Editor

ವ್ಯರ್ಥವಾದ ವರುಣ್ ಚಕ್ರವರ್ತಿ ಹೋರಾಟ| ಇಂಗ್ಲೆಂಡ್ ವಿರುದ್ಧ ಮಕಾಡೆ ಮಲಗಿದ ಭಾರತ

ಸಮಗ್ರ ನ್ಯೂಸ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟೀಮ್ ಇಂಡಿಯಾ 26 ರನ್ ಅಂತರದ ಸೋಲಿಗೆ ಶರಣಾಗಿದೆ. ಆದರೂ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಬಳಗ ಗೆಲುವು ಸಾಧಿಸಿತ್ತು. ಮತ್ತೊಂದೆಡೆ ಹ್ಯಾಟ್ರಿಕ್ ಸೋಲನ್ನು ತಪ್ಪಿಸಿರುವ ಆಂಗ್ಲರ ಪಡೆ ಸರಣಿಯನ್ನು ಜೀವಂತವಾಗಿರಿಸಿಕೊಂಡಿತು. ಇಂಗ್ಲೆಂಡ್ ಒಡ್ಡಿದ 172 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಒಂಬತ್ತು ವಿಕೆಟ್ ನಷ್ಟಕ್ಕೆ 145 ರನ್ […]

ವ್ಯರ್ಥವಾದ ವರುಣ್ ಚಕ್ರವರ್ತಿ ಹೋರಾಟ| ಇಂಗ್ಲೆಂಡ್ ವಿರುದ್ಧ ಮಕಾಡೆ ಮಲಗಿದ ಭಾರತ Read More »

ಮಹಾ ಕುಂಭದಲ್ಲಿ ಕಾಲ್ತುಳಿತ| ಸಾವಿನ ಸಂಖ್ಯೆ ‌ಮತ್ತಷ್ಟು ಏರಿಕೆ| ಇಂದಿನ ಅಮೃತ ಸ್ನಾನ ಮುಂದೂಡಿಕೆ

ಸಮಗ್ರ ನ್ಯೂಸ್: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂದಿನ ಅಮೃತ ಸ್ನಾನವನ್ನು ರದ್ದು ಮಾಡಲಾಗಿದೆ ಎಂದು ಅಖಾಡ ಪರಿಷತ್ ತಿಳಿಸಿದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ ಉಂಟಾಗಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 13 ಅಖಾಡಗಳಿಂದ ಇಂದಿನ ಪುಣ್ಯಸ್ನಾನ ಮುಂದೂಡಿಕೆ ಮಾಡಲಾಗಿದ್ದು, ವಸಂತಿ ಪಂಚಮಿಯಂದು

ಮಹಾ ಕುಂಭದಲ್ಲಿ ಕಾಲ್ತುಳಿತ| ಸಾವಿನ ಸಂಖ್ಯೆ ‌ಮತ್ತಷ್ಟು ಏರಿಕೆ| ಇಂದಿನ ಅಮೃತ ಸ್ನಾನ ಮುಂದೂಡಿಕೆ Read More »

ಹವಾಮಾನ ವರದಿ| ಫೆ.2 ರಿಂದ ರಾಜ್ಯದ ಕರಾವಳಿ, ಒಳನಾಡಿನಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಕಡೆ ಫೆಬ್ರವರಿ 2ರಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿಯಾಗಿದ್ದು, ರಾಜ್ಯದಲ್ಲಿ ಫೆಬ್ರವರಿ 2ರಿಂದ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಬೆಳಗಾವಿಯಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಕೆಲವು ಭಾಗಗಳಲ್ಲಿ ಫೆಬ್ರವರಿ

ಹವಾಮಾನ ವರದಿ| ಫೆ.2 ರಿಂದ ರಾಜ್ಯದ ಕರಾವಳಿ, ಒಳನಾಡಿನಲ್ಲಿ ಮಳೆ ಸಾಧ್ಯತೆ Read More »

ಮಹಾಕುಂಭಮೇಳದಲ್ಲಿ‌ ಘೋರ ದುರಂತ| ಕಾಲ್ತುಳಿತಕ್ಕೆ ಸಿಲುಕಿ 15 ಭಕ್ತರು ಸಾವು

ಸಮಗ್ರ ನ್ಯೂಸ್: ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆಯಾದ ಮಹಾ ಕುಂಭ ಮೇಳದಲ್ಲಿ ಬುಧವಾರ (ಜ. 29) ಕಾಲ್ತುಳಿತವು ಅನೇಕ ಸಾವುನೋವುಗಳಿಗೆ ಕಾರಣವಾಗಿದೆ ಎಂದು ಪ್ರಯಾಗ್ ರಾಜ್ ನ ಘಟನಾ ಸ್ಥಳದಲ್ಲಿದ್ದ ಛಾಯಾಗ್ರಾಹಕನನ್ನು ಉಲ್ಲೇಖಿಸಿ ಎಎಫ್ ಭಿ ಮಾಧ್ಯಮ ವರದಿ ಮಾಡಿದೆ. “ಈವರೆಗೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಾಧ್ಯಮಗಳೊಂದಿಗೆ ಮಾತನಾಡಲು ಅಧಿಕಾರವಿಲ್ಲದ ಕಾರಣ ಅನಾಮಧೇಯತೆಯ ಷರತ್ತಿನ ಮೇಲೆ ಮಾತನಾಡಿದ ವೈದ್ಯರು ಹೇಳಿದರು. ರಕ್ಷಕರು ಮತ್ತು ಆರಾಧಕರು ಘಟನಾ ಸ್ಥಳದಿಂದ ಸಂತ್ರಸ್ತರನ್ನು ಸ್ಥಳಾಂತರಿಸುತ್ತಿರುವುದು

ಮಹಾಕುಂಭಮೇಳದಲ್ಲಿ‌ ಘೋರ ದುರಂತ| ಕಾಲ್ತುಳಿತಕ್ಕೆ ಸಿಲುಕಿ 15 ಭಕ್ತರು ಸಾವು Read More »

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌/ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ

ಸಮಗ್ರ ನ್ಯೂಸ್‌: ರಾಜಧಾನಿ ಬೆಂಗಳೂರಿನ ಜೀವನಾಡಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಹೊರ ಬಿದ್ದಿದ್ದು, ಸದ್ಯಕ್ಕೆ ಟಿಕೆಟ್‌ ದರಗಳನ್ನು ಏರಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ನಮ್ಮ ಮೆಟ್ರೋದ ಪ್ರಯಾಣ ದರಗಳು ಹೊಸ ವರ್ಷದಿಂದ ಏರಿಕೆಯಾಗಲಿವೆ ಎಂದು ಹೇಳಲಾಗಿತ್ತು. ಟಿಕೆಟ್‌ ದರ ಹೆಚ್ಚಳದ ಕುರಿತು ರಚಿಸಲಾಗಿದ್ದ ಸಮಿತಿ ಈ ಬಗ್ಗೆ ಸೂಚನೆ ನೀಡಿತ್ತು. ಇದೀಗ ಕೇಂದ್ರ ಸರ್ಕಾರ ಟಿಕೆಟ್‌ ಬೆಲೆ ಏರಿಕೆ ನಿರ್ಧಾರಕ್ಕೆ ಬ್ರೇಕ್‌ ಹಾಕಿದೆ. ಹೀಗಾಗಿ ಈ ವರ್ಷ ನಮ್ಮ ಮೆಟ್ರೋ ಟಿಕೆಟ್‌ ಬೆಲೆ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌/ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ Read More »

ಐಸಿಸಿ ಚಾಂಪಿಯನ್ಸ್‌ ಟ್ರೋಫಿ/ ಇನ್ನೂ ಸಿದ್ಧಗೊಂಡಿಲ್ಲ ಕ್ರೀಡಾಂಗಣ/ ಜನವರಿ ೩೦ರ ಗಡುವು

ಸಮಗ್ರ ನ್ಯೂಸ್‌: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಆರಂಭಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಪಂದ್ಯಾವಳಿ ನಡೆಯುವ ಕರಾಚಿ, ಲಹೋರ್‌ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳ ನವೀಕರಣ ಕಾರ್ಯ ಸಂಪೂರ್ಣಗೊಂಡಿಲ್ಲ. ಕ್ರೀಡಾಂಗಣಗಳ ನವೀಕರಣ ಕೆಲಸ ಪೂರ್ತಿಗೊಳಿಸಲು ಐಸಿಸಿ, ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಜ.30ರ ಗುಡುವು ನೀಡಿತ್ತು. ಆದರೆ ಇನ್ನೂ ಕೆಲಸ ಬಾಕಿ ಇರುವ ಕಾರಣ ಕೆಲವು ಪಂದ್ಯವನ್ನು ದುಬೈಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆದರೆ ಪಾಕ್‌ ಕ್ರಿಕೆಟ್‌ ಮಂಡಳಿ ಮಾತ್ರ ಯಾವುದೇ

ಐಸಿಸಿ ಚಾಂಪಿಯನ್ಸ್‌ ಟ್ರೋಫಿ/ ಇನ್ನೂ ಸಿದ್ಧಗೊಂಡಿಲ್ಲ ಕ್ರೀಡಾಂಗಣ/ ಜನವರಿ ೩೦ರ ಗಡುವು Read More »

ಪ್ರೊ ಕಬಡ್ಡಿ ಲೀಗ್‌/ ಬೆಂಗಳೂರು ಬುಲ್ಸ್‌ಗೆ ನೂತನ ಕೋಚ್‌

ಸಮಗ್ರ ನ್ಯೂಸ್‌: ಪ್ರೊ ಕಬಡ್ಡಿ ಲೀಗ್‌ನ ಬೆಂಗಳೂರು ಬುಲ್ಸ್‌ ತಂಡಕ್ಕೆ ನೂತನ ಕೋಚ್‌ ಆಗಿ ಕನ್ನಡಿಗ ಬಿ.ಸಿ ರಮೇಶ್‌ ಆಯ್ಕೆಯಾಗಿದ್ದಾರೆ. ಆ ಮೂಲಕ ಕಳೆದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ನಲ್ಲಿ ನೀರಸ ಪ್ರದರ್ಶನ ತೋರಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದ್ದ ಬೆಂಗಳೂರು ಬುಲ್ಸ್‌ ತಂಡದ ಕೋಚ್‌ ರಣದೀರ್‌ ಸಿಂಗ್ ಸೆಹ್ರಾವತ್ ಅವರ ತಲೆದಂಡವಾಗಿದೆ. ಸತತ 11 ಸೀಸನ್‌ಗಳಿಂದ ರಣದೀರ್‌ಗೆ ಬುಲ್ಸ್‌ ತಂಡದೊಂದಿಗೆ ಇದ್ದ ನಂಟು ಇದೀಗ ಕೊನೆಗೊಂಡಿದೆ. ರಣಧೀರ್ ನಿರ್ಗಮನದ ಕುರಿತಾಗಿ ಫ್ರಾಂಚೈಸಿಯು ಇನ್‌ಸ್ಟಾಗ್ರಾಮ್‌ ಪೋಸ್ಟ್‌

ಪ್ರೊ ಕಬಡ್ಡಿ ಲೀಗ್‌/ ಬೆಂಗಳೂರು ಬುಲ್ಸ್‌ಗೆ ನೂತನ ಕೋಚ್‌ Read More »

ಹಂಪಿ ಉತ್ಸವ ೨೦೨೫/ ಲಾಂಛನ ಬಿಡುಗಡೆ

ಸಮಗ್ರ ನ್ಯೂಸ್‌: ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ 2025ರ ಹಂಪಿ ಉತ್ಸವದ ಲಾಂಛನವನ್ನು ವಿಜಯನಗರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಬಿದುಗಡೆಗೊಳಿಸಿದರು. ಫೆ. 28, ಮಾ. 1, 2ರಂದು 3 ದಿನಗಳ ಕಾಲ ಹಂಪಿ ಉತ್ಸವ ನಡೆಯಲಿದ್ದು, ಕಳೆದ ಬಾರಿಗಿಂತಲೂ ಈ ಬಾರಿ ಇನ್ನಷ್ಟು ಅದ್ದೂರಿಯಾಗಿ ಮಾಡಲು ಜಿಲ್ಲಾಡಳಿತ ಸಿದ್ದತೆ ಮಾಡಿಕೊಳ್ಳುತ್ತಿದೆ. ಹಂಪಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ಕೊಡಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ. ಆದರೆ ಉತ್ಸವದಲ್ಲಿ ಯಾವೆಲ್ಲ ಕಲಾವಿದರು

ಹಂಪಿ ಉತ್ಸವ ೨೦೨೫/ ಲಾಂಛನ ಬಿಡುಗಡೆ Read More »

ಶಿವಮೊಗ್ಗ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಸಾವು| ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ

ಸಮಗ್ರ ನ್ಯೂಸ್: ಶಿವಮೊಗ್ಗದ ಸಾಗರ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ನಗರ ಹೋಬಳಿಯ ದುಬಾರತಟ್ಟೆ ನಿವಾಸಿ ಅಶ್ವಿನಿ (29) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ನಗರ ಹೋಬಳಿಯ ದುಬಾರತಟ್ಟೆ ಗ್ರಾಮದ ಮಹಿಳೆ ಅಶ್ವಿನಿ ಜ.26 ರಂದು ಸಾಗರ ಉಪ ವಿಭಾಗ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವಪ್ಪಿದ್ದಾರೆ. ಮೃತ ಮಹಿಳೆ ಕುವೆಂಪು ವಿಶ್ವವಿದ್ಯಾಲಯದಲ್ಲಿ

ಶಿವಮೊಗ್ಗ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಸಾವು| ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ Read More »

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್| ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್| ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ Read More »