Editor

ಬಿಗ್ ಬಾಸ್ ಸೀಸನ್ 11 ಕಪ್ ಗೆದ್ದ ಹನುಮಂತ

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡದ 11ನೇ ಆವೃತ್ತಿಯ ವಿನ್ನರ್ ಆಗಿ ಹಳ್ಳಿಹೈದ ಹನುಮಂತ ಪ್ರಶಸ್ತಿ ಗೆದ್ದಿದ್ದಾನೆ. ಗ್ರ್ಯಾಂಡ್ ಫಿನಾಲೆಯಲ್ಲಿ ರಜತ್, ಹನುಮಂತ, ತ್ರಿವಿಕ್ರಮ್ ನಡುವೆ ಟಫ್ ಫೈಟ್ ಏರ್ಪಟ್ಟಿತ್ತು. ಕೊನೆಗೂ ವೀಕ್ಷಕರ ಅತೀ ಹೆಚ್ಚು ಓಟ್ ಗಳ ನೆರವು ಹಾಗೂ ಚಾಣಾಕ್ಷತನದ ಆಟದಿಂದ ಹನುಮಂತ ವಿನ್ನರ್ ಆಗಿದ್ದಾಗಿ ತಿಳಿದುಬಂದಿದೆ. ಎರಡನೇ ರನ್ನರ್ ಅಪ್ ಆಗಿ ತ್ರಿವಿಕ್ರಂ ಹೊರಹೊಮ್ಮಿದ್ದು, ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಧೂಳೆಬ್ಬಿಸಿದ್ದ ರಜತ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

ಬಿಗ್ ಬಾಸ್ ಸೀಸನ್ 11 ಕಪ್ ಗೆದ್ದ ಹನುಮಂತ Read More »

ಮಂಗಳೂರು: ಜಿಲ್ಲೆಯಲ್ಲಿ ಪತ್ತೆಯಾಯ್ತು ಮೊದಲ ಮಂಕಿಪಾಕ್ಸ್ ಪ್ರಕರಣ| ವಿಶೇಷ ನಿಗಾ ವಹಿಸಿದ ಜಿಲ್ಲಾಡಳಿತ

ಸಮಗ್ರ ನ್ಯೂಸ್: ಈ ವರ್ಷದ ರಾಜ್ಯದ ಮೊದಲ ಮಂಕಿ ಪಾಕ್ಸ್‌ ಪ್ರಕರಣ ದಕ್ಷಿಣ ಕನ್ನಡದಲ್ಲಿ ದೃಢಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷ ನಿಗಾ ವಹಿಸಲಾಗುತ್ತಿದೆ. ವಿಮಾನದ ಮೂಲಕ ಬರುವವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಮುನ್ನೆಚ್ಚರಿಕೆ ಉದ್ದೇಶಕ್ಕೆ ವೆನ್ಲಾಕ್‌ ಆಸ್ಪತ್ರೆಯಲ್ಲಿ 6 ಐಸಿಯು ಬೆಡ್‌ಗಳನ್ನು ಮೀಸಲಿಡಲಾಗಿದೆ. ಅವಶ್ಯವಿದ್ದರೆ ಮತ್ತಷ್ಟು ಬೆಡ್‌ಗಳ ಸಂಖ್ಯೆ ಹೆಚ್ಚಿಸಲು ಯೋಜನೆ ರೂಪಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ “ಮಂಕಿ ಪಾಕ್ಸ್‌ ಸೋಂಕು ಹರಡುವುದು ಕಡಿಮೆಯಾಗಿರುವ ಕಾರಣ ಆತಂಕಪಡುವ ಅಗತ್ಯವಿಲ್ಲ, ಜಾಗರೂಕತೆ ಅವಶ್ಯ.

ಮಂಗಳೂರು: ಜಿಲ್ಲೆಯಲ್ಲಿ ಪತ್ತೆಯಾಯ್ತು ಮೊದಲ ಮಂಕಿಪಾಕ್ಸ್ ಪ್ರಕರಣ| ವಿಶೇಷ ನಿಗಾ ವಹಿಸಿದ ಜಿಲ್ಲಾಡಳಿತ Read More »

ಸುಬ್ರಹ್ಮಣ್ಯ: ಚೈತನ್ಯ ಕೋಟೆಗೆ ಅವಳಿ ಚಿನ್ನದ ಪದಕ

ಸಮಗ್ರ ನ್ಯೂಸ್: ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಭರತನಾಟ್ಯ ಸ್ನಾತಕೋತ್ತರ ಪದವಿಯ ಅಂತಿಮ ಪರೀಕ್ಷೆಯಲ್ಲಿ ವಿದುಷಿ ಚೈತನ್ಯ ಕೋಟೆ ಅವರು ವಿ.ವಿಗೆ ಪ್ರಥಮ ರ‍್ಯಾಂಕ್‌ಗಳಿಸಿ ಅವಳಿ ಚಿನ್ನದ ಪದಕ ಪಡೆದಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ವಾರ್ಷಿಕ ಘಟಿಕೋತ್ಸವದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ನವದೆಹಲಿಯ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶ್ರೀನಿವಾಸ್ ವರಖೇಡಿ, ಸಂಗೀತ ವಿವಿ ಕುಲಪತಿ ಪ್ರೊ.ನಾಗೇಶ್ .ವಿ.ಬೆಟ್ಟಕೋಟೆ ಅವರಿಂದ ಅವರು ಪದಕಗಳನ್ನು ಸ್ವೀಕರಿಸಿದರು. ಚೈತನ್ಯ ಕೋಟೆ

ಸುಬ್ರಹ್ಮಣ್ಯ: ಚೈತನ್ಯ ಕೋಟೆಗೆ ಅವಳಿ ಚಿನ್ನದ ಪದಕ Read More »

ಗೀಸರ್ ಫಿಟ್ ಮಾಡಲು ಬಂದಿದ್ದ ವ್ಯಕ್ತಿಯಿಂದ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಬ್ಲ್ಯಾಕ್ ಮೇಲ್| ಖಾಸಗಿ ಫೋಟೋ ವೈರಲ್ ಮಾಡುತ್ತೇನೆಂದವಗೆ ಬಿತ್ತು ಬಿಸಿಬಿಸಿ ಕಜ್ಜಾಯ

ಸಮಗ್ರ ನ್ಯೂಸ್: ಗೀಸರ್ ಫಿಟ್ ಮಾಡಲೆಂದು ಬಂದಿದ್ದ ವ್ಯಕ್ತಿಯೋರ್ವ ರಹಸ್ಯ ಕ್ಯಾಮರಾ ಅಳವಡಿಸಿ, ಮಹಿಳೆಯ ಖಾಸಗಿ ಫೋಟೋಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಿರಾತಕನನ್ನು ಸ್ಥಳೀಯ ನಿವಾಸಿಗಳು ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿ.ಕೆ.ಪಾಳ್ಯದ ಮುರಳಿ ಎಂಬಾತ ಗೀಸರ್ ಫಿಟ್ ಮಾಡಲೆಂದು ಮನೆಗೆ ಬಂದಿದ್ದ. ಈ ವೇಳೆ ರಹಸ್ಯ ಕ್ಯಾಮರಾ ಅಳವಡಿಸಿ ಹೋಗಿದ್ದಾನೆ. ಮಹಿಳೆಗೆ ಕಳೆದ ಒಂದು ವರ್ಷದಿಂದ ಬ್ಲ್ಯಾಕ್ ಮೇಲ್ ಮಾಡಿ ತಾನು ಕರೆದಲ್ಲೆಲ ಬರಬೇಕು ಇಲ್ಲವಾದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

ಗೀಸರ್ ಫಿಟ್ ಮಾಡಲು ಬಂದಿದ್ದ ವ್ಯಕ್ತಿಯಿಂದ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಬ್ಲ್ಯಾಕ್ ಮೇಲ್| ಖಾಸಗಿ ಫೋಟೋ ವೈರಲ್ ಮಾಡುತ್ತೇನೆಂದವಗೆ ಬಿತ್ತು ಬಿಸಿಬಿಸಿ ಕಜ್ಜಾಯ Read More »

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಅಪರಾಹ್ನ ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ Read More »

ವಿವಿಧತೆಯಲ್ಲಿ ಏಕತೆ/ ಗಣರಾಜ್ಯೋತ್ಸವಕ್ಕೆ ಗೂಗಲ್‌ನ ವಿಶೇಷ ಡೂಡಲ್‌

ಸಮಗ್ರ ನ್ಯೂಸ್‌: ಭಾರತದ ಶ್ರೀಮಂತ ಜೀವವೈವಿಧ್ಯವನ್ನು ಪ್ರದರ್ಶಿಸುವ ವಿಶೇಷ ಡೂಡಲ್‌ನ್ನು ಗೂಗಲ್ ಈ ಸಲದ ಗಣರಾಜ್ಯೋತ್ಸವದ ಪ್ರಯುಕ್ತ ರಚಿಸಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಡೂಡಲ್‌ನಲ್ಲಿ ಲಡಾಖಿ ಉಡುಪಿನಲ್ಲಿರುವ ಹಿಮ ಚಿರತೆ, ಧೋತಿ-ಕುರ್ತಾ ಧರಿಸಿರುವ ಹುಲಿ ಮತ್ತು ಭಾರತದ ವಿವಿಧ ಭಾಗಗಳಿಗೆ ಸಂಬಂಧಿಸಿದ ಇತರ ವನ್ಯಜೀವಿಗಳ ಚಿತ್ರಗಳನ್ನು ಒಳಗೊಂಡಿದೆ. ವೈವಿಧ್ಯಮಯ ಪ್ರಾಣಿಗಳು, ಸಸ್ಯಗಳು ಮತ್ತು ಪರಿಸರ ವ್ಯವಸ್ಥೆಗಳನ್ನು ಒಳಗೊಂಡಿರುವ ಭಾರತದ ಜೀವವೈವಿಧ್ಯಕ್ಕೆ ಇದು ಒಂದು ವಿಶಿಷ್ಟ ಉದಾಹರಣೆಯಾಗಿದೆ. ಗೂಗಲ್ ಡೂಡಲ್ ಮರುಭೂಮಿಗಳು, ಚೌಗು ಪ್ರದೇಶಗಳು, ಹುಲ್ಲುಗಾವಲುಗಳು, ಸರೋವರಗಳು ಮತ್ತು

ವಿವಿಧತೆಯಲ್ಲಿ ಏಕತೆ/ ಗಣರಾಜ್ಯೋತ್ಸವಕ್ಕೆ ಗೂಗಲ್‌ನ ವಿಶೇಷ ಡೂಡಲ್‌ Read More »

O+ ರಕ್ತವು ಇತರ ರಕ್ತ ಗುಂಪಿಗಿಂತ ವಿಶೇಷವಾದದ್ದು|ದೈಹಿಕ, ಮಾನಸಿಕ ಬಲಿಷ್ಠರು|ಸಮಾಜಪ್ರಿಯರು

ಸಮಗ್ರ ನ್ಯೂಸ್: O+ ರಕ್ತದ ಗುಂಪು ಹೊಂದಿರುವ ಜನರು ಹುಟ್ಟಿನಿಂದಲೇ ತುಂಬಾ ವಿಶೇಷವಾಗಿದ್ದು, ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿರುತ್ತಾರೆ. ಇವರ ಗುಣಲಕ್ಷಣಗಳು ಇತರರಿಂದ ಪ್ರತ್ಯೇಕವಾಗಿರಿಸುತ್ತವೆ.  ಇವರು ಸಮಾಜದಲ್ಲಿ ಅನೇಕರಿಂದ ಗೌರವಿಸಲ್ಪಡುತ್ತಾರೆ. ಇತರ ರಕ್ತದ ಗುಂಪುಗಳಿಗೆ ಹೋಲಿಸಿದರೆ, ಅವರು ಹೃದಯಾಘಾತ, ಕ್ಯಾನ್ಸರ್ ಮತ್ತು ಮಲೇರಿಯಾದಂತಹ ಕಾಯಿಲೆಗಳಿಂದ ಸೋಂಕಿಗೆ ಒಳಗಾಗುವ ಸಾಧ್ಯತೆ ಕಡಿಮೆ. ಒತ್ತಡವನ್ನು ನಿಭಾಯಿಸುವ ಸಾಮರ್ಥ್ಯ.! O+ ರಕ್ತ ಹೊಂದಿರುವವರ ದೇಹದಲ್ಲಿ ಒತ್ತಡದ ಹಾರ್ಮೋನ್ ಕಾರ್ಟಿಸೋಲ್ ಕಡಿಮೆ ಮಟ್ಟವನ್ನು ಹೊಂದಿರುತ್ತದೆ. ಇದು ಒತ್ತಡವನ್ನು ಸುಲಭವಾಗಿ ನಿಭಾಯಿಸಲು ಮತ್ತು ಮುಂದುವರಿಯಲು

O+ ರಕ್ತವು ಇತರ ರಕ್ತ ಗುಂಪಿಗಿಂತ ವಿಶೇಷವಾದದ್ದು|ದೈಹಿಕ, ಮಾನಸಿಕ ಬಲಿಷ್ಠರು|ಸಮಾಜಪ್ರಿಯರು Read More »

ಮತ್ತೆ ಮುನ್ನಲೆಗೆ ಬಂದ ಸೌತಡ್ಕ ದೇಗುಲದ ಗಂಟೆ ಹರಾಜು ವಿವಾದ|ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಿಂದ ಪತ್ರಿಕಾಗೋಷ್ಠಿ

ಸಮಗ್ರ ನ್ಯೂಸ್: ಇತ್ತೀಚೆಗೆ ರಚನೆಗೊಂಡಿರುವ “ಸೌತಡ್ಕ ಸಂರಕ್ಷಣಾ ವೇದಿಕೆ” ಎಂಬ ಹೆಸರಿನಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಇತರ 4 ಮಂದಿ ಸದಸ್ಯರು ನೂತನ ವ್ಯವಸ್ಥಾಪನಾ ಸಮಿತಿಗೆ ಚುನಾವಣೆಗಾಗಿ ಅರ್ಜಿ ಸಲ್ಲಿಸಿರುವ ಬಗ್ಗೆ ಪತ್ರಿಕಾ ವರದಿಯ ಮಾಹಿತಿ ಪಡೆದುಕೊಂಡಿದ್ದು, ಅವರನ್ನು ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ಮರು ಆಯ್ಕೆ ಮಾಡಬಾರದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಧ್ಯಕ್ಷ ಮತ್ತು ದತ್ತಿ ಇಲಾಖೆ ಸಚಿವರು, ಆಯುಕ್ತರು ಹಾಗೂ 8 ಮಂದಿ ರಾಜ್ಯ

ಮತ್ತೆ ಮುನ್ನಲೆಗೆ ಬಂದ ಸೌತಡ್ಕ ದೇಗುಲದ ಗಂಟೆ ಹರಾಜು ವಿವಾದ|ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಿಂದ ಪತ್ರಿಕಾಗೋಷ್ಠಿ Read More »

ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಂಕಿತನ ಮಾಹಿತಿಗೆ ಮನವಿ

ಸಮಗ್ರ ನ್ಯೂಸ್: ಬಾಲಕಿಯ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಂಕಿತ ಆರೋಪಿಯ ಫೋಟೋ ಸಿಸಿ‌ ಕ್ಯಾಮರಾದಲ್ಲಿ ದಾಖಲಾಗಿದ್ದು ಈತನ ಬಗ್ಗೆ ಸಾರ್ವಜನಿಕರು ಯಾವುದೇ ಮಾಹಿತಿಯಿದ್ದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಕಂಟ್ರೋಲ್ ರೂಮ್ : 9480805400ಪೊಲೀಸ್ ನಿರೀಕ್ಷಕರು, ಮಹಿಳಾ ಠಾಣೆ :9480805430ಮಹಿಳಾ ಠಾಣೆ :08202525599ಪೊಲೀಸ್ ಉಪನಿರೀಕ್ಷಕರು, ಮಹಿಳಾ ಠಾಣೆ :8277988949

ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಂಕಿತನ ಮಾಹಿತಿಗೆ ಮನವಿ Read More »

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ‌ ಸಾವು

ಸಮಗ್ರ ನ್ಯೂಸ್; ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ದೂರು ಸಮೀಪದ ಕೂದುವಳ್ಳಿ‌ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕೃಷಿಕ ಕೆ. ಎಲ್. ಹೂವೇಗೌಡ ಇಂದು ಶನಿವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಅಸುನಿಗಿದ್ದಾರೆ. ಕಾಫಿ ತೋಟದ ಮರಗಸಿ ಮಾಡಿಸಲು ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ಹೊತ್ತು ಸಾಗುತ್ತಿದ್ದಾಗ, ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಚಾನಕ್ಕಾಗಿ ಏಣಿ ತಗುಲಿ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇತ್ತೀಚಿಗಷ್ಟೇ ಹೂವೆಗೌಡರ ಮಗ ಟ್ಯಾಕ್ಟರ್

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ‌ ಸಾವು Read More »