 ಗಂಟೆ

ಮಂಗಳೂರು: ಪ್ರೇತ ಉಚ್ಛಾಟನೆಗಾಗಿ ರಸ್ತೆ ಸಂಚಾರ ಬಂದ್!? ಏನಿದು ಸ್ಪೆಷಲ್ ನ್ಯೂಸ್? Read More »

ಮಹಾಕುಂಭ ಕಾಲ್ತುಳಿತ ಪ್ರಕರಣ| ಬೆಳಗಾವಿಯ ತಾಯಿ-ಮಗಳು ಸಾವು

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತರನ್ನು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50), ಮೇಘಾ ಹತ್ತರವಾಠ ಎಂದು ಗುರುತಿಸಲಾಗಿದೆ. ಮೃತ ಜ್ಯೋತಿ ಸಹೋದರ ಗುರುರಾಜ್ ಹುದ್ದಾರ ಈ ಕುರಿತು ಮಾಹಿತಿ ನೀಡಿದ್ದಾರೆ. ಮಹಾಕುಂಭ ಮೇಳದಲ್ಲಿ ಕಾಲ್ತುಳಿತದಲ್ಲಿ ಗಾಯಗೊಂಡ ಬಳಿಕ ಅವರನ್ನು ಇಂದು‌‌(ಜ.29) ಬೆಳಗ್ಗೆ ಪ್ರಯಾಗ್​ರಾಜ್​ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ –

ಮಹಾಕುಂಭ ಕಾಲ್ತುಳಿತ ಪ್ರಕರಣ| ಬೆಳಗಾವಿಯ ತಾಯಿ-ಮಗಳು ಸಾವು Read More »

ಪವಿತ್ರ ಸ್ನಾನ ರದ್ದಾಗಿಲ್ಲ; ವದಂತಿಗಳನ್ನು ನಂಬಬೇಡಿ| ಯುಪಿ ಸಿಎಂ ಯೋಗಿ‌ ಆದಿತ್ಯನಾಥ್ ಸ್ಪಷ್ಟನೆ

ಸಮಗ್ರ ನ್ಯೂಸ್: ಕಾಲ್ತುಳಿತ ಸಂಭವಿಸಿದ ಹಿನ್ನೆಲೆಯಲ್ಲಿ ಇಂದಿನ ಪವಿತ್ರ ಸ್ನಾನವನ್ನು ರದ್ದು ಮಾಡಿಲ್ಲ, ಘಟನೆ ಸಂಭವಿಸಿದ ಬಳಿಕ ತುಸು ಹೊತ್ತು ಸ್ಥಗಿತವಾಗಿತ್ತು, ಈಗ ಎಂದಿನಂತೆ ಮಹಾಕುಂಭಮೇಳ ನಡೆಯುತ್ತಿದೆ. ಕುಂಭಮೇಳದಲ್ಲಿ ಅವಘಡ ಸಂಭವಿಸಿದ ವದಂತಿಗಳನ್ನು ನಂಬಬೇಡಿ, ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಸಂಗಮದ ಎಲ್ಲ ಘಾಟ್‌ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ. ಯಾವುದೇ ವದಂತಿಗೆ ಕಿವಿಗೊಡಬೇಡಿ. ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗಿಲ್ಲ, ಜನರು ಅವಸರ ಮಾಡಲು ಹೋಗಿ ತುಸು ಹೊತ್ತು ಗದ್ದಲ ಉಂಟಾಯಿತು. ಮಹಾಕುಂಭ ಮೇಳದಲ್ಲೇ

ಪವಿತ್ರ ಸ್ನಾನ ರದ್ದಾಗಿಲ್ಲ; ವದಂತಿಗಳನ್ನು ನಂಬಬೇಡಿ| ಯುಪಿ ಸಿಎಂ ಯೋಗಿ‌ ಆದಿತ್ಯನಾಥ್ ಸ್ಪಷ್ಟನೆ Read More »

ಆಭರಣ ಪ್ರಿಯರಿಗೆ ಶಾಕ್| ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

ಸಮಗ್ರ ನ್ಯೂಸ್: ಚಿನ್ನ ಮಾರುಕಟ್ಟೆಯಲ್ಲಿ ಎರಡು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನ ಇಂದು ದಿಡೀರನೆ ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ ಯಥಾಸ್ಥಿತಿಯಲ್ಲಿ ಇದೆ. ಮತ್ತೆ ಚಿನ್ನ ತನ್ನ ಓಟವನ್ನ ಮುಂದುವರೆಸಿದೆ. ಬಹುದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ಮತ್ತೆ ನಿರಾಸೆಯಾಗಿದೆ. ಜಾಗತಿಕವಾಗಿ ಚಿನ್ನದ ಬೇಡಿಕೆ ಹೆಚ್ಛಾಗುತ್ತಿದ್ದು, ಈ ಹಿನ್ನೆಲೆ ಚಿನ್ನದ ದರ ಏರಿಕೆಯಾಗಿದೆ. ಯುಎಸ್‌ ಡಾಲರ್‌ ಏರಿಕೆ ಮತ್ತು ರೂಪಾಯಿ ಇಳಿಕೆಯಿಂದಾಗಿ ಚಿನ್ನದ ದರ ಏರಿಕೆಯಾಗ್ತಿದೆ. ಬಂಗಾರದ ಮಾರುಕಟ್ಟೆಯಲ್ಲಿ ಇಂದು ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ

ಆಭರಣ ಪ್ರಿಯರಿಗೆ ಶಾಕ್| ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ Read More »

100ನೇ ರಾಕೇಟ್ ಉಡಾಯಿಸಿ ಯಶಸ್ವಿ ಮೈಲಿಗಲ್ಲು ಸ್ಥಾಪಿಸಿದ ಇಸ್ರೋ

ಸಮಗ್ರ ನ್ಯೂಸ್: ತನ್ನ ನೂರನೇ ರಾಕೆಟ್‌ ಉಡಾವಣೆ ಮಾಡುವ ಮೂಲಕ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಭೂ, ವೈಮಾನಿಕ ಮತ್ತು ಸಮುದ್ರ ಸಂಚರಣೆ ಮತ್ತು ನಿಖರವಾದ ಕಷಿಗೆ ಸಹಾಯ ಮಾಡುವ ಉಪಗ್ರಹದ ಉಡಾವಣೆಯೊಂದಿಗೆ ಇಸ್ರೋ ಇಂದು ತನ್ನ 100 ನೇ ಉಡಾವಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಇಸ್ರೋ ಅಧ್ಯಕ್ಷರಾಗಿ ವಿ ನಾರಾಯಣನ್‌ ಅವರು ಅಧಿಕಾರ ವಹಿಸಿಕೊಂಡ ನಂತರ ನಡೆಯುತ್ತಿರುವ 100ನೇ ಉಡಾವಣೆ ಯಶಸ್ವಿಯಾಗುತ್ತಿದ್ದಂತೆ ಸಹ ವಿಜ್ಞಾನಿಗಳು ಅವರನ್ನು ಅಪ್ಪಿಕೊಂಡು ಅಭಿನಂದಿಸಿದರು. ಈ ವರ್ಷದ 2025 ರ

100ನೇ ರಾಕೇಟ್ ಉಡಾಯಿಸಿ ಯಶಸ್ವಿ ಮೈಲಿಗಲ್ಲು ಸ್ಥಾಪಿಸಿದ ಇಸ್ರೋ Read More »

ಅಂಕೋಲಾ: ನಿಲ್ಲಿಸಿದ್ದ ಕಾರೊಳಗೆ ಕೋಟಿ ರೂಪಾಯಿ ಪತ್ತೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ರಾಮನಗುಳಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಕ್ರೇಟಾ ಕಾರಿನಲ್ಲಿ 1 ಕೋಟಿ ರೂ. ಪತ್ತೆಯಾಗಿದೆ. ಜೊತೆಗೆ, ಕಾರಿನಲ್ಲಿ ಕೆಎ19 ಪಾಸಿಂಗ್​ನ ಮೂರು ನಂಬರ್ ಪ್ಲೇಟ್ ಪತ್ತೆಯಾಗಿವೆ. ಪತ್ತೆಯಾದ ಕಾರು ಮಂಗಳೂರು ಮೂಲದ್ದಾಗಿದೆ ಎಂಬ ಸಂಶಯ ವ್ಯಕ್ತವಾಗಿದೆ. ಹೆದ್ದಾರಿ ಪಕ್ಕ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕ್ರೇಟಾ ಕಾರನ್ನು ಪೊಲೀಸರು ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ. ಠಾಣೆಯಲ್ಲಿ ಕಾರ್ ಅನ್ನು ಪರಿಶೀಲಿಸಿದಾಗ ಲಾಕರ್ ಪತ್ತೆಯಾಗಿದೆ. ಲಾಕರ್ ತೆರೆದಾಗ,

ಅಂಕೋಲಾ: ನಿಲ್ಲಿಸಿದ್ದ ಕಾರೊಳಗೆ ಕೋಟಿ ರೂಪಾಯಿ ಪತ್ತೆ Read More »