Editor

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ‌ ಸಾವು

ಸಮಗ್ರ ನ್ಯೂಸ್; ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ದೂರು ಸಮೀಪದ ಕೂದುವಳ್ಳಿ‌ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕೃಷಿಕ ಕೆ. ಎಲ್. ಹೂವೇಗೌಡ ಇಂದು ಶನಿವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಅಸುನಿಗಿದ್ದಾರೆ. ಕಾಫಿ ತೋಟದ ಮರಗಸಿ ಮಾಡಿಸಲು ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ಹೊತ್ತು ಸಾಗುತ್ತಿದ್ದಾಗ, ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಚಾನಕ್ಕಾಗಿ ಏಣಿ ತಗುಲಿ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇತ್ತೀಚಿಗಷ್ಟೇ ಹೂವೆಗೌಡರ ಮಗ ಟ್ಯಾಕ್ಟರ್ […]

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ‌ ಸಾವು Read More »

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದಿಂದ 2025ನೇ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. 2025ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಗೆ ಕನ್ನಡದ ಖ್ಯಾತ ಹಿರಿಯ ನಟ ಅನಂತ್ ನಾಗ್ ಅವರಿಗೆ ಸಂದಿದೆ. ಇಂದು ಪ್ರಕಟಿಸಿದ 2025ನೇ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮಭೂಷಣಕ್ಕೆ ಸ್ಯಾಂಡಲ್‌ವುಡ್‌ ಹಿರಿಯ ನಟ ಅನಂತ್‌ನಾಗ್‌ ಭಾಜನರಾಗಿದ್ದಾರೆ. ಒಟ್ಟೂ 19 ಸಾಧಕರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು 113 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಾರೆ. ಕಲಾ ವಿಭಾಗದಲ್ಲಿ ಹಿರಿಯ ನಟ ಅನಂತ್‌ನಾಗ್‌ ಗೌರವಕ್ಕೆ ಪಾತ್ರರಾಗಿದ್ದಾರೆ.

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ Read More »

ನಿರುದ್ಯೋಗಿಗಳಿಗೆ ಸುವರ್ಣಾವಕಾಶ| ಮೊಬೈಲ್ ಕ್ಯಾಂಟೀನ್ ತೆರೆಯಲು ಸಿಗಲಿದೆ ಐದು ಲಕ್ಷ ಪ್ರೋತ್ಸಾಹಧನ

ಸಮಗ್ರ ನ್ಯೂಸ್: ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ-04 ಮತ್ತು ಪರಿಶಿಷ್ಟ ಪಂಗಡ-04 ಅಭ್ಯರ್ಥಿಗಳು ಸೇರಿ ಒಟ್ಟು 08 ಅಭ್ಯರ್ಥಿಗಳ ಗುರಿ ನಿಗದಿಪಡಿಸಲಾಗಿದೆ. ವಿದ್ಯಾರ್ಹತೆ ಎಸ್‌ಎಸ್‌ಎಲ್ಸಿ ಉತ್ತೀರ್ಣರಾಗಿರಬೇಕು. ಮೊಬೈಲ್ ಕ್ಯಾಂಟೀನ್ ವಾಹನ

ನಿರುದ್ಯೋಗಿಗಳಿಗೆ ಸುವರ್ಣಾವಕಾಶ| ಮೊಬೈಲ್ ಕ್ಯಾಂಟೀನ್ ತೆರೆಯಲು ಸಿಗಲಿದೆ ಐದು ಲಕ್ಷ ಪ್ರೋತ್ಸಾಹಧನ Read More »

ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್

ಸಮಗ್ರ ನ್ಯೂಸ್: ಕನ್ನಡ ಬಿಗ್​ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಹಾಗೂ ಯುವಕರ ಗಲಾಟೆ ಪ್ರಕರಣದಲ್ಲಿ ಜಗದೀಶ್ ಅವರು ಅರೆಸ್ಟ್ ಆಗಿದ್ದಾರೆ. ಕೋಡಿಗೆಹಳ್ಳಿ ಪೊಲೀಸರು ವಕೀಲ ಜಗದೀಶ್ ಅವರನ್ನು ಬಂಧಿಸಿದ್ದಾರೆ. ವಕೀಲ ಜಗದೀಶ್ ಹಾಗೂ ಅವರ ಗನ್ ಮ್ಯಾನ್ ಅರೆಸ್ಟ್ ಆಗಿದ್ದಾರೆ. ಅಣ್ಣಮ್ಮ ಕೂರಿಸೋ ವಿಚಾರಕ್ಕೆ ಗಲಾಟೆ ನಡೆದಿತ್ತು.ಈ ವೇಳೆ ಜಗದೀಶ್ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆ ನಂತರ ಸಾಕಷ್ಟು ಗದ್ದಲ ಉಂಟಾಗಿತ್ತು. ಸದ್ಯ ಕೊಡಿಗೇಹಳ್ಳಿ ಪೊಲೀಸರು ಜಗದೀಶ್ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಕೊಡಿಗೇಹಳ್ಳಿ

ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್ Read More »

ಲೋ ಬಿಪಿಯಿಂದ ಕುಸಿದು ಬಿದ್ದು ಬಾಲಕ ಸಾವು

ಸಮಗ್ರ ನ್ಯೂಸ್: ಲೋ ಬಿಪಿಯಿಂದಾಗಿ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ತರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಮಹಾಂತೇಶ (13) ಲೋ ಬಿಪಿಯಿಂದ ಮೃತಪಟ್ಟ ಬಾಲಕ. ಅನಾರೋಗ್ಯದ ಕಾರಣ ಗುರುವಾರ ರಾತ್ರಿ ಮಹಾಂತೇಶ್ ನನ್ನು ಸಮೀಪದ ಹುಲ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಪರೀಕ್ಷೆ ನಡೆಸಿದಾಗ ಲೋ ಬಿಪಿ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ

ಲೋ ಬಿಪಿಯಿಂದ ಕುಸಿದು ಬಿದ್ದು ಬಾಲಕ ಸಾವು Read More »

ಚಾರ್ಮಾಡಿ ಘಾಟ್: ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ಭಾರೀ ಕಾಳ್ಗಿಚ್ಚು

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ರಸ್ತೆ ಬದಿ ಇದ್ದ ಬೆಂಕಿಯನ್ನಷ್ಟೇ ನಂದಿಸಲಾಗಿದ್ದು, ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡಿದರು. ಅಗ್ನಿಶಾಮಕ ಸಿಬ್ಬಂದಿ ಮಲ್ಲೇಶ್, ರಂಜಿತ್, ಮುತ್ತಪ್ಪ, ಅಶೋಕ್, ಮೋಹನ್‌ರಾಜ್ (ಚಾಲಕ) ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆ 10 ಕಿ.ಲೋ ಮೀಟರ್ ದೂರಕ್ಕೂ ಕಾಣಿಸುತ್ತಿದೆ. ಸ್ಥಳೀಯರಲ್ಲಿ ಆತಂಕ

ಚಾರ್ಮಾಡಿ ಘಾಟ್: ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ಭಾರೀ ಕಾಳ್ಗಿಚ್ಚು Read More »

ಇಂದು ಬಾನಂಗಳದಲ್ಲಿ ನಡೆಯಲಿದೆ ವಿಸ್ಮಯ| ಇದನ್ನು ಮಿಸ್ ಮಾಡ್ಕೊಂಡ್ರೆ ಜೀವಮಾನದಲ್ಲಿ ಮತ್ತೆ ನೋಡಕ್ಕಾಗೋದಿಲ್ಲ!! ಗಣರಾಜ್ಯೋತ್ಸವಕ್ಕೆ ಗ್ರಹಗಳ ಪರೇಡ್

ಸಮಗ್ರ ನ್ಯೂಸ್: ಹೊಸ ವರ್ಷದ ಪ್ರಾರಂಭದಲ್ಲಿಯೇ ಅಂದರೆ ಜನವರಿ 25ರಂದು ಬಹಳ ಅಪರೂಪವಾದ ಖಗೋಳ ಘಟನೆಯೊಂದು ನಡೆಯಲಿದೆ. ಈ ದಿನ ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಗ್ರಹಗಳು ಅಪರೂಪವಾದ ಸ್ಥಿತಿಯಲ್ಲಿ ತಮ್ಮ ಸಂಚಾರವನ್ನು ಮಾಡಲಿವೆ. ಈ ಅದ್ಭುತ ನೋಟವನ್ನು ನೀವು ಕೂಡ ಕಣ್ತುಂಬಿಕೊಳ್ಳಬಹುದು. ಬಾಹ್ಯಾಕಾಶ ಪ್ರಿಯರಿಗೆ ಇಂದು ಹಬ್ಬವಾಗಲಿದೆ ಹಾಗೂ ಶುಕ್ರ, ಮಂಗಳ, ಗುರು, ಶನಿ, ನೆಪ್ಚೂನ್ ಮತ್ತು ಯುರೇನಸ್ ಎಂಬ ಆರು ಗ್ರಹಗಳ ಮೆರವಣಿಗೆ ಜನವರಿ 21 ರಿಂದ ಭಾರತದಲ್ಲಿ ಗೋಚರಿಸುತ್ತದೆ. ಗ್ರಹಗಳ

ಇಂದು ಬಾನಂಗಳದಲ್ಲಿ ನಡೆಯಲಿದೆ ವಿಸ್ಮಯ| ಇದನ್ನು ಮಿಸ್ ಮಾಡ್ಕೊಂಡ್ರೆ ಜೀವಮಾನದಲ್ಲಿ ಮತ್ತೆ ನೋಡಕ್ಕಾಗೋದಿಲ್ಲ!! ಗಣರಾಜ್ಯೋತ್ಸವಕ್ಕೆ ಗ್ರಹಗಳ ಪರೇಡ್ Read More »

ರೇಣುಕಾಚಾರ್ಯ ಕೊಲೆ ಪ್ರಕರಣ| ದರ್ಶನ್ ಮತ್ತು‌ ಗ್ಯಾಂಗ್ ಗೆ ಸುಪ್ರೀಂ ನೋಟೀಸ್

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ನಿಂದ ನಟ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳು ರೆಗುಲರ್ ಪಡೆದುಕೊಂಡು ಬಿಡುಗಡೆಯಾಗಿದ್ದರು. ಆದರೆ ರಾಜ್ಯ ಸರ್ಕಾರ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ 7 ಆರೋಪಿಗಳ ವಿರುದ್ಧ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು ಇಂದು ಸುಪ್ರೀಂಕೋರ್ಟ್ ನಲ್ಲಿ ಇದೀಗ ಈ ಒಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆ ಆರಂಭವಾದಾಗ ಹೈ ಕೋರ್ಟ್

ರೇಣುಕಾಚಾರ್ಯ ಕೊಲೆ ಪ್ರಕರಣ| ದರ್ಶನ್ ಮತ್ತು‌ ಗ್ಯಾಂಗ್ ಗೆ ಸುಪ್ರೀಂ ನೋಟೀಸ್ Read More »

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ| ಇಂದು ಹುಟ್ಟುವ ಹೆಣ್ಣುಮಗುವಿಗೆ ಸಿಗಲಿದೆ ಸ್ಪೆಷಲ್ ಗಿಪ್ಟ್

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶುಕ್ರವಾರ(ಜ.24) ಜನಿಸುವ ಎಲ್ಲ ಹೆಣ್ಣು ಮಗುವಿಗೆ ವಿಶೇಷ ಉಡುಗೊರೆ ನೀಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಅನುಸಾರ ಇಲಾಖೆ ಈ ಅಭಿಯಾನ ಹಮ್ಮಿಕೊಂಡಿದೆ. ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚಳ ಹಾಗೂ ಹೆಣ್ಣು ಭ್ರೂಣ ಹತ್ಯೆ ತಡೆಯುವ ಜಾಗೃತಿ ಕಾರ್ಯಕ್ರಮದ ಭಾಗ ಇದಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ‘ಪಿಂಕ್ ಲೈಟ್’ ಬೆಳಗಲೂ ಸೂಚಿಸಲಾಗಿದೆ. ಶುಕ್ರವಾರ ಜನಿಸಿದ ಹೆಣ್ಣು ಮಗುವಿನ ಕುಟುಂಬಕ್ಕೆ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ| ಇಂದು ಹುಟ್ಟುವ ಹೆಣ್ಣುಮಗುವಿಗೆ ಸಿಗಲಿದೆ ಸ್ಪೆಷಲ್ ಗಿಪ್ಟ್ Read More »

ಉಪ್ಪಿನಂಗಡಿ: ಶ್ರೀರಾಮ ಶಾಲೆಯಲ್ಲಿ ಶ್ರೀರಾಮ, ಆಂಜನೇಯ ಮೂರ್ತಿ ಲೋಕಾರ್ಪಣೆ

ಸಮಗ್ರ ನ್ಯೂಸ್: ಭಾರತವು ವಿಶ್ವದ ನಾಯಕತ್ವವನ್ನು ವಹಿಸುವ ಹೊಸ್ತಿಲಲ್ಲಿದ್ದು, ದೇಶದ ಪ್ರತಿ ಮಗುವೂ ಮುಂದಿನ 25 ವರ್ಷಗಳಲ್ಲಿ ರಾಷ್ಟ್ರದ ಪ್ರಬಲ ಶಕ್ತಿಯಾಗಿ ಮೂಡಿಬರಬೇಕಾಗಿದೆ. ಈ ಸಂಬಂಧ ಮಕ್ಕಳನ್ನು ಭಯ ಮುಕ್ತಗೊಳಿಸಬೇಕು’ ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಹೇಳಿದರು. ಉಪ್ಪಿನಂಗಡಿಯ ವೇದ ಶಂಕರ ನಗರದ ಶ್ರೀರಾಮ ಶಾಲೆಯಲ್ಲಿ ಸ್ಥಾಪಿಸಲಾದ ಶ್ರೀರಾಮ ಮತ್ತು ಆಂಜನೇಯ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು.‌ ವೈದ್ಯ ಡಾ.ಕೆ.ಜಿ.ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಮುಂಬೈ

ಉಪ್ಪಿನಂಗಡಿ: ಶ್ರೀರಾಮ ಶಾಲೆಯಲ್ಲಿ ಶ್ರೀರಾಮ, ಆಂಜನೇಯ ಮೂರ್ತಿ ಲೋಕಾರ್ಪಣೆ Read More »